ಬ್ರೇಕಿಂಗ್ ನ್ಯೂಸ್
13-08-25 07:03 pm Bangalore Correspondent ಕರ್ನಾಟಕ
ಬೆಂಗಳೂರು, ಆ.13: ಧರ್ಮಸ್ಥಳ ಪ್ರಕರಣದ ಅನಾಮಿಕ ಯಾರು? ಅವರ ಹಿಂದೆ ಯಾರಿದ್ದಾರೆ ನೋಡಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಅನಾಮಿಕ ಹೇಳಿದ ಸ್ಥಳಗಳನ್ನು ಹುಡುಕಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ. ಭಯಾನಕ ಕೊಲೆಗಳು ಆಗಿದೆ ಎಂದು ಹೇಳ್ತಿದ್ರು. ಸರ್ಕಾರ ತೀರ್ಮಾನ ಮಾಡಿ ಎಸ್ಐಟಿ ರಚನೆ ಮಾಡಿದೆ. ಇವರ ಉದ್ದೇಶ ಏನು?. ಯಾವುದೇ ಸಾಕ್ಷಿ ಇಲ್ಲದೇ ವೈಭವೀಕರಣ ಏಕೆ ಮಾಡಿದ್ರು ಎಂಬುದರ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದರು.
ಜನರನ್ನು ಗಾಬರಿಗೊಳಿಸುವುದನ್ನು ಮಾಡಿದ್ರು, ಎಸ್ಐಟಿ ನಿಷ್ಪಕ್ಷಪಾತ ತನಿಖೆ ಮಾಡಿದ್ದಾರೆ. ಗೃಹ ಸಚಿವರು ಸದನದಲ್ಲಿ ಉತ್ತರ ಕೊಡ್ತಾರೆ. ಅಗೆತ ಮುಂದುವರಿಯಬೇಕಾ ಎಂಬುದರ ಬಗ್ಗೆ ನಾನು ಮಾತನಾಡಲ್ಲ. ಬಿಜೆಪಿಯವರು ಧರ್ಮಸ್ಥಳ ವಿಚಾರದಲ್ಲೂ ರಾಜಕೀಯ ಮಾಡಲು ಹೋಗ್ತಿದ್ದಾರೆ. ಬಿಜೆಪಿಯವರು ನ್ಯಾಯಯುತ ತನಿಖೆಗೆ ಸಹಕಾರ ನೀಡಲಿ. ಈ ವಿಚಾರದಲ್ಲಿ ಪೊಲಿಟಿಕಲ್ ಲಾಭ ತೆಗೆದುಕೊಳ್ಳೊದು ಬೇಡ. ಅಗೆತ ಮುಂದುವರಿಸುವ ಬಗ್ಗೆ ಸಿಎಂ, ಗೃಹ ಸಚಿವರು ನಿರ್ಧಾರ ಮಾಡ್ತಾರೆ ಎಂದರು.
ಇಲ್ಲಿಗೆ ಗುಂಡಿ ತೋಡುವ ಕೆಲಸ ಮುಗಿಯಲಿದೆ:
ಪ್ರಕರಣ ವಿಚಾರವಾಗಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಧರ್ಮಸ್ಥಳ ವಿಚಾರವಾಗಿ ಗೊಂದಲ ಇದ್ದಾಗಿಂದಲೂ ನೋಡಿದ್ದೇವೆ. ಅನಾಮಿಕ ಹೇಳಿದ ಕಡೆಗಳಲ್ಲಿ ಗುಂಡಿ ತೆರೆಯಲಾಗಿದೆ ಎಂದರು.
ಎಸ್ಐಟಿ ಮಧ್ಯಂತರ ವರದಿ ಕೊಡಲ್ಲ. ಸಂಪೂರ್ಣ ವರದಿ ಸಿಎಂ ಪಡೆಯುತ್ತಾರೆ. ಮತ್ತೆ ಗುಂಡಿ ತೋಡುವ ಪ್ರಮೇಯ ಇಲ್ಲ ಅನಿಸುತ್ತಿದೆ. ಇಲ್ಲಿಗೆ ಗುಂಡಿ ತೋಡುವ ಕೆಲಸ ಮುಗಿಯಲಿದೆ. ಬಿಜೆಪಿ ಹಿಂದುತ್ವದ ಬಗ್ಗೆ ಗೊಂದಲ ಮೂಡಿಸುತ್ತಿದೆ. ಬಿಜೆಪಿ ಮಾತ್ರವಲ್ಲ, ನಾವೂ ಹಿಂದೂಗಳ ಪರವಾಗಿದ್ದೇವೆ. ನಾವೂ ಪ್ರತೀ ದಿನ ಪೂಜೆ ಪುನಸ್ಕಾರ ಮಾಡ್ತೇವೆ ಎಂದು ತಿಳಿಸಿದರು.
Karnataka Minister Dinesh Gundu Rao has questioned the identity and motives of the “anonymous informant” in the Dharmasthala human remains case, asking who is behind them and why the matter was sensationalised without concrete evidence.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am