ಬ್ರೇಕಿಂಗ್ ನ್ಯೂಸ್
15-08-25 03:20 pm Bangalore Correspondent ಕರ್ನಾಟಕ
ಬೆಂಗಳೂರು, ಆ.15: ಆಡುಗೋಡಿಯ ಚೆನ್ನೇನಹಳ್ಳಿಯಲ್ಲಿ ಸಂಭವಿಸಿದ ಅನುಮಾನಾಸ್ಪದ ಸ್ಫೋಟದಿಂದ ಸುಮಾರು 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ಓರ್ವ ಬಾಲಕ ಸಾವನಪ್ಪಿದ್ದಾನೆ. ಮೃತ ಬಾಲಕನನ್ನು ಮುಬಾರಕ್ (8) ಎಂದು ಗುರುತಿಸಲಾಗಿದೆ. ತಿಮ್ಮರಾಜು ಎಂಬುವವರ ಮನೆಯಲ್ಲಿ ಸ್ಫೋಟ ಸಂಭವಿಸಿದ್ದು, ಆ ಮನೆ ಸಂಪೂರ್ಣ ಛಿದ್ರವಾಗಿದೆ. ಗಾಯಾಳುಗಳು ತೀವ್ರ ರಕ್ತಸ್ರಾವ ಹಾಗೂ ಸುಟ್ಟ ಗಾಯಗಳಿಂದ ನರಾಳಾಡುತ್ತಿರುವ ದೃಶ್ಯ ಸಹ ಕಂಡು ಬಂತು. ಗಾಯಾಳಯಗಳನ್ನು ಸಂಜಯ್ ಗಾಂಧಿ, ರಾಜೀವ್ ಗಾಂಧಿ ಆಸ್ಪತ್ರೆ ಸೇರಿದಂತೆ ಇತರೆ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಇದು ಸಿಲಿಂಡರ್ ಸ್ಫೋಟ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಬೆಂಗಳೂರು ಕಮಿಷನರ್ ಸೀಮಂತ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

5 ಲಕ್ಷ ಪರಿಹಾರ ಘೋಷಣೆ;
ಸ್ಫೋಟದಲ್ಲಿ ಹಲವು ಮನೆಗಳಿಗೆ ಹಾನಿಯಾಗಿದ್ದು, ಬಾಲಕ ಮುಬಾರಕ್ ಎಂಬಾತ ಸಾವನ್ನಪ್ಪಿದ್ದಾನೆ. ಇದೇ ವೇಳೆ ಮಾತಾಡಿದ ಸಿಎಂ, ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಗಾಯಾಳಗೊಂಡವರ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸುತ್ತೆ ;
ಮೇಲುನೋಟಕ್ಕೆ ಇದು ಸಿಲಿಂಡರ್ ಬ್ಲಾಸ್ಟ್ ಆಗಿದೆ ಎನ್ನಲಾಗ್ತಿದೆ. ಈ ಭಾಗದ ಮನೆಗಳಲ್ಲೇ ಬಿದ್ದಿವೆ. ಮನೆಗಳ ರಿಪೇರಿಗೆ ಸೂಚನೆ ನೀಡಲಾಗಿದೆ. ಕಸ್ತೂರಮ್ಮ ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದೆ ಎನ್ನಲಾಗ್ತಿದೆ. ಆಕೆಯನ್ನ ಆಕೆಯನ್ನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ನರಸಮ್ಮ ಎಂಬುವವರಿಗೂ ಚಿಕಿತ್ಸೆ ನೀಡಲಾಗ್ತಿದೆ. ಸದ್ಯ ಗಾಯಗೊಂಡ ಎಲ್ಲರಿಗೂ ಚಿಕಿತ್ಸೆ ನೀಡಲಾಗ್ತಿದೆ. ವೆಚ್ಚವನ್ನ ಸರ್ಕಾರವೇ ಭರಿಸಲಿದೆ ಎಂದು ಸಿಎಂ ತಿಳಿಸಿದ್ದಾರೆ.
A suspected explosion in Chennenahalli, Adugodi, on Independence Day has left an 8-year-old boy dead and damaged more than 10 houses. The deceased has been identified as Mubarak (8). The blast occurred at the house of one Thimmaraju, which was completely destroyed.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am