ಬ್ರೇಕಿಂಗ್ ನ್ಯೂಸ್
15-08-25 09:47 pm HK News Desk ಕರ್ನಾಟಕ
ಕಾರವಾರ, ಆ.15 : ವಿದೇಶಿಗರು ಭಾರತದ ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದು, ಕೆಲವರು ಇಲ್ಲಿಯೇ ಕೆಲವು ತಿಂಗಳ ಕಾಲ ನೆಲೆಸುವುದು, ಇಲ್ಲಿಯ ಸಂಸ್ಕೃತಿಯನ್ನು ಕಲಿತು ಪಾಲಿಸುವುದನ್ನು ಕೇಳಿದ್ದೇವೆ. ಇಂಟರ್ನ್ ಶಿಪ್ ಉದ್ದೇಶಕ್ಕಾಗಿ ಫ್ರಾನ್ಸ್ ನಿಂದ ಬಂದಿದ್ದ ವಿದೇಶಿಗರ ತಂಡವೊಂದು ಬೈಂದೂರಿನಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಶೌಚಾಲಯ ಕಟ್ಟಿಕೊಟ್ಟು ಸುದ್ದಿಯಾಗಿದ್ದಾರೆ.
ಫ್ರಾನ್ಸ್ ಮೂಲದ ಪ್ರಜೆಗಳು ಇಂಟರ್ನ್ಶಿಪ್ ಉದ್ದೇಶಕ್ಕಾಗಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕನ್ಯಾನ ಗ್ರಾಮದ ಕೂಡ್ಲು ಸರಕಾರಿ ಶಾಲೆಗೆ ಬಂದಿದ್ದಾರೆ. ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಮಾಡುತ್ತ ಪರಿಸರ ಸ್ವಚ್ಛತೆಯನ್ನು ಹೇಳಿಕೊಡುತ್ತಾ ಎರಡು ತಿಂಗಳ ಕಾಲ ಇಲ್ಲಿ ಕಳೆದಿದ್ದಾರೆ. ಕೊನೆಗೆ ಇಲ್ಲಿಂದ ತೆರಳುವ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಏನಾದರೂ ಮಾಡಿಕೊಡಬೇಕೆಂದು ಹೇಳಿ, ಅಲ್ಲಿಗೆ ಅಗತ್ಯವಾಗಿದ್ದ ಶೌಚಾಲಯವನ್ನು ಕೊಡುಗೆಯಾಗಿ ನೀಡಿದ್ದಾರೆ. ಅಲ್ಲದೆ, ಶೌಚಾಲಯ ಕಟ್ಟಡದ ನಿರ್ಮಾಣ ಕೆಲಸಕ್ಕೂ ಕೈಜೋಡಿಸಿದ್ದಾರೆ. ಸದ್ಯ ಇವರು ಮೇಸ್ತ್ರಿ ಕೆಲಸ ಮಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ವಿಡಿಯೋವನ್ನು elkaani ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಲಾಗಿದೆ. ಶೀರ್ಷಿಕೆಯಲ್ಲಿ ಫ್ರಾನ್ಸ್ ದೇಶದಿಂದ ಇಂಟರ್ನ್ಶಿಪ್ಗಾಗಿ ನಮ್ಮ ಊರಿಗೆ ಬಂದವರು. ಸುಮಾರು ಎರಡು ತಿಂಗಳ ಕಾಲ ಬೈಂದೂರು ವಲಯದ ಗ್ರಾಮೀಣ ಪ್ರದೇಶದ ಹಳ್ಳಿಗಾಡಿನಲ್ಲಿ ಇದ್ದರು. ಕೂಡ್ಲು ಸರಕಾರಿ ಶಾಲಾ ವಿದ್ಯಾರ್ಥಿಗಳ ಜೊತೆ ಆಟಪಾಠದಲ್ಲಿ ಭಾಗಿಯಾಗಿದ್ದರು. ಕೊನೆಯಲ್ಲಿ ವಿದ್ಯಾರ್ಥಿಗಳ ಅಗತ್ಯಕ್ಕೆ ಸ್ಪಂದಿಸಿದ್ದಾರೆ. ಮಕ್ಕಳಿಗೆ ಪಾಠ ಪ್ರವಚನ ಮಾಡಿದ ಈ ಫ್ರಾನ್ಸ್ ದೇಶದ ನಾಗರೀಕರು ಇಲ್ಲಿನ ಮಕ್ಕಳಿಗೆ ಅತೀ ಅಗತ್ಯವಾಗಿ ಬೇಕಿದ್ದ ಶೌಚಾಲಯವನ್ನು ಕೊಡುಗೆಯಾಗಿ ನೀಡಿದ್ದಾರೆ ಎಂದು ಬರೆಯಲಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am