ಬ್ರೇಕಿಂಗ್ ನ್ಯೂಸ್
15-08-25 09:47 pm HK News Desk ಕರ್ನಾಟಕ
ಕಾರವಾರ, ಆ.15 : ವಿದೇಶಿಗರು ಭಾರತದ ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದು, ಕೆಲವರು ಇಲ್ಲಿಯೇ ಕೆಲವು ತಿಂಗಳ ಕಾಲ ನೆಲೆಸುವುದು, ಇಲ್ಲಿಯ ಸಂಸ್ಕೃತಿಯನ್ನು ಕಲಿತು ಪಾಲಿಸುವುದನ್ನು ಕೇಳಿದ್ದೇವೆ. ಇಂಟರ್ನ್ ಶಿಪ್ ಉದ್ದೇಶಕ್ಕಾಗಿ ಫ್ರಾನ್ಸ್ ನಿಂದ ಬಂದಿದ್ದ ವಿದೇಶಿಗರ ತಂಡವೊಂದು ಬೈಂದೂರಿನಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಶೌಚಾಲಯ ಕಟ್ಟಿಕೊಟ್ಟು ಸುದ್ದಿಯಾಗಿದ್ದಾರೆ.
ಫ್ರಾನ್ಸ್ ಮೂಲದ ಪ್ರಜೆಗಳು ಇಂಟರ್ನ್ಶಿಪ್ ಉದ್ದೇಶಕ್ಕಾಗಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕನ್ಯಾನ ಗ್ರಾಮದ ಕೂಡ್ಲು ಸರಕಾರಿ ಶಾಲೆಗೆ ಬಂದಿದ್ದಾರೆ. ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಮಾಡುತ್ತ ಪರಿಸರ ಸ್ವಚ್ಛತೆಯನ್ನು ಹೇಳಿಕೊಡುತ್ತಾ ಎರಡು ತಿಂಗಳ ಕಾಲ ಇಲ್ಲಿ ಕಳೆದಿದ್ದಾರೆ. ಕೊನೆಗೆ ಇಲ್ಲಿಂದ ತೆರಳುವ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಏನಾದರೂ ಮಾಡಿಕೊಡಬೇಕೆಂದು ಹೇಳಿ, ಅಲ್ಲಿಗೆ ಅಗತ್ಯವಾಗಿದ್ದ ಶೌಚಾಲಯವನ್ನು ಕೊಡುಗೆಯಾಗಿ ನೀಡಿದ್ದಾರೆ. ಅಲ್ಲದೆ, ಶೌಚಾಲಯ ಕಟ್ಟಡದ ನಿರ್ಮಾಣ ಕೆಲಸಕ್ಕೂ ಕೈಜೋಡಿಸಿದ್ದಾರೆ. ಸದ್ಯ ಇವರು ಮೇಸ್ತ್ರಿ ಕೆಲಸ ಮಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ವಿಡಿಯೋವನ್ನು elkaani ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಲಾಗಿದೆ. ಶೀರ್ಷಿಕೆಯಲ್ಲಿ ಫ್ರಾನ್ಸ್ ದೇಶದಿಂದ ಇಂಟರ್ನ್ಶಿಪ್ಗಾಗಿ ನಮ್ಮ ಊರಿಗೆ ಬಂದವರು. ಸುಮಾರು ಎರಡು ತಿಂಗಳ ಕಾಲ ಬೈಂದೂರು ವಲಯದ ಗ್ರಾಮೀಣ ಪ್ರದೇಶದ ಹಳ್ಳಿಗಾಡಿನಲ್ಲಿ ಇದ್ದರು. ಕೂಡ್ಲು ಸರಕಾರಿ ಶಾಲಾ ವಿದ್ಯಾರ್ಥಿಗಳ ಜೊತೆ ಆಟಪಾಠದಲ್ಲಿ ಭಾಗಿಯಾಗಿದ್ದರು. ಕೊನೆಯಲ್ಲಿ ವಿದ್ಯಾರ್ಥಿಗಳ ಅಗತ್ಯಕ್ಕೆ ಸ್ಪಂದಿಸಿದ್ದಾರೆ. ಮಕ್ಕಳಿಗೆ ಪಾಠ ಪ್ರವಚನ ಮಾಡಿದ ಈ ಫ್ರಾನ್ಸ್ ದೇಶದ ನಾಗರೀಕರು ಇಲ್ಲಿನ ಮಕ್ಕಳಿಗೆ ಅತೀ ಅಗತ್ಯವಾಗಿ ಬೇಕಿದ್ದ ಶೌಚಾಲಯವನ್ನು ಕೊಡುಗೆಯಾಗಿ ನೀಡಿದ್ದಾರೆ ಎಂದು ಬರೆಯಲಾಗಿದೆ.
29-12-25 11:13 pm
Bangalore Correspondent
ಡ್ರಗ್ಸ್ ಫ್ಯಾಕ್ಟರಿ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳಿ...
29-12-25 07:24 pm
ವ್ಯಾಪಕ ಭ್ರಷ್ಟಾಚಾರ ; ಕೋಲಾರದಲ್ಲಿ 25 ಗ್ರಾಪಂ ವಿರು...
28-12-25 09:03 pm
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 11:03 pm
Mangalore Correspondent
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
30-12-25 12:42 pm
Mangalore Correspondent
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm