ಬ್ರೇಕಿಂಗ್ ನ್ಯೂಸ್
15-08-25 09:47 pm HK News Desk ಕರ್ನಾಟಕ
ಕಾರವಾರ, ಆ.15 : ವಿದೇಶಿಗರು ಭಾರತದ ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದು, ಕೆಲವರು ಇಲ್ಲಿಯೇ ಕೆಲವು ತಿಂಗಳ ಕಾಲ ನೆಲೆಸುವುದು, ಇಲ್ಲಿಯ ಸಂಸ್ಕೃತಿಯನ್ನು ಕಲಿತು ಪಾಲಿಸುವುದನ್ನು ಕೇಳಿದ್ದೇವೆ. ಇಂಟರ್ನ್ ಶಿಪ್ ಉದ್ದೇಶಕ್ಕಾಗಿ ಫ್ರಾನ್ಸ್ ನಿಂದ ಬಂದಿದ್ದ ವಿದೇಶಿಗರ ತಂಡವೊಂದು ಬೈಂದೂರಿನಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಶೌಚಾಲಯ ಕಟ್ಟಿಕೊಟ್ಟು ಸುದ್ದಿಯಾಗಿದ್ದಾರೆ.
ಫ್ರಾನ್ಸ್ ಮೂಲದ ಪ್ರಜೆಗಳು ಇಂಟರ್ನ್ಶಿಪ್ ಉದ್ದೇಶಕ್ಕಾಗಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕನ್ಯಾನ ಗ್ರಾಮದ ಕೂಡ್ಲು ಸರಕಾರಿ ಶಾಲೆಗೆ ಬಂದಿದ್ದಾರೆ. ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಮಾಡುತ್ತ ಪರಿಸರ ಸ್ವಚ್ಛತೆಯನ್ನು ಹೇಳಿಕೊಡುತ್ತಾ ಎರಡು ತಿಂಗಳ ಕಾಲ ಇಲ್ಲಿ ಕಳೆದಿದ್ದಾರೆ. ಕೊನೆಗೆ ಇಲ್ಲಿಂದ ತೆರಳುವ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಏನಾದರೂ ಮಾಡಿಕೊಡಬೇಕೆಂದು ಹೇಳಿ, ಅಲ್ಲಿಗೆ ಅಗತ್ಯವಾಗಿದ್ದ ಶೌಚಾಲಯವನ್ನು ಕೊಡುಗೆಯಾಗಿ ನೀಡಿದ್ದಾರೆ. ಅಲ್ಲದೆ, ಶೌಚಾಲಯ ಕಟ್ಟಡದ ನಿರ್ಮಾಣ ಕೆಲಸಕ್ಕೂ ಕೈಜೋಡಿಸಿದ್ದಾರೆ. ಸದ್ಯ ಇವರು ಮೇಸ್ತ್ರಿ ಕೆಲಸ ಮಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ವಿಡಿಯೋವನ್ನು elkaani ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಲಾಗಿದೆ. ಶೀರ್ಷಿಕೆಯಲ್ಲಿ ಫ್ರಾನ್ಸ್ ದೇಶದಿಂದ ಇಂಟರ್ನ್ಶಿಪ್ಗಾಗಿ ನಮ್ಮ ಊರಿಗೆ ಬಂದವರು. ಸುಮಾರು ಎರಡು ತಿಂಗಳ ಕಾಲ ಬೈಂದೂರು ವಲಯದ ಗ್ರಾಮೀಣ ಪ್ರದೇಶದ ಹಳ್ಳಿಗಾಡಿನಲ್ಲಿ ಇದ್ದರು. ಕೂಡ್ಲು ಸರಕಾರಿ ಶಾಲಾ ವಿದ್ಯಾರ್ಥಿಗಳ ಜೊತೆ ಆಟಪಾಠದಲ್ಲಿ ಭಾಗಿಯಾಗಿದ್ದರು. ಕೊನೆಯಲ್ಲಿ ವಿದ್ಯಾರ್ಥಿಗಳ ಅಗತ್ಯಕ್ಕೆ ಸ್ಪಂದಿಸಿದ್ದಾರೆ. ಮಕ್ಕಳಿಗೆ ಪಾಠ ಪ್ರವಚನ ಮಾಡಿದ ಈ ಫ್ರಾನ್ಸ್ ದೇಶದ ನಾಗರೀಕರು ಇಲ್ಲಿನ ಮಕ್ಕಳಿಗೆ ಅತೀ ಅಗತ್ಯವಾಗಿ ಬೇಕಿದ್ದ ಶೌಚಾಲಯವನ್ನು ಕೊಡುಗೆಯಾಗಿ ನೀಡಿದ್ದಾರೆ ಎಂದು ಬರೆಯಲಾಗಿದೆ.
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm