ಬ್ರೇಕಿಂಗ್ ನ್ಯೂಸ್
20-08-25 12:11 pm Bangalore Correspondent ಕರ್ನಾಟಕ
ಬೆಂಗಳೂರು, ಆ 20 : ಕಾಂಗ್ರೆಸ್ ಸರಕಾರದ ರಾಜ್ಯದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿಯಡಿ 500 ಕೋಟಿಗೂ ಹೆಚ್ಚುಬಾರಿ ಮಹಿಳೆಯರು ಬಸ್ ಸಂಚಾರ ಮಾಡಿರುವುದು 'ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್'ನಲ್ಲಿ ದಾಖಲಾಗಿ ಇತಿಹಾಸ ನಿರ್ಮಿಸಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡು ಹರ್ಷ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, “ಇಡೀ ನಾಡು ಹೆಮ್ಮೆ ಪಡುವ ಕ್ಷಣವಿದು. ನಮ್ಮ ಸರಕಾರದ ಶಕ್ತಿ ಯೋಜನೆಯು ಪ್ರತಿಷ್ಠಿತ 'ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್'ನಲ್ಲಿ ದಾಖಲಾಗಿದೆ. ಮಹಿಳಾ ಸಬಲೀಕರಣ ದೆಡೆಗಿನ ದಿಟ್ಟ ಹೆಜ್ಜೆಯಾದ ಶಕ್ತಿ ಯೋಜನೆ ಚಾಲನೆಗೊಂಡ ದಿನದಿಂದ ಅಂದರೆ ಜೂನ್ 11, 2023ರಿಂದ ಜುಲೈ 25, 2025ರ ಅವಧಿಯಲ್ಲಿ 504 ಕೋಟಿ 90 ಲಕ್ಷ ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಸ್ವಾವಲಂಬಿ ಬದುಕಿನೆಡೆಗೆ ಪ್ರಯಾಣಿಸುವ ಮೂಲಕ ಈ ಇತಿಹಾಸ ಸೃಷ್ಟಿಸಿದ್ದಾರೆ,'' ಎಂದು ಹೇಳಿದ್ದಾರೆ.
“ಈ ಸಾಧನೆಯ ಶ್ರೇಯ ಉದ್ಯೋಗ, ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮುಂತಾದ ಉದ್ದೇಶಗಳಿಗಾಗಿ ನಿತ್ಯ ಸಂಚರಿಸುವ ನಾಡಿನ ನನ್ನ ತಾಯಂದಿರು, ಅಕ್ಕ, ತಂಗಿಯರಿಗೆ ಸಲ್ಲಬೇಕು. ಔದ್ಯೋಗಿಕ ವಲಯದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಗಣನೀಯ ಪ್ರಮಾಣದಲ್ಲಿ ಏರಿಕೆ ಯಾಗಿದೆ. ಜತೆಗೆ ರಾಜ್ಯದ ತಲಾದಾಯವು ದೇಶದಲ್ಲೇ ನಂಬರ್ 1 ಸ್ಥಾನಕ್ಕೆ ತಲುಪಿದೆ. ಶಕ್ತಿ ಯೋಜನೆ ಸಾಮಾಜಿಕವಾಗಿ, ಶೈಕ್ಷಣಿಕ ವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲರನ್ನಾಗಿಸುತ್ತದೆ ಎಂಬ ನನ್ನ ನಂಬಿಕೆ ಈ ಮೂಲಕ ಹುಸಿ ಯಾಗಲಿಲ್ಲ. ನನಗಿದು ಅತ್ಯಂತ ಸಂತಸದ ಕ್ಷಣ. ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ, ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೂ ಅಭಿನಂದನೆಗಳು,'' ಎಂದು ಸಿಎಂ ತಿಳಿಸಿದ್ದಾರೆ.
Karnataka’s flagship guarantee scheme ‘Shakti’, which provides free bus travel for women, has achieved a historic milestone by entering the Golden Book of World Records. More than 500 crore free journeys have been made by women under this scheme, setting a global record.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm