ಬ್ರೇಕಿಂಗ್ ನ್ಯೂಸ್
20-08-25 12:11 pm Bangalore Correspondent ಕರ್ನಾಟಕ
ಬೆಂಗಳೂರು, ಆ 20 : ಕಾಂಗ್ರೆಸ್ ಸರಕಾರದ ರಾಜ್ಯದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿಯಡಿ 500 ಕೋಟಿಗೂ ಹೆಚ್ಚುಬಾರಿ ಮಹಿಳೆಯರು ಬಸ್ ಸಂಚಾರ ಮಾಡಿರುವುದು 'ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್'ನಲ್ಲಿ ದಾಖಲಾಗಿ ಇತಿಹಾಸ ನಿರ್ಮಿಸಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡು ಹರ್ಷ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, “ಇಡೀ ನಾಡು ಹೆಮ್ಮೆ ಪಡುವ ಕ್ಷಣವಿದು. ನಮ್ಮ ಸರಕಾರದ ಶಕ್ತಿ ಯೋಜನೆಯು ಪ್ರತಿಷ್ಠಿತ 'ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್'ನಲ್ಲಿ ದಾಖಲಾಗಿದೆ. ಮಹಿಳಾ ಸಬಲೀಕರಣ ದೆಡೆಗಿನ ದಿಟ್ಟ ಹೆಜ್ಜೆಯಾದ ಶಕ್ತಿ ಯೋಜನೆ ಚಾಲನೆಗೊಂಡ ದಿನದಿಂದ ಅಂದರೆ ಜೂನ್ 11, 2023ರಿಂದ ಜುಲೈ 25, 2025ರ ಅವಧಿಯಲ್ಲಿ 504 ಕೋಟಿ 90 ಲಕ್ಷ ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಸ್ವಾವಲಂಬಿ ಬದುಕಿನೆಡೆಗೆ ಪ್ರಯಾಣಿಸುವ ಮೂಲಕ ಈ ಇತಿಹಾಸ ಸೃಷ್ಟಿಸಿದ್ದಾರೆ,'' ಎಂದು ಹೇಳಿದ್ದಾರೆ.
“ಈ ಸಾಧನೆಯ ಶ್ರೇಯ ಉದ್ಯೋಗ, ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮುಂತಾದ ಉದ್ದೇಶಗಳಿಗಾಗಿ ನಿತ್ಯ ಸಂಚರಿಸುವ ನಾಡಿನ ನನ್ನ ತಾಯಂದಿರು, ಅಕ್ಕ, ತಂಗಿಯರಿಗೆ ಸಲ್ಲಬೇಕು. ಔದ್ಯೋಗಿಕ ವಲಯದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಗಣನೀಯ ಪ್ರಮಾಣದಲ್ಲಿ ಏರಿಕೆ ಯಾಗಿದೆ. ಜತೆಗೆ ರಾಜ್ಯದ ತಲಾದಾಯವು ದೇಶದಲ್ಲೇ ನಂಬರ್ 1 ಸ್ಥಾನಕ್ಕೆ ತಲುಪಿದೆ. ಶಕ್ತಿ ಯೋಜನೆ ಸಾಮಾಜಿಕವಾಗಿ, ಶೈಕ್ಷಣಿಕ ವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲರನ್ನಾಗಿಸುತ್ತದೆ ಎಂಬ ನನ್ನ ನಂಬಿಕೆ ಈ ಮೂಲಕ ಹುಸಿ ಯಾಗಲಿಲ್ಲ. ನನಗಿದು ಅತ್ಯಂತ ಸಂತಸದ ಕ್ಷಣ. ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ, ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೂ ಅಭಿನಂದನೆಗಳು,'' ಎಂದು ಸಿಎಂ ತಿಳಿಸಿದ್ದಾರೆ.
Karnataka’s flagship guarantee scheme ‘Shakti’, which provides free bus travel for women, has achieved a historic milestone by entering the Golden Book of World Records. More than 500 crore free journeys have been made by women under this scheme, setting a global record.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm