ಬ್ರೇಕಿಂಗ್ ನ್ಯೂಸ್
21-08-25 10:31 pm Bangalore Correspondent ಕರ್ನಾಟಕ
ಬೆಂಗಳೂರು, ಆ.21 : ಧರ್ಮಸ್ಥಳ ಅರಣ್ಯದೊಳಗೆ ಅತಿಕ್ರಮ ಪ್ರವೇಶ ಮಾಡಿ, ಅನುಮತಿ ಇಲ್ಲದೆ ಶವಗಳನ್ನು ಹೂತಿರುವುದು ಎಸ್ಐಟಿ ತನಿಖೆಯಿಂದ ಸಾಬೀತಾದರೆ, ಅರಣ್ಯ ಸಂರಕ್ಷಣಾ ಕಾಯಿದೆಯ ಅನ್ವಯ ಕ್ರಮ ಜರುಗಿಸಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲು ಅರಣ್ಯದಲ್ಲಿ ಯಾವುದೇ ಅರಣ್ಯೇತರ ಚಟುವಟಿಕೆ ನಡೆಸಲು ಅವಕಾಶ ಇಲ್ಲ. ಅಭಿವೃದ್ಧಿ ಕಾರ್ಯಗಳಿಗೆ ಅಥವಾ ಸಾರ್ವಜನಿಕ ಉದ್ದೇಶಕ್ಕೆ ಅರಣ್ಯ ಭೂಮಿ ಬಳಕೆ ಮಾಡಬೇಕಾದಲ್ಲಿ ನಿಯಮಾನುಸಾರ ತೀರುವಳಿ ಅನುಮತಿ(ಎಫ್ಸಿ) ಪಡೆಯಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು.
ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶವ ಸಂಸ್ಕಾರ ಮಾಡಿರುವುದು ಈಗ ನಡೆಯುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ತನಿಖೆಯಿಂದ ಸಾಬೀತಾದರೆ ನಿಯಮಾನುಸಾರ ಕಾನೂನು ರೀತಿಯಲ್ಲಿ ಕ್ರಮ ಆಗುತ್ತದೆ ಎಂದು ತಿಳಿಸಿದರು. ಏತನ್ಮಧ್ಯೆ ಸಚಿವ ಈಶ್ವರ್ ಖಂಡ್ರೆಯವರು ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮ ನಿಯಮಿತ (ಕೆ.ಎಸ್.ಎಫ್. ಐ.ಸಿ.)ದ ಇ-ಕಾಮರ್ಸ್ ಅಂತರ್ಜಾಲ ತಾಣಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಕಂಪನಿಗಳ ಕಾಯಿದೆ ಅಡಿ 1973ರಲ್ಲಿ ಸ್ಥಾಪನೆಯಾದ ಕೆಎಸ್ಎಫ್ಐಸಿ ಗುಣಮಟ್ಟದ ಪೀಠೋಪಕರಣ, ಬಾಗಿಲು, ಬಾಗಿಲವಾಡ, ಕಿಟಕಿ ಇತ್ಯಾದಿಗಳನ್ನು ಸಿದ್ಧಪಡಿಸಿ ಸರ್ಕಾರಿ ಕಟ್ಟಡ ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುವ ನಿಗಮ ಈಗ ಇಂದಿನ ಯುಗಮಾನದ ಅಗತ್ಯಕ್ಕೆ ಅನುಗುಣವಾಗಿ ಇ-ಕಾಮರ್ಸ್ ಅಂತರ್ಜಾಲ ತಾಣ ಸಿದ್ಧಪಡಿಸಿದ್ದು, ಇದನ್ನು ನಿಗಮದ ಅಧ್ಯಕ್ಷ ಹಾಗೂ ಶಾಸಕ ಗೋಪಾಲಕೃಷ್ಣ ಬೇಲೂರು ಅವರ ಸಮ್ಮುಖದಲ್ಲಿ ಉದ್ಘಾಟಿಸಲು ಹರ್ಷಿಸುತ್ತೇನೆ ಎಂದು ಹೇಳಿದರು.
Forest Minister Eshwar Khandre stated that if the Special Investigation Team (SIT) finds evidence of unauthorized burials inside the Dharmasthala reserve forest, strict legal action will be taken under the Forest Conservation Act.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm