ಬ್ರೇಕಿಂಗ್ ನ್ಯೂಸ್
21-08-25 10:31 pm Bangalore Correspondent ಕರ್ನಾಟಕ
ಬೆಂಗಳೂರು, ಆ.21 : ಧರ್ಮಸ್ಥಳ ಅರಣ್ಯದೊಳಗೆ ಅತಿಕ್ರಮ ಪ್ರವೇಶ ಮಾಡಿ, ಅನುಮತಿ ಇಲ್ಲದೆ ಶವಗಳನ್ನು ಹೂತಿರುವುದು ಎಸ್ಐಟಿ ತನಿಖೆಯಿಂದ ಸಾಬೀತಾದರೆ, ಅರಣ್ಯ ಸಂರಕ್ಷಣಾ ಕಾಯಿದೆಯ ಅನ್ವಯ ಕ್ರಮ ಜರುಗಿಸಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲು ಅರಣ್ಯದಲ್ಲಿ ಯಾವುದೇ ಅರಣ್ಯೇತರ ಚಟುವಟಿಕೆ ನಡೆಸಲು ಅವಕಾಶ ಇಲ್ಲ. ಅಭಿವೃದ್ಧಿ ಕಾರ್ಯಗಳಿಗೆ ಅಥವಾ ಸಾರ್ವಜನಿಕ ಉದ್ದೇಶಕ್ಕೆ ಅರಣ್ಯ ಭೂಮಿ ಬಳಕೆ ಮಾಡಬೇಕಾದಲ್ಲಿ ನಿಯಮಾನುಸಾರ ತೀರುವಳಿ ಅನುಮತಿ(ಎಫ್ಸಿ) ಪಡೆಯಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು.
ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶವ ಸಂಸ್ಕಾರ ಮಾಡಿರುವುದು ಈಗ ನಡೆಯುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ತನಿಖೆಯಿಂದ ಸಾಬೀತಾದರೆ ನಿಯಮಾನುಸಾರ ಕಾನೂನು ರೀತಿಯಲ್ಲಿ ಕ್ರಮ ಆಗುತ್ತದೆ ಎಂದು ತಿಳಿಸಿದರು. ಏತನ್ಮಧ್ಯೆ ಸಚಿವ ಈಶ್ವರ್ ಖಂಡ್ರೆಯವರು ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮ ನಿಯಮಿತ (ಕೆ.ಎಸ್.ಎಫ್. ಐ.ಸಿ.)ದ ಇ-ಕಾಮರ್ಸ್ ಅಂತರ್ಜಾಲ ತಾಣಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಕಂಪನಿಗಳ ಕಾಯಿದೆ ಅಡಿ 1973ರಲ್ಲಿ ಸ್ಥಾಪನೆಯಾದ ಕೆಎಸ್ಎಫ್ಐಸಿ ಗುಣಮಟ್ಟದ ಪೀಠೋಪಕರಣ, ಬಾಗಿಲು, ಬಾಗಿಲವಾಡ, ಕಿಟಕಿ ಇತ್ಯಾದಿಗಳನ್ನು ಸಿದ್ಧಪಡಿಸಿ ಸರ್ಕಾರಿ ಕಟ್ಟಡ ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುವ ನಿಗಮ ಈಗ ಇಂದಿನ ಯುಗಮಾನದ ಅಗತ್ಯಕ್ಕೆ ಅನುಗುಣವಾಗಿ ಇ-ಕಾಮರ್ಸ್ ಅಂತರ್ಜಾಲ ತಾಣ ಸಿದ್ಧಪಡಿಸಿದ್ದು, ಇದನ್ನು ನಿಗಮದ ಅಧ್ಯಕ್ಷ ಹಾಗೂ ಶಾಸಕ ಗೋಪಾಲಕೃಷ್ಣ ಬೇಲೂರು ಅವರ ಸಮ್ಮುಖದಲ್ಲಿ ಉದ್ಘಾಟಿಸಲು ಹರ್ಷಿಸುತ್ತೇನೆ ಎಂದು ಹೇಳಿದರು.
Forest Minister Eshwar Khandre stated that if the Special Investigation Team (SIT) finds evidence of unauthorized burials inside the Dharmasthala reserve forest, strict legal action will be taken under the Forest Conservation Act.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am