ಬ್ರೇಕಿಂಗ್ ನ್ಯೂಸ್
22-08-25 12:29 pm HK News Desk ಕರ್ನಾಟಕ
ತುಮಕೂರು, ಆ 22 : ತಾನು ಓದುವ ಸರಕಾರಿ ಶಾಲೆಗೆ ಕಾಂಪೌಂಡ್ ಕಟ್ಟಿಸಿಕೊಡುವವರೆಗೆ ನಾನು ಶಾಲೆಗೆ ಹೋಗಲ್ಲ ಎಂದು ನಾಲ್ಕನೇ ತರಗತಿ ಬಾಲಕಿಯೊಬ್ಬಳು ಹಠ ಹಿಡಿದು ಕುಳಿತಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಬೆಳಧರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಈ ವಿಷಯ ತಿಳಿಯುತ್ತಿದ್ದಂತೆ ಶಾಲೆಗೆ ಸ್ವತಃ ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನೀಸಾ ಭೇಟಿ ನೀಡಿದರು. ಈ ವೇಳೆ ಬಾಲಕಿಯ ಮನವೊಲಿಸಲು ನ್ಯಾಯಾಧೀಶರು ಪ್ರಯತ್ನಿಸಿದ್ದಾರೆ. ಆದರೂ ಕೂಡ ಬಾಲಕಿಯು ಶಾಲಾ ಕಾಂಪೌಂಡ್ ನಿರ್ಮಾಣ ಮಾಡಿದ ನಂತರವೇ ಶಾಲೆಗೆ ಹೋಗುವುದಾಗಿ ಪಟ್ಟು ಹಿಡಿದು ಕುಳಿತಿದ್ದಾಳೆ.
ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಬೆಳಧರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹೊಂದಿಕೊಂಡಂತೆ ಕಲ್ಯಾಣ ಮಂಟಪವೊಂದನ್ನು ನಿರ್ಮಾಣ ಮಾಡಿದ್ದಾರೆ. ಇದರಿಂದಾಗಿ ಕಲ್ಯಾಣ ಮಂಟಪದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಭಾಗವಹಿಸುವ ಜನರು ಶಾಲಾ ಆವರಣದೊಳಗೆ ಬಂದು ಶಾಲೆಯ ಪರಿಸರವನ್ನು ಅಸುಚಿಗೊಳಿಸಿ ತೆರಳುತ್ತಿದ್ದಾರೆ. ಇದರಿಂದಾಗಿ ಶಾಲಾ ಆವರಣವೆಲ್ಲ ಕಸಕಡ್ಡಿಗಳಿಂದ ತುಂಬಿ ತುಳುಕುತ್ತಿದೆ.
ಪರೀಕ್ಷೆ ಬರೆಯಲೂ ಕಿರಿಕಿರಿ:
ಶಾಲೆಯಲ್ಲಿ ಪಾಠ ಕೇಳಲು ಹಾಗೂ ಪರೀಕ್ಷಾ ಸಮಯದಲ್ಲಿ ಪರೀಕ್ಷೆ ಬರೆಯಲು ಸಹ ತೀವ್ರ ಕಿರಿಕಿರಿ ಉಂಟು ಮಾಡುತ್ತಿದೆ ಎಂದು ಬಾಲಕಿಯು ನ್ಯಾಯಾಧೀಶರಿಗೆ ತಿಳಿಸಿದ್ದಾರೆ. ಈ ಮೂಲಕ 4ನೇ ತರಗತಿ ವಿದ್ಯಾರ್ಥಿನಿ ತಮ್ಮ ಸರ್ಕಾರಿ ಶಾಲೆಯ ಆಟದ ಮೈದಾನಕ್ಕೆ ಕಾಂಪೌಂಡ್ ಕಟ್ಟಿಸಬೇಕೆಂದು ಹೋರಾಟ ನಡೆಸುತ್ತಿದ್ದಾಳೆ.
ಇತರ ಸಂದರ್ಭಗಳಲ್ಲಿ ಆಟ ಆಡೋಕೆ ಮೈದಾನ ಇರಲ್ಲ. ಮೈದಾನದಲ್ಲಿ ವಾಹನಗಳು ನಿಲ್ಲಿಸುವುದು, ಎಂಜಲು ಎಲೆಗಳನ್ನು ಎಸೆಯುವುದರಿಂದ ಆಟ ಮತ್ತು ಪಾಠಕ್ಕೆ ತೀವ್ರ ಸಮಸ್ಯೆ ಆಗುತ್ತಿದ್ದು, ಕೂಡಲೇ ಆಟದ ಮೈದಾನಕ್ಕೆ ಕಾಂಪೌಂಡ್ ಕಟ್ಟಿಸಿಕೊಡಿ ಇಲ್ಲಾ ಅಂದ್ರೆ ನಾನು ಶಾಲೆಗೆ ಹೋಗಲ್ಲ ಎಂದು ಹಠ ಹಿಡಿದು ಕುಳಿತಿದ್ದಾಳೆ.
ಕಾಂಪೌಂಡ್ ನಿರ್ಮಾಣಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಇಒಗೆ ಜಡ್ಜ್ ಸೂಚನೆ:
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಶ್ರೇಣಿ ನ್ಯಾಯಾಧೀಶರಾದ ನೂರಿನ್ನಿಸ, ಕಾಂಪೌಂಡ್ ನಿರ್ಮಿಸುವಂತೆ ಸೂಕ್ತಕ್ರಮ ಕೈಗೊಳ್ಳಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗೆ ಸೂಚನೆ ನೀಡಿದ್ದಾರೆ. ಅಲ್ಲದೆ ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೂ ಕೂಡ ಪತ್ರವನ್ನು ಕಳುಹಿಸಿರುವುದಾಗಿ ತಿಳಿಸಿದ್ದಾರೆ.
In a heartening yet powerful display of civic awareness, a Class 4 student from a government school in Beladhara village of Koratagere taluk, Tumakuru district, refused to attend school until a compound wall is built around the premises.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm