ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯಿತಿ, ಪಾವತಿಸುವುದು ಹೇಗೆ ? 

22-08-25 08:01 pm       Bangalore Correspondent   ಕರ್ನಾಟಕ

ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಸಿಹಿ ಸುದ್ದಿ ನೀಡಿದ್ದು, ಸಂಚಾರ ನಿಯಮ ಉಲ್ಲಂಘನೆಯ ಬಾಕಿ ಪ್ರಕರಣಗಳ ದಂಡದ ಮೊತ್ತ ಪಾವತಿಯಲ್ಲಿ ಶೇ.50ರಷ್ಟು ರಿಯಾಯಿತಿ ನೀಡಿದೆ. 

ಬೆಂಗಳೂರು, ಆ.22: ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಸಿಹಿ ಸುದ್ದಿ ನೀಡಿದ್ದು, ಸಂಚಾರ ನಿಯಮ ಉಲ್ಲಂಘನೆಯ ಬಾಕಿ ಪ್ರಕರಣಗಳ ದಂಡದ ಮೊತ್ತ ಪಾವತಿಯಲ್ಲಿ ಶೇ.50ರಷ್ಟು ರಿಯಾಯಿತಿ ನೀಡಿದೆ. 

ಈ ಸಂಬಂಧ ಸರ್ಕಾರ ಆದೇಶ ಹೊರಡಿಸಿದ್ದು, ಈ ತಿಂಗಳ 23ರಿಂದ ಮುಂದಿನ ಸೆ.19 ವರೆಗೆ ಈ ರಿಯಾಯಿತಿ ಸೌಲಭ್ಯ ಚಾಲ್ತಿಯಲ್ಲಿರುತ್ತದೆ. ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳಿಗೆ ಮಾತ್ರ ಈ ರಿಯಾಯಿತಿ ಅನ್ವಯವಾಗಲಿದೆ ಎಂದು ತಿಳಿಸಿದೆ.

ಇದರ ಬೆನ್ನಲ್ಲೇ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ದಂಡ ಪಾವತಿಗೆ ಸಂಚಾರ ಪೊಲೀಸರು ಅವಕಾಶ ನೀಡಿದ್ದಾರೆ. ತ್ವರಿತವಾಗಿ ಸಂಚಾರ ಉಲ್ಲಂಘನೆ ಪ್ರಕರಣ ಇತ್ಯರ್ಥಪಡಿಸಿಕೊಳ್ಳುವಂತೆ ಸಂಚಾರ ವಿಭಾಗದ ಪೊಲೀಸರೂ ಮನವಿ ಮಾಡಿದ್ದಾರೆ.

ದಂಡ ಪಾವತಿಸುವ ವಿಧಾನ;

  • ಕರ್ನಾಟಕ ಸ್ಟೇಟ್ ಪೊಲೀಸ್‌ (ಕೆಎಸ್‌ಪಿ) ಆ್ಯಪ್ ಮುಖಾಂತರ ಪಾವತಿಸಬಹುದು.
  • ಬೆಂಗಳೂರು ಪೊಲೀಸರ ಬಿಟಿಪಿ ಅಸ್ತ್ರಂ ಆ್ಯಪ್ ಮುಖಾಂತರ ಪಾವತಿಸಬಹುದು.
  • ಸಂಚಾರ ಪೊಲೀಸ್‌ ಠಾಣೆಗಳಲ್ಲಿ ವಾಹನ ನೋಂದಣಿ ಸಂಖ್ಯೆ ವಿವರ ಒದಗಿಸಿ ದಂಡ ಕಟ್ಟಬಹುದು.
  • ಸಂಚಾರ ನಿರ್ವಹಣಾ ಕೇಂದ್ರದಲ್ಲಿ (ಟಿಎಂಸಿ) ಪಾವತಿಸಬಹುದು.
  • ಕರ್ನಾಟಕ ಒನ್ /ಬೆಂಗಳೂರು ಒನ್‌ ವೆಬ್‌ಸೈಟ್‌ನಲ್ಲಿ ವಿವರ ಪಡೆದು ಪಾವತಿಸಬಹುದು.

In a welcome move for motorists across Karnataka, the state government has announced a 50% discount on pending traffic violation fines. This rebate applies to outstanding cases registered through the Traffic e-Challan system of the police department.