ಬ್ರೇಕಿಂಗ್ ನ್ಯೂಸ್
23-08-25 09:56 pm Bangalore Correspondent ಕರ್ನಾಟಕ
ಬೆಂಗಳೂರು, ಆ 23: ವಿಧಾನ ಪರಿಷತ್ತು ಅಕ್ರಮ ಗಣಿಗಾರಿಕೆಯಿಂದ ಊಹೆಗೂ ನಿಲುಕದಷ್ಟು ಪ್ರಮಾಣದಲ್ಲಿ ವಿದೇಶಗಳಿಗೆ ಅದಿರು ರವಾನೆ ಮಾಡಿದ್ದರಿಂದ ರಾಜ್ಯಕ್ಕೆ ₹80 ಸಾವಿರ ಕೋಟಿ ನಷ್ಟವಾಗಿದೆ. ಈ ಲೂಟಿ ಹಣ ವಸೂಲಿ ಮಾಡಲು ವಸೂಲಾತಿ ಆಯುಕ್ತರನ್ನು ನೇಮಿಸುತ್ತಿದ್ದೇವೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ.ಪಾಟೀಲ್ ಹೇಳಿದರು.
ಗಣಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ಪರ ವಿಧಾನಸಭೆಯಲ್ಲಿ ಅಂಗೀಕೃತ ರೂಪದಲ್ಲಿರುವ ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತನ್ನು ವಶಪಡಿಸಿಕೊಳ್ಳುವುದಕ್ಕಾಗಿ ಮತ್ತು ಜಪ್ತಿಗಾಗಿ ವಸೂಲಾತಿ ಆಯುಕ್ತರ ನೇಮಕಾತಿ ವಿಧೇಯಕ 2025 ಅನ್ನು ಮಂಡಿಸಿ ಮಾತನಾಡಿದರು.
2006ರಿಂದ 2012ರವರೆಗೆ ನಮ್ಮಲ್ಲಿರುವ ಮಾಹಿತಿ ಪ್ರಕಾರ 20 ಕೋಟಿ ಮೆಟ್ರಿಕ್ ಟನ್ ಕಬ್ಬಿಣದ ಅದಿರು ಕಾನೂನು ಬಾಹಿರವಾಗಿ ಸಾಗಣೆಯಾಗಿದೆ. ಒಂದು ಟನ್ಗೆ ₹4003 ರಂತೆ ₹80 ಸಾವಿರ ಕೋಟಿಯಷ್ಟು ರಾಜ್ಯದ ಬೊಕ್ಕಸಕ್ಕೆ ನಷ್ಟವಾಗಿದೆ. ಈ ಮೊತ್ತವನ್ನು ಜಪ್ತಿ ಅಥವಾ ವಸೂಲಿ ಮಾಡುವುದು ಜವಾಬ್ದಾರಿ ಯುತ ಸರ್ಕಾರದ ಕರ್ತವ್ಯ. ಅದಕ್ಕಾಗಿಯೇ ವಸೂಲಿ ಆಯುಕ್ತರ ನೇಮಿಸಲು ವಿಧೇಯಕಕ್ಕೆ ತಿದ್ದುಪಡಿ ತರಲಾಗಿದೆ ಎಂದರು.
ರಾಜ್ಯದಲ್ಲಿ ಲೆಕ್ಕವಿಲ್ಲದಷ್ಟು ಸಂಖ್ಯೆಯ ಗುತ್ತಿಗೆದಾರರು, ಸಾಗಣೆದಾರರು, ರಫ್ತುದಾರರು, ದಾಸ್ತಾನುದಾರರು, ಖರೀದಿದಾರರು ಮತ್ತು ಮಧ್ಯವರ್ತಿಗಳನ್ನೊಳಗೊಂಡ ಅಕ್ರಮ ಗಣಿಗಾರಿಕೆ ಚಟುವಟಿಕೆ ನಡೆದಿದೆ. ಈ ಸಂಘಟಿತ ಅಪರಾಧ, ವ್ಯವಸ್ಥಿತ ಒಳಸಂಚು ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲು, ಜಪ್ತಿ ಮಾಡಲು, ಮುಟ್ಟುಗೋಲು ಹಾಕಿಕೊಳ್ಳುವ ಕೆಲಸವನ್ನು ವಸೂಲಾತಿ ಆಯುಕ್ತರು ಮಾಡಲಿದ್ದಾರೆ. ರಾಜ್ಯದಲ್ಲಿ ಭಾರಿ ಅಕ್ರಮ ಮತ್ತು ಮಧ್ಯಮ ಪ್ರಮಾಣದಲ್ಲಿ ಅಕ್ರಮ ಮಾಡಿದ 111 ಕಂಪನಿಗಳು 'ಬಿ' ಮತ್ತು 'ಸಿ' ಕೆಟಗರಿಯಲ್ಲಿದ್ದು, ಅವುಗಳ ಬಗ್ಗೆ ಎಸ್ಐಟಿ, ಸಿಬಿಐ ತನಿಖೆ ನಡೆಯುತ್ತಿದೆ ಎಂದು ಹೇಳಿದರು.
Karnataka has suffered an estimated loss of ₹80,000 crore due to large-scale illegal mining and unauthorized export of iron ore between 2006 and 2012, said Law and Parliamentary Affairs Minister H.K. Patil. To recover the lost public wealth, the state government is appointing a Recovery Commissioner, he added.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am