ಬ್ರೇಕಿಂಗ್ ನ್ಯೂಸ್
23-08-25 09:56 pm Bangalore Correspondent ಕರ್ನಾಟಕ
ಬೆಂಗಳೂರು, ಆ 23: ವಿಧಾನ ಪರಿಷತ್ತು ಅಕ್ರಮ ಗಣಿಗಾರಿಕೆಯಿಂದ ಊಹೆಗೂ ನಿಲುಕದಷ್ಟು ಪ್ರಮಾಣದಲ್ಲಿ ವಿದೇಶಗಳಿಗೆ ಅದಿರು ರವಾನೆ ಮಾಡಿದ್ದರಿಂದ ರಾಜ್ಯಕ್ಕೆ ₹80 ಸಾವಿರ ಕೋಟಿ ನಷ್ಟವಾಗಿದೆ. ಈ ಲೂಟಿ ಹಣ ವಸೂಲಿ ಮಾಡಲು ವಸೂಲಾತಿ ಆಯುಕ್ತರನ್ನು ನೇಮಿಸುತ್ತಿದ್ದೇವೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ.ಪಾಟೀಲ್ ಹೇಳಿದರು.
ಗಣಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ಪರ ವಿಧಾನಸಭೆಯಲ್ಲಿ ಅಂಗೀಕೃತ ರೂಪದಲ್ಲಿರುವ ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತನ್ನು ವಶಪಡಿಸಿಕೊಳ್ಳುವುದಕ್ಕಾಗಿ ಮತ್ತು ಜಪ್ತಿಗಾಗಿ ವಸೂಲಾತಿ ಆಯುಕ್ತರ ನೇಮಕಾತಿ ವಿಧೇಯಕ 2025 ಅನ್ನು ಮಂಡಿಸಿ ಮಾತನಾಡಿದರು.
2006ರಿಂದ 2012ರವರೆಗೆ ನಮ್ಮಲ್ಲಿರುವ ಮಾಹಿತಿ ಪ್ರಕಾರ 20 ಕೋಟಿ ಮೆಟ್ರಿಕ್ ಟನ್ ಕಬ್ಬಿಣದ ಅದಿರು ಕಾನೂನು ಬಾಹಿರವಾಗಿ ಸಾಗಣೆಯಾಗಿದೆ. ಒಂದು ಟನ್ಗೆ ₹4003 ರಂತೆ ₹80 ಸಾವಿರ ಕೋಟಿಯಷ್ಟು ರಾಜ್ಯದ ಬೊಕ್ಕಸಕ್ಕೆ ನಷ್ಟವಾಗಿದೆ. ಈ ಮೊತ್ತವನ್ನು ಜಪ್ತಿ ಅಥವಾ ವಸೂಲಿ ಮಾಡುವುದು ಜವಾಬ್ದಾರಿ ಯುತ ಸರ್ಕಾರದ ಕರ್ತವ್ಯ. ಅದಕ್ಕಾಗಿಯೇ ವಸೂಲಿ ಆಯುಕ್ತರ ನೇಮಿಸಲು ವಿಧೇಯಕಕ್ಕೆ ತಿದ್ದುಪಡಿ ತರಲಾಗಿದೆ ಎಂದರು.
ರಾಜ್ಯದಲ್ಲಿ ಲೆಕ್ಕವಿಲ್ಲದಷ್ಟು ಸಂಖ್ಯೆಯ ಗುತ್ತಿಗೆದಾರರು, ಸಾಗಣೆದಾರರು, ರಫ್ತುದಾರರು, ದಾಸ್ತಾನುದಾರರು, ಖರೀದಿದಾರರು ಮತ್ತು ಮಧ್ಯವರ್ತಿಗಳನ್ನೊಳಗೊಂಡ ಅಕ್ರಮ ಗಣಿಗಾರಿಕೆ ಚಟುವಟಿಕೆ ನಡೆದಿದೆ. ಈ ಸಂಘಟಿತ ಅಪರಾಧ, ವ್ಯವಸ್ಥಿತ ಒಳಸಂಚು ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲು, ಜಪ್ತಿ ಮಾಡಲು, ಮುಟ್ಟುಗೋಲು ಹಾಕಿಕೊಳ್ಳುವ ಕೆಲಸವನ್ನು ವಸೂಲಾತಿ ಆಯುಕ್ತರು ಮಾಡಲಿದ್ದಾರೆ. ರಾಜ್ಯದಲ್ಲಿ ಭಾರಿ ಅಕ್ರಮ ಮತ್ತು ಮಧ್ಯಮ ಪ್ರಮಾಣದಲ್ಲಿ ಅಕ್ರಮ ಮಾಡಿದ 111 ಕಂಪನಿಗಳು 'ಬಿ' ಮತ್ತು 'ಸಿ' ಕೆಟಗರಿಯಲ್ಲಿದ್ದು, ಅವುಗಳ ಬಗ್ಗೆ ಎಸ್ಐಟಿ, ಸಿಬಿಐ ತನಿಖೆ ನಡೆಯುತ್ತಿದೆ ಎಂದು ಹೇಳಿದರು.
Karnataka has suffered an estimated loss of ₹80,000 crore due to large-scale illegal mining and unauthorized export of iron ore between 2006 and 2012, said Law and Parliamentary Affairs Minister H.K. Patil. To recover the lost public wealth, the state government is appointing a Recovery Commissioner, he added.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am