ಬ್ರೇಕಿಂಗ್ ನ್ಯೂಸ್
24-08-25 05:30 pm Bangalore Correspondent ಕರ್ನಾಟಕ
ಬೆಂಗಳೂರು, ಆ 24 : ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಶೇ.50ರಷ್ಟು ರಿಯಾಯಿತಿ ದಂಡ ಪಾವತಿಸಲು ನಿಗದಿಪಡಿಸಲಾಗಿದ್ದ ಅವಧಿಯ ಮೊದಲನೆಯ ದಿನವಾದ ಶನಿವಾರ ಎಲ್ಲ ವಿಧಾನಗಳ ಮೂಲಕ 1,48,747 ಪ್ರಕರಣಗಳು ಇತ್ಯರ್ಥಗೊಂಡು ಒಟ್ಟು 4,18,20,500 ರೂ. ದಂಡ ಪಾವತಿ ಆಗಿದೆ ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ನಲ್ಲಿ ದಾಖಲಾದ ಪ್ರಕರಣಗಳಿಗೆ ದಂಡ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳಲ್ಲಿ ದಂಡ ಪಾವತಿಸಲು ರಿಯಾಯಿತಿ ನೀಡಿ ಸರ್ಕಾರ ಆದೇಶಿಸಿದೆ. ಈ ಆದೇಶ ಆ.23ರಿಂದ ಜಾರಿಗೆ ಬಂದಿದೆ. ಆ.23ರಿಂದ ಸೆ.12ರವರೆಗೆ ರಿಯಾಯಿತಿ ಜಾರಿಯಲ್ಲಿ ಇರುತ್ತದೆ ಆದರೆ, ಈ ರಿಯಾಯಿತಿ 2023ರ ಫೆಬ್ರವರಿ 11ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರವೇ ಅನ್ವಯ.
ವಾಹನದ ಮಾಲೀಕರಿಗೆ ಮತ್ತೊಂದು ಅವಕಾಶ: ಕಳೆದ ಎರಡು ವರ್ಷಗಳ ಹಿಂದೆ 2023ರಲ್ಲಿ ರಾಜ್ಯ ಸರ್ಕಾರವು ಸಂಚಾರ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ಬಾಕಿ ಉಳಿಸಿಕೊಂಡ ದಂಡ ಪಾವತಿಸಲು ಶೇ.50ರಷ್ಟು ರಿಯಾಯಿತಿ ಘೋಷಣೆ ಮಾಡಿತ್ತು. ಆಗ ಅಂದಾಜು 250 ಕೋಟಿ ರೂ.ಗೂ ಹೆಚ್ಚಿನ ಪ್ರಮಾಣದ ದಂಡವನ್ನು ವಸೂಲಿ ಮಾಡಲಾಗಿತ್ತು. 2023ರ ಫೆಬ್ರವರಿ 23ಕ್ಕಿಂತ ಮುಂಚಿನ ಟ್ರಾಫಿಕ್ ಉಲ್ಲಂಘನೆ ಪ್ರಕರಣಗಳಲ್ಲಿ ದಂಡ ಪಾವತಿ ಮಾಡದೇ ಬಾಕಿ ಉಳಿಸಿಕೊಂಡ ವಾಹನಗಳ ಮಾಲೀಕರಿಗೆ ಮತ್ತೊಂದು ಅವಕಾಶವೆನ್ನುವಂತೆ ಶೇ.50ರಷ್ಟು ರಿಯಾಯಿತಿ ನೀಡಲಾಗಿದೆ.
ಎಲ್ಲ ವಾಹನ ಮಾಲೀಕರು ಮತ್ತು ಚಾಲಕರು ಈ ಸೀಮಿತ ಅವಧಿಯ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು. ಹಾಗೂ ತಮ್ಮ ವಾಹನಗಳ ಮೇಲಿರುವ ಸಂಚಾರ ಉಲ್ಲಂಘನೆಗಳ ಬಾಕಿ ಇರುವ ದಂಡಗಳನ್ನು ಪಾವತಿಸಿ, ಮುಂದಿನ ದಿನಗಳಲ್ಲಿ ಸಂಚಾರ ನಿಯಮಗಳನ್ನು ಪಾಲಿಸುವಂತೆ ಸಿಎಂ ಕೋರಿದ್ದಾರೆ.
On the first day of the government’s 50% discount offer on pending traffic fines, a staggering ₹4.18 crore was collected from 1,48,747 cases, the traffic police department reported on Saturday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am