ಬ್ರೇಕಿಂಗ್ ನ್ಯೂಸ್
24-08-25 05:30 pm Bangalore Correspondent ಕರ್ನಾಟಕ
ಬೆಂಗಳೂರು, ಆ 24 : ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಶೇ.50ರಷ್ಟು ರಿಯಾಯಿತಿ ದಂಡ ಪಾವತಿಸಲು ನಿಗದಿಪಡಿಸಲಾಗಿದ್ದ ಅವಧಿಯ ಮೊದಲನೆಯ ದಿನವಾದ ಶನಿವಾರ ಎಲ್ಲ ವಿಧಾನಗಳ ಮೂಲಕ 1,48,747 ಪ್ರಕರಣಗಳು ಇತ್ಯರ್ಥಗೊಂಡು ಒಟ್ಟು 4,18,20,500 ರೂ. ದಂಡ ಪಾವತಿ ಆಗಿದೆ ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ನಲ್ಲಿ ದಾಖಲಾದ ಪ್ರಕರಣಗಳಿಗೆ ದಂಡ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳಲ್ಲಿ ದಂಡ ಪಾವತಿಸಲು ರಿಯಾಯಿತಿ ನೀಡಿ ಸರ್ಕಾರ ಆದೇಶಿಸಿದೆ. ಈ ಆದೇಶ ಆ.23ರಿಂದ ಜಾರಿಗೆ ಬಂದಿದೆ. ಆ.23ರಿಂದ ಸೆ.12ರವರೆಗೆ ರಿಯಾಯಿತಿ ಜಾರಿಯಲ್ಲಿ ಇರುತ್ತದೆ ಆದರೆ, ಈ ರಿಯಾಯಿತಿ 2023ರ ಫೆಬ್ರವರಿ 11ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರವೇ ಅನ್ವಯ.
ವಾಹನದ ಮಾಲೀಕರಿಗೆ ಮತ್ತೊಂದು ಅವಕಾಶ: ಕಳೆದ ಎರಡು ವರ್ಷಗಳ ಹಿಂದೆ 2023ರಲ್ಲಿ ರಾಜ್ಯ ಸರ್ಕಾರವು ಸಂಚಾರ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ಬಾಕಿ ಉಳಿಸಿಕೊಂಡ ದಂಡ ಪಾವತಿಸಲು ಶೇ.50ರಷ್ಟು ರಿಯಾಯಿತಿ ಘೋಷಣೆ ಮಾಡಿತ್ತು. ಆಗ ಅಂದಾಜು 250 ಕೋಟಿ ರೂ.ಗೂ ಹೆಚ್ಚಿನ ಪ್ರಮಾಣದ ದಂಡವನ್ನು ವಸೂಲಿ ಮಾಡಲಾಗಿತ್ತು. 2023ರ ಫೆಬ್ರವರಿ 23ಕ್ಕಿಂತ ಮುಂಚಿನ ಟ್ರಾಫಿಕ್ ಉಲ್ಲಂಘನೆ ಪ್ರಕರಣಗಳಲ್ಲಿ ದಂಡ ಪಾವತಿ ಮಾಡದೇ ಬಾಕಿ ಉಳಿಸಿಕೊಂಡ ವಾಹನಗಳ ಮಾಲೀಕರಿಗೆ ಮತ್ತೊಂದು ಅವಕಾಶವೆನ್ನುವಂತೆ ಶೇ.50ರಷ್ಟು ರಿಯಾಯಿತಿ ನೀಡಲಾಗಿದೆ.
ಎಲ್ಲ ವಾಹನ ಮಾಲೀಕರು ಮತ್ತು ಚಾಲಕರು ಈ ಸೀಮಿತ ಅವಧಿಯ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು. ಹಾಗೂ ತಮ್ಮ ವಾಹನಗಳ ಮೇಲಿರುವ ಸಂಚಾರ ಉಲ್ಲಂಘನೆಗಳ ಬಾಕಿ ಇರುವ ದಂಡಗಳನ್ನು ಪಾವತಿಸಿ, ಮುಂದಿನ ದಿನಗಳಲ್ಲಿ ಸಂಚಾರ ನಿಯಮಗಳನ್ನು ಪಾಲಿಸುವಂತೆ ಸಿಎಂ ಕೋರಿದ್ದಾರೆ.
On the first day of the government’s 50% discount offer on pending traffic fines, a staggering ₹4.18 crore was collected from 1,48,747 cases, the traffic police department reported on Saturday.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm