ಬ್ರೇಕಿಂಗ್ ನ್ಯೂಸ್
24-08-25 05:30 pm Bangalore Correspondent ಕರ್ನಾಟಕ
ಬೆಂಗಳೂರು, ಆ 24 : ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಶೇ.50ರಷ್ಟು ರಿಯಾಯಿತಿ ದಂಡ ಪಾವತಿಸಲು ನಿಗದಿಪಡಿಸಲಾಗಿದ್ದ ಅವಧಿಯ ಮೊದಲನೆಯ ದಿನವಾದ ಶನಿವಾರ ಎಲ್ಲ ವಿಧಾನಗಳ ಮೂಲಕ 1,48,747 ಪ್ರಕರಣಗಳು ಇತ್ಯರ್ಥಗೊಂಡು ಒಟ್ಟು 4,18,20,500 ರೂ. ದಂಡ ಪಾವತಿ ಆಗಿದೆ ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ನಲ್ಲಿ ದಾಖಲಾದ ಪ್ರಕರಣಗಳಿಗೆ ದಂಡ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳಲ್ಲಿ ದಂಡ ಪಾವತಿಸಲು ರಿಯಾಯಿತಿ ನೀಡಿ ಸರ್ಕಾರ ಆದೇಶಿಸಿದೆ. ಈ ಆದೇಶ ಆ.23ರಿಂದ ಜಾರಿಗೆ ಬಂದಿದೆ. ಆ.23ರಿಂದ ಸೆ.12ರವರೆಗೆ ರಿಯಾಯಿತಿ ಜಾರಿಯಲ್ಲಿ ಇರುತ್ತದೆ ಆದರೆ, ಈ ರಿಯಾಯಿತಿ 2023ರ ಫೆಬ್ರವರಿ 11ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರವೇ ಅನ್ವಯ.
ವಾಹನದ ಮಾಲೀಕರಿಗೆ ಮತ್ತೊಂದು ಅವಕಾಶ: ಕಳೆದ ಎರಡು ವರ್ಷಗಳ ಹಿಂದೆ 2023ರಲ್ಲಿ ರಾಜ್ಯ ಸರ್ಕಾರವು ಸಂಚಾರ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ಬಾಕಿ ಉಳಿಸಿಕೊಂಡ ದಂಡ ಪಾವತಿಸಲು ಶೇ.50ರಷ್ಟು ರಿಯಾಯಿತಿ ಘೋಷಣೆ ಮಾಡಿತ್ತು. ಆಗ ಅಂದಾಜು 250 ಕೋಟಿ ರೂ.ಗೂ ಹೆಚ್ಚಿನ ಪ್ರಮಾಣದ ದಂಡವನ್ನು ವಸೂಲಿ ಮಾಡಲಾಗಿತ್ತು. 2023ರ ಫೆಬ್ರವರಿ 23ಕ್ಕಿಂತ ಮುಂಚಿನ ಟ್ರಾಫಿಕ್ ಉಲ್ಲಂಘನೆ ಪ್ರಕರಣಗಳಲ್ಲಿ ದಂಡ ಪಾವತಿ ಮಾಡದೇ ಬಾಕಿ ಉಳಿಸಿಕೊಂಡ ವಾಹನಗಳ ಮಾಲೀಕರಿಗೆ ಮತ್ತೊಂದು ಅವಕಾಶವೆನ್ನುವಂತೆ ಶೇ.50ರಷ್ಟು ರಿಯಾಯಿತಿ ನೀಡಲಾಗಿದೆ.
ಎಲ್ಲ ವಾಹನ ಮಾಲೀಕರು ಮತ್ತು ಚಾಲಕರು ಈ ಸೀಮಿತ ಅವಧಿಯ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು. ಹಾಗೂ ತಮ್ಮ ವಾಹನಗಳ ಮೇಲಿರುವ ಸಂಚಾರ ಉಲ್ಲಂಘನೆಗಳ ಬಾಕಿ ಇರುವ ದಂಡಗಳನ್ನು ಪಾವತಿಸಿ, ಮುಂದಿನ ದಿನಗಳಲ್ಲಿ ಸಂಚಾರ ನಿಯಮಗಳನ್ನು ಪಾಲಿಸುವಂತೆ ಸಿಎಂ ಕೋರಿದ್ದಾರೆ.
On the first day of the government’s 50% discount offer on pending traffic fines, a staggering ₹4.18 crore was collected from 1,48,747 cases, the traffic police department reported on Saturday.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm