ಬ್ರೇಕಿಂಗ್ ನ್ಯೂಸ್
24-08-25 05:30 pm Bangalore Correspondent ಕರ್ನಾಟಕ
ಬೆಂಗಳೂರು, ಆ 24 : ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಶೇ.50ರಷ್ಟು ರಿಯಾಯಿತಿ ದಂಡ ಪಾವತಿಸಲು ನಿಗದಿಪಡಿಸಲಾಗಿದ್ದ ಅವಧಿಯ ಮೊದಲನೆಯ ದಿನವಾದ ಶನಿವಾರ ಎಲ್ಲ ವಿಧಾನಗಳ ಮೂಲಕ 1,48,747 ಪ್ರಕರಣಗಳು ಇತ್ಯರ್ಥಗೊಂಡು ಒಟ್ಟು 4,18,20,500 ರೂ. ದಂಡ ಪಾವತಿ ಆಗಿದೆ ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ನಲ್ಲಿ ದಾಖಲಾದ ಪ್ರಕರಣಗಳಿಗೆ ದಂಡ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳಲ್ಲಿ ದಂಡ ಪಾವತಿಸಲು ರಿಯಾಯಿತಿ ನೀಡಿ ಸರ್ಕಾರ ಆದೇಶಿಸಿದೆ. ಈ ಆದೇಶ ಆ.23ರಿಂದ ಜಾರಿಗೆ ಬಂದಿದೆ. ಆ.23ರಿಂದ ಸೆ.12ರವರೆಗೆ ರಿಯಾಯಿತಿ ಜಾರಿಯಲ್ಲಿ ಇರುತ್ತದೆ ಆದರೆ, ಈ ರಿಯಾಯಿತಿ 2023ರ ಫೆಬ್ರವರಿ 11ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರವೇ ಅನ್ವಯ.
ವಾಹನದ ಮಾಲೀಕರಿಗೆ ಮತ್ತೊಂದು ಅವಕಾಶ: ಕಳೆದ ಎರಡು ವರ್ಷಗಳ ಹಿಂದೆ 2023ರಲ್ಲಿ ರಾಜ್ಯ ಸರ್ಕಾರವು ಸಂಚಾರ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ಬಾಕಿ ಉಳಿಸಿಕೊಂಡ ದಂಡ ಪಾವತಿಸಲು ಶೇ.50ರಷ್ಟು ರಿಯಾಯಿತಿ ಘೋಷಣೆ ಮಾಡಿತ್ತು. ಆಗ ಅಂದಾಜು 250 ಕೋಟಿ ರೂ.ಗೂ ಹೆಚ್ಚಿನ ಪ್ರಮಾಣದ ದಂಡವನ್ನು ವಸೂಲಿ ಮಾಡಲಾಗಿತ್ತು. 2023ರ ಫೆಬ್ರವರಿ 23ಕ್ಕಿಂತ ಮುಂಚಿನ ಟ್ರಾಫಿಕ್ ಉಲ್ಲಂಘನೆ ಪ್ರಕರಣಗಳಲ್ಲಿ ದಂಡ ಪಾವತಿ ಮಾಡದೇ ಬಾಕಿ ಉಳಿಸಿಕೊಂಡ ವಾಹನಗಳ ಮಾಲೀಕರಿಗೆ ಮತ್ತೊಂದು ಅವಕಾಶವೆನ್ನುವಂತೆ ಶೇ.50ರಷ್ಟು ರಿಯಾಯಿತಿ ನೀಡಲಾಗಿದೆ.
ಎಲ್ಲ ವಾಹನ ಮಾಲೀಕರು ಮತ್ತು ಚಾಲಕರು ಈ ಸೀಮಿತ ಅವಧಿಯ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು. ಹಾಗೂ ತಮ್ಮ ವಾಹನಗಳ ಮೇಲಿರುವ ಸಂಚಾರ ಉಲ್ಲಂಘನೆಗಳ ಬಾಕಿ ಇರುವ ದಂಡಗಳನ್ನು ಪಾವತಿಸಿ, ಮುಂದಿನ ದಿನಗಳಲ್ಲಿ ಸಂಚಾರ ನಿಯಮಗಳನ್ನು ಪಾಲಿಸುವಂತೆ ಸಿಎಂ ಕೋರಿದ್ದಾರೆ.
On the first day of the government’s 50% discount offer on pending traffic fines, a staggering ₹4.18 crore was collected from 1,48,747 cases, the traffic police department reported on Saturday.
24-08-25 05:30 pm
Bangalore Correspondent
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 10:49 pm
Mangalore Correspondent
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
24-08-25 10:33 pm
HK News Desk
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm
MLA Veerendra Puppy, ED Raid: ಬೆಟ್ಟಿಂಗ್ ದಂಧೆ...
24-08-25 12:41 pm