ಬ್ರೇಕಿಂಗ್ ನ್ಯೂಸ್
25-08-25 10:37 am HK News Desk ಕರ್ನಾಟಕ
ಯಾದಗಿರಿ, ಆ 25 : ಧರ್ಮಸ್ಥಳದಲ್ಲಿ ಅಸಹಜವಾಗಿ ಸಾವನ್ನಪ್ಪಿದ್ದ ಶವಗಳನ್ನು ಹೂತುಹಾಕಿರುವುದಾಗಿ ಅನಾಮಿಕ ವ್ಯಕ್ತಿ ದೂರು ನೀಡಿದ ಬಳಿಕ, ಈ ಪ್ರಕಣವನ್ನು ಎಸ್ಐಟಿ ತನಿಖೆಗೆ ವಹಿಸಲಾಯಿತು. ಸದ್ಯ, ಎಸ್ಐಟಿ ಕೂಡ ತನಿಖೆಯನ್ನು ಚುರುಕುಗೊಳಿಸಿದೆ. ಈ ನಡುವೆ ಬಿಜೆಪಿ ನಾಯಕರು ಪ್ರಕರಣವನ್ನು ಎನ್ಐಎಗೆ ವಹಿಸಬೇಕೆಂದು ಆಗ್ರಹಿಸಿದ್ದಾರೆ. ಬಿಜೆಪಿ ನಾಯಕರ ಆಗ್ರಹಕ್ಕೆ ಪ್ರತಿಕ್ರಿಯೆ ನೀಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಎನ್ಐಎ ತನಿಖೆಯಾದ್ರೆ ತಪ್ಪಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ಎನ್ಐಎಗೆ ವಹಿಸಿದರೆ ತಪ್ಪೇನಿಲ್ಲ ;
ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆದಿದೆ. ಹಾಗಾಗಿ ಈ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸುವಂತೆ ಮಾಜಿ ಸಿಎಂ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ಹೇಳಿಕೆಗೆ ಸಂಬಂಧಿಸಿದಂತೆ ಯಾದಗಿರಿಯಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಸತೀಶ ಜಾರಕಿಹೊಳಿ, ಬೊಮ್ಮಾಯಿ ಆಗ್ರಹಕ್ಕೆ ಸಚಿವ ಸತೀಶ ಜಾರಕಿಹೊಳಿ ಸಹಮತ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ, ಎನ್ಐಎ ತನಿಖೆಯಾದ್ರೆ ತಪ್ಪೇನು ಇಲ್ಲ ಎಂದು ಹೇಳಿದ್ದಾರೆ.
ಎನ್ಐಎಗೆ ವಹಿಸಿದರೆ ಇದರ ಹಿಂದೆ ಯಾರಿದ್ದಾರೆ ಗೊತ್ತಾಗುತ್ತೆ ;
ಎನ್ಐಎ ತನಿಖೆ ಆದರೆ ಒಳ್ಳೆದು, ಇದರ ಹಿಂದೆ ಯಾರಿದ್ದಾರೆ ಎಂದು ಗೊತ್ತಾಗಲಿದೆ. ಮುಕ್ತಿ ಆಗಬೇಕಾದರೆ ಎನ್ಐಎ ತನಿಖೆ ಇಲ್ಲವೇ ಅದಕ್ಕಿಂತ ಮೇಲೆ ದೊಡ್ಡ ತನಿಖೆ ಆಗಬೇಕು. ಕರ್ನಾಟಕ ಜನತೆ ಬೇರೆ ಕೆಲಸ ಬಿಟ್ಟು ಧರ್ಮಸ್ಥಳದ ಬಗ್ಗೆ ನೋಡ್ತಾ ಕುಳಿತಿದ್ದಾರೆ. ಧರ್ಮಸ್ಥಳದ ಬಗ್ಗೆ ತನಿಖೆಗೆ ಕೋರ್ಟ್ ಆದೇಶ ಮಾಡಿದೆ. ರಾಜ್ಯ ಸರಕಾರ ಎಸ್ಐಟಿ ತನಿಖೆಗೆ ನೀಡಿದೆ. ಇದರಲ್ಲಿ ಎಡಪಂಥೀಯ ಹಾಗೂ ಬಲಪಂಥೀಯ ಎಂಬುದು ಇಲ್ಲ. ದೇಶಕ್ಕೆ ಹಾಗೂ ರಾಜಕೀಯಕ್ಕೆ ಸಂಬಂಧಿಸಿದ ವಿಷಯ ಅಲ್ಲ ಎಂದರು.
ಅದು ಧರ್ಮಸ್ಥಳದ ವಿಚಾರ ಒಂದು ಊರಿಗೆ ಸಂಬಂಧಿಸಿದ್ದು, ಅದು ನೀವು ದೊಡ್ಡದು ಮಾಡಿ ಚರ್ಚೆ ಮಾಡುವುದು ಅನಾವಶ್ಯಕ. ಎಸ್ಐಟಿ ಅವರು 15 ದಿನಗಳಿಂದ ತನಿಖೆ ಮಾಡುತ್ತಿದ್ದಾರೆ. ಕೋರ್ಟ್ ಆದೇಶ ಮಾಡದಿದ್ದರೆ ಅದು ತನಿಖೆ ಯಾರು ಮಾಡ್ತಿದ್ರು?. ಬಿಜೆಪಿಯವರು ಕೋರ್ಟ್ ತನಿಖೆಗೆ ಸೂಚಿಸಿದ್ದು ಮುಚ್ಚಿ ಇಡುತ್ತಾರೆ. ಕಾಂಗ್ರೆಸ್ನವರ ಮೇಲೆ ಆರೋಪ ಮಾಡ್ತಾರೆ. ಯಾರೋ ಒಬ್ಬ ಅರ್ಜಿ ಹಾಕಿದಕ್ಕೆ ತನಿಖೆಗೆ ಕೋರ್ಟ್ ಆದೇಶ ಮಾಡಿದೆ ಎಂದು ಯಾದಗಿರಿಯಲ್ಲಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.
Public Works Minister Satish Jarkiholi has stated that there is no objection if the National Investigation Agency (NIA) takes over the probe into the Dharmasthala case. His statement comes in response to BJP leaders, including former Chief Minister Basavaraj Bommai, demanding that the case be handed over to the central agency.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm