ಬ್ರೇಕಿಂಗ್ ನ್ಯೂಸ್
25-08-25 10:37 am HK News Desk ಕರ್ನಾಟಕ
ಯಾದಗಿರಿ, ಆ 25 : ಧರ್ಮಸ್ಥಳದಲ್ಲಿ ಅಸಹಜವಾಗಿ ಸಾವನ್ನಪ್ಪಿದ್ದ ಶವಗಳನ್ನು ಹೂತುಹಾಕಿರುವುದಾಗಿ ಅನಾಮಿಕ ವ್ಯಕ್ತಿ ದೂರು ನೀಡಿದ ಬಳಿಕ, ಈ ಪ್ರಕಣವನ್ನು ಎಸ್ಐಟಿ ತನಿಖೆಗೆ ವಹಿಸಲಾಯಿತು. ಸದ್ಯ, ಎಸ್ಐಟಿ ಕೂಡ ತನಿಖೆಯನ್ನು ಚುರುಕುಗೊಳಿಸಿದೆ. ಈ ನಡುವೆ ಬಿಜೆಪಿ ನಾಯಕರು ಪ್ರಕರಣವನ್ನು ಎನ್ಐಎಗೆ ವಹಿಸಬೇಕೆಂದು ಆಗ್ರಹಿಸಿದ್ದಾರೆ. ಬಿಜೆಪಿ ನಾಯಕರ ಆಗ್ರಹಕ್ಕೆ ಪ್ರತಿಕ್ರಿಯೆ ನೀಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಎನ್ಐಎ ತನಿಖೆಯಾದ್ರೆ ತಪ್ಪಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ಎನ್ಐಎಗೆ ವಹಿಸಿದರೆ ತಪ್ಪೇನಿಲ್ಲ ;
ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆದಿದೆ. ಹಾಗಾಗಿ ಈ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸುವಂತೆ ಮಾಜಿ ಸಿಎಂ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ಹೇಳಿಕೆಗೆ ಸಂಬಂಧಿಸಿದಂತೆ ಯಾದಗಿರಿಯಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಸತೀಶ ಜಾರಕಿಹೊಳಿ, ಬೊಮ್ಮಾಯಿ ಆಗ್ರಹಕ್ಕೆ ಸಚಿವ ಸತೀಶ ಜಾರಕಿಹೊಳಿ ಸಹಮತ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ, ಎನ್ಐಎ ತನಿಖೆಯಾದ್ರೆ ತಪ್ಪೇನು ಇಲ್ಲ ಎಂದು ಹೇಳಿದ್ದಾರೆ.
ಎನ್ಐಎಗೆ ವಹಿಸಿದರೆ ಇದರ ಹಿಂದೆ ಯಾರಿದ್ದಾರೆ ಗೊತ್ತಾಗುತ್ತೆ ;
ಎನ್ಐಎ ತನಿಖೆ ಆದರೆ ಒಳ್ಳೆದು, ಇದರ ಹಿಂದೆ ಯಾರಿದ್ದಾರೆ ಎಂದು ಗೊತ್ತಾಗಲಿದೆ. ಮುಕ್ತಿ ಆಗಬೇಕಾದರೆ ಎನ್ಐಎ ತನಿಖೆ ಇಲ್ಲವೇ ಅದಕ್ಕಿಂತ ಮೇಲೆ ದೊಡ್ಡ ತನಿಖೆ ಆಗಬೇಕು. ಕರ್ನಾಟಕ ಜನತೆ ಬೇರೆ ಕೆಲಸ ಬಿಟ್ಟು ಧರ್ಮಸ್ಥಳದ ಬಗ್ಗೆ ನೋಡ್ತಾ ಕುಳಿತಿದ್ದಾರೆ. ಧರ್ಮಸ್ಥಳದ ಬಗ್ಗೆ ತನಿಖೆಗೆ ಕೋರ್ಟ್ ಆದೇಶ ಮಾಡಿದೆ. ರಾಜ್ಯ ಸರಕಾರ ಎಸ್ಐಟಿ ತನಿಖೆಗೆ ನೀಡಿದೆ. ಇದರಲ್ಲಿ ಎಡಪಂಥೀಯ ಹಾಗೂ ಬಲಪಂಥೀಯ ಎಂಬುದು ಇಲ್ಲ. ದೇಶಕ್ಕೆ ಹಾಗೂ ರಾಜಕೀಯಕ್ಕೆ ಸಂಬಂಧಿಸಿದ ವಿಷಯ ಅಲ್ಲ ಎಂದರು.
ಅದು ಧರ್ಮಸ್ಥಳದ ವಿಚಾರ ಒಂದು ಊರಿಗೆ ಸಂಬಂಧಿಸಿದ್ದು, ಅದು ನೀವು ದೊಡ್ಡದು ಮಾಡಿ ಚರ್ಚೆ ಮಾಡುವುದು ಅನಾವಶ್ಯಕ. ಎಸ್ಐಟಿ ಅವರು 15 ದಿನಗಳಿಂದ ತನಿಖೆ ಮಾಡುತ್ತಿದ್ದಾರೆ. ಕೋರ್ಟ್ ಆದೇಶ ಮಾಡದಿದ್ದರೆ ಅದು ತನಿಖೆ ಯಾರು ಮಾಡ್ತಿದ್ರು?. ಬಿಜೆಪಿಯವರು ಕೋರ್ಟ್ ತನಿಖೆಗೆ ಸೂಚಿಸಿದ್ದು ಮುಚ್ಚಿ ಇಡುತ್ತಾರೆ. ಕಾಂಗ್ರೆಸ್ನವರ ಮೇಲೆ ಆರೋಪ ಮಾಡ್ತಾರೆ. ಯಾರೋ ಒಬ್ಬ ಅರ್ಜಿ ಹಾಕಿದಕ್ಕೆ ತನಿಖೆಗೆ ಕೋರ್ಟ್ ಆದೇಶ ಮಾಡಿದೆ ಎಂದು ಯಾದಗಿರಿಯಲ್ಲಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.
Public Works Minister Satish Jarkiholi has stated that there is no objection if the National Investigation Agency (NIA) takes over the probe into the Dharmasthala case. His statement comes in response to BJP leaders, including former Chief Minister Basavaraj Bommai, demanding that the case be handed over to the central agency.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm