ಬ್ರೇಕಿಂಗ್ ನ್ಯೂಸ್
25-08-25 10:37 am HK News Desk ಕರ್ನಾಟಕ
ಯಾದಗಿರಿ, ಆ 25 : ಧರ್ಮಸ್ಥಳದಲ್ಲಿ ಅಸಹಜವಾಗಿ ಸಾವನ್ನಪ್ಪಿದ್ದ ಶವಗಳನ್ನು ಹೂತುಹಾಕಿರುವುದಾಗಿ ಅನಾಮಿಕ ವ್ಯಕ್ತಿ ದೂರು ನೀಡಿದ ಬಳಿಕ, ಈ ಪ್ರಕಣವನ್ನು ಎಸ್ಐಟಿ ತನಿಖೆಗೆ ವಹಿಸಲಾಯಿತು. ಸದ್ಯ, ಎಸ್ಐಟಿ ಕೂಡ ತನಿಖೆಯನ್ನು ಚುರುಕುಗೊಳಿಸಿದೆ. ಈ ನಡುವೆ ಬಿಜೆಪಿ ನಾಯಕರು ಪ್ರಕರಣವನ್ನು ಎನ್ಐಎಗೆ ವಹಿಸಬೇಕೆಂದು ಆಗ್ರಹಿಸಿದ್ದಾರೆ. ಬಿಜೆಪಿ ನಾಯಕರ ಆಗ್ರಹಕ್ಕೆ ಪ್ರತಿಕ್ರಿಯೆ ನೀಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಎನ್ಐಎ ತನಿಖೆಯಾದ್ರೆ ತಪ್ಪಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ಎನ್ಐಎಗೆ ವಹಿಸಿದರೆ ತಪ್ಪೇನಿಲ್ಲ ;
ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆದಿದೆ. ಹಾಗಾಗಿ ಈ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸುವಂತೆ ಮಾಜಿ ಸಿಎಂ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ಹೇಳಿಕೆಗೆ ಸಂಬಂಧಿಸಿದಂತೆ ಯಾದಗಿರಿಯಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಸತೀಶ ಜಾರಕಿಹೊಳಿ, ಬೊಮ್ಮಾಯಿ ಆಗ್ರಹಕ್ಕೆ ಸಚಿವ ಸತೀಶ ಜಾರಕಿಹೊಳಿ ಸಹಮತ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ, ಎನ್ಐಎ ತನಿಖೆಯಾದ್ರೆ ತಪ್ಪೇನು ಇಲ್ಲ ಎಂದು ಹೇಳಿದ್ದಾರೆ.
ಎನ್ಐಎಗೆ ವಹಿಸಿದರೆ ಇದರ ಹಿಂದೆ ಯಾರಿದ್ದಾರೆ ಗೊತ್ತಾಗುತ್ತೆ ;
ಎನ್ಐಎ ತನಿಖೆ ಆದರೆ ಒಳ್ಳೆದು, ಇದರ ಹಿಂದೆ ಯಾರಿದ್ದಾರೆ ಎಂದು ಗೊತ್ತಾಗಲಿದೆ. ಮುಕ್ತಿ ಆಗಬೇಕಾದರೆ ಎನ್ಐಎ ತನಿಖೆ ಇಲ್ಲವೇ ಅದಕ್ಕಿಂತ ಮೇಲೆ ದೊಡ್ಡ ತನಿಖೆ ಆಗಬೇಕು. ಕರ್ನಾಟಕ ಜನತೆ ಬೇರೆ ಕೆಲಸ ಬಿಟ್ಟು ಧರ್ಮಸ್ಥಳದ ಬಗ್ಗೆ ನೋಡ್ತಾ ಕುಳಿತಿದ್ದಾರೆ. ಧರ್ಮಸ್ಥಳದ ಬಗ್ಗೆ ತನಿಖೆಗೆ ಕೋರ್ಟ್ ಆದೇಶ ಮಾಡಿದೆ. ರಾಜ್ಯ ಸರಕಾರ ಎಸ್ಐಟಿ ತನಿಖೆಗೆ ನೀಡಿದೆ. ಇದರಲ್ಲಿ ಎಡಪಂಥೀಯ ಹಾಗೂ ಬಲಪಂಥೀಯ ಎಂಬುದು ಇಲ್ಲ. ದೇಶಕ್ಕೆ ಹಾಗೂ ರಾಜಕೀಯಕ್ಕೆ ಸಂಬಂಧಿಸಿದ ವಿಷಯ ಅಲ್ಲ ಎಂದರು.
ಅದು ಧರ್ಮಸ್ಥಳದ ವಿಚಾರ ಒಂದು ಊರಿಗೆ ಸಂಬಂಧಿಸಿದ್ದು, ಅದು ನೀವು ದೊಡ್ಡದು ಮಾಡಿ ಚರ್ಚೆ ಮಾಡುವುದು ಅನಾವಶ್ಯಕ. ಎಸ್ಐಟಿ ಅವರು 15 ದಿನಗಳಿಂದ ತನಿಖೆ ಮಾಡುತ್ತಿದ್ದಾರೆ. ಕೋರ್ಟ್ ಆದೇಶ ಮಾಡದಿದ್ದರೆ ಅದು ತನಿಖೆ ಯಾರು ಮಾಡ್ತಿದ್ರು?. ಬಿಜೆಪಿಯವರು ಕೋರ್ಟ್ ತನಿಖೆಗೆ ಸೂಚಿಸಿದ್ದು ಮುಚ್ಚಿ ಇಡುತ್ತಾರೆ. ಕಾಂಗ್ರೆಸ್ನವರ ಮೇಲೆ ಆರೋಪ ಮಾಡ್ತಾರೆ. ಯಾರೋ ಒಬ್ಬ ಅರ್ಜಿ ಹಾಕಿದಕ್ಕೆ ತನಿಖೆಗೆ ಕೋರ್ಟ್ ಆದೇಶ ಮಾಡಿದೆ ಎಂದು ಯಾದಗಿರಿಯಲ್ಲಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.
Public Works Minister Satish Jarkiholi has stated that there is no objection if the National Investigation Agency (NIA) takes over the probe into the Dharmasthala case. His statement comes in response to BJP leaders, including former Chief Minister Basavaraj Bommai, demanding that the case be handed over to the central agency.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am