ಬ್ರೇಕಿಂಗ್ ನ್ಯೂಸ್
25-08-25 10:55 pm Bangalore Correspondent ಕರ್ನಾಟಕ
ಬೆಂಗಳೂರು, ಆ 25 : ಅನನ್ಯ ಭಟ್ ನಾಪತ್ತೆ ಪ್ರಕರಣದ ಬೆನ್ನು ಬಿದ್ದಿರುವ ಎಸ್ಐಟಿ ಅಧಿಕಾರಿಗಳ ತಂಡ ನಾಲ್ಕು ದಶಕದ ಹಿಂದಿನ ಮಾಹಿತಿ ಕಲೆ ಹಾಕುತ್ತಿದೆ. ತನಿಖಾಧಿಕಾರಿಗಳ ಮುಂದೆ ಗೊಂದಲದ ಹೇಳಿಕೆ ನೀಡುತ್ತಿರುವ ಸುಜಾತಾ ಭಟ್ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ದೂರುದಾರೆ ಸುಜಾತಾ ಭಟ್ ನೆಲೆಸಿರುವ ಬನಶಂಕರಿ ನಿವಾಸಕ್ಕೆ ಪೊಲೀಸರು ಬಂದೋಬಸ್ತ್ ಮುಂದುವರಿಸಿದ್ದಾರೆ. ಎಸ್ಐಟಿ ಅಧಿಕಾರಿಗಳ ನೋಟಿಸ್ಗೆ ಸುಜಾತಾ ಭಟ್, ಆರೋಗ್ಯದ ಕಾರಣ ನೀಡಿ ಆ.29ಕ್ಕೆ ಹಾಜರಾಗುವುದಾಗಿ ಹೇಳಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ತನಿಖಾಧಿಕಾರಿಗಳು ಸುಜಾತಾ ಭಟ್ ಮನೆಯಲ್ಲಿಯೇ ಹೇಳಿಕೆ ಪಡೆಯಲಾಗುವುದು ಎಂದು ಹೇಳಿದ್ದಾರೆ. ಸುಜಾತಾ ಭಟ್ ಹಿನ್ನೆಲೆ ಹಾಗೂ ಉಡುಪಿ, ಬೆಂಗಳೂರಿನಲ್ಲಿ ನೆಲೆಸಿದ್ದರು, ಯಾರ ಜತೆ ವಾಸವಾಗಿದ್ದರು ಎಂಬ ಮಾಹಿತಿ ಕಲೆ ಹಾಕುತ್ತಿದ್ದಾರೆ.
2003ರಲ್ಲಿ ಅನನ್ಯ ಭಟ್ ಕಾಣೆಯಾದ ಸಂದರ್ಭದಲ್ಲಿ ಸುಜಾತಾ ಭಟ್ ಎಲ್ಲಿದ್ದರು? ಅವರ ಮಗಳು ಹೌದಾ ಅಥವಾ ಅಲ್ಲವೋ ಎಂಬ ಮಾಹಿತಿ ಸಂಗ್ರಹಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. ಬೆಳ್ತಂಗಡಿ, ಧರ್ಮಸ್ಥಳ ಠಾಣಾ ವ್ಯಾಪ್ತಿಯಲ್ಲಿ ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಹತ್ಯೆ ನಡೆಸಿ, ಶವಗಳನ್ನು ಮುಚ್ಚಿಹಾಕಿರುವ ಹುಡುಕಾಟದ ಸಂದರ್ಭದಲ್ಲಿ ಸುಜಾತಾ ಭಟ್ ಅವರು ನನ್ನ ಮಗಳು ಅನನ್ಯ ಭಟ್ ಳನ್ನ ಧರ್ಮಸ್ಥಳದಲ್ಲಿ ಕೊಲೆ ಮಾಡಿ ಹೂತು ಹಾಕಲಾಗಿದೆ ಎಂದು ನೀಡಿರುವ ಹೇಳಿಕೆ ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು.
ಬನಶಂಕರಿ ಪೊಲೀಸ್ ಠಾಣೆ ವ್ಯಾಪ್ತಿಯ ಅಪಾರ್ಟ್ಮೆಂಟ್ ಒಂದರಲ್ಲಿ ಸುಜಾತಾ ಭಟ್ 3 ವರ್ಷಗಳಿಂದ ವಾಸಿಸುತ್ತಿದ್ದಾರೆ. ಮನೆಯ ಬಳಿ ಸಾರ್ವಜನಿಕರು, ಮಾಧ್ಯಮದವರು ಬಾರದಂತೆ ನಿರ್ಬಂಧ ಹೇರಿ, ಯಾರೂ ಮನೆಯ ಹತ್ತಿರ ಬರದಂತೆ ನೋಡಿಕೊಳ್ಳಿ ಎಂದು ಅವರು ಪೊಲೀಸರಿಗೆ ಮನವಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ನಿವಾಸದ ಸುತ್ತ ಭದ್ರತೆ ಒದಗಿಸಿದ್ದಾರೆ. ಇವರ ಮನೆಗೆ ಎಸ್ಐಟಿ ಅಧಿಕಾರಿಗಳು ಬರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮನೆಯ ಮುಂಭಾಗದಲ್ಲಿ 10ಕ್ಕೂ ಹೆಚ್ಚಿನ ಪೊಲೀಸರು ಬ್ಯಾರಿಕೇಡ್ ಹಾಕಲಾಗಿದೆ. ಸ್ಥಳದಲ್ಲಿ ಸಿಎಆರ್ ತುಕಡಿಯನ್ನೂ ನಿಯೋಜಿಸಲಾಗಿದೆ.
The Special Investigation Team (SIT) probing the mysterious disappearance of Ananya Bhat has issued a notice to Sujatha Bhat, who made sensational claims linking the case to the Dharmasthala region.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am