ಬ್ರೇಕಿಂಗ್ ನ್ಯೂಸ್
25-08-25 10:55 pm Bangalore Correspondent ಕರ್ನಾಟಕ
ಬೆಂಗಳೂರು, ಆ 25 : ಅನನ್ಯ ಭಟ್ ನಾಪತ್ತೆ ಪ್ರಕರಣದ ಬೆನ್ನು ಬಿದ್ದಿರುವ ಎಸ್ಐಟಿ ಅಧಿಕಾರಿಗಳ ತಂಡ ನಾಲ್ಕು ದಶಕದ ಹಿಂದಿನ ಮಾಹಿತಿ ಕಲೆ ಹಾಕುತ್ತಿದೆ. ತನಿಖಾಧಿಕಾರಿಗಳ ಮುಂದೆ ಗೊಂದಲದ ಹೇಳಿಕೆ ನೀಡುತ್ತಿರುವ ಸುಜಾತಾ ಭಟ್ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ದೂರುದಾರೆ ಸುಜಾತಾ ಭಟ್ ನೆಲೆಸಿರುವ ಬನಶಂಕರಿ ನಿವಾಸಕ್ಕೆ ಪೊಲೀಸರು ಬಂದೋಬಸ್ತ್ ಮುಂದುವರಿಸಿದ್ದಾರೆ. ಎಸ್ಐಟಿ ಅಧಿಕಾರಿಗಳ ನೋಟಿಸ್ಗೆ ಸುಜಾತಾ ಭಟ್, ಆರೋಗ್ಯದ ಕಾರಣ ನೀಡಿ ಆ.29ಕ್ಕೆ ಹಾಜರಾಗುವುದಾಗಿ ಹೇಳಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ತನಿಖಾಧಿಕಾರಿಗಳು ಸುಜಾತಾ ಭಟ್ ಮನೆಯಲ್ಲಿಯೇ ಹೇಳಿಕೆ ಪಡೆಯಲಾಗುವುದು ಎಂದು ಹೇಳಿದ್ದಾರೆ. ಸುಜಾತಾ ಭಟ್ ಹಿನ್ನೆಲೆ ಹಾಗೂ ಉಡುಪಿ, ಬೆಂಗಳೂರಿನಲ್ಲಿ ನೆಲೆಸಿದ್ದರು, ಯಾರ ಜತೆ ವಾಸವಾಗಿದ್ದರು ಎಂಬ ಮಾಹಿತಿ ಕಲೆ ಹಾಕುತ್ತಿದ್ದಾರೆ.
2003ರಲ್ಲಿ ಅನನ್ಯ ಭಟ್ ಕಾಣೆಯಾದ ಸಂದರ್ಭದಲ್ಲಿ ಸುಜಾತಾ ಭಟ್ ಎಲ್ಲಿದ್ದರು? ಅವರ ಮಗಳು ಹೌದಾ ಅಥವಾ ಅಲ್ಲವೋ ಎಂಬ ಮಾಹಿತಿ ಸಂಗ್ರಹಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. ಬೆಳ್ತಂಗಡಿ, ಧರ್ಮಸ್ಥಳ ಠಾಣಾ ವ್ಯಾಪ್ತಿಯಲ್ಲಿ ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಹತ್ಯೆ ನಡೆಸಿ, ಶವಗಳನ್ನು ಮುಚ್ಚಿಹಾಕಿರುವ ಹುಡುಕಾಟದ ಸಂದರ್ಭದಲ್ಲಿ ಸುಜಾತಾ ಭಟ್ ಅವರು ನನ್ನ ಮಗಳು ಅನನ್ಯ ಭಟ್ ಳನ್ನ ಧರ್ಮಸ್ಥಳದಲ್ಲಿ ಕೊಲೆ ಮಾಡಿ ಹೂತು ಹಾಕಲಾಗಿದೆ ಎಂದು ನೀಡಿರುವ ಹೇಳಿಕೆ ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು.
ಬನಶಂಕರಿ ಪೊಲೀಸ್ ಠಾಣೆ ವ್ಯಾಪ್ತಿಯ ಅಪಾರ್ಟ್ಮೆಂಟ್ ಒಂದರಲ್ಲಿ ಸುಜಾತಾ ಭಟ್ 3 ವರ್ಷಗಳಿಂದ ವಾಸಿಸುತ್ತಿದ್ದಾರೆ. ಮನೆಯ ಬಳಿ ಸಾರ್ವಜನಿಕರು, ಮಾಧ್ಯಮದವರು ಬಾರದಂತೆ ನಿರ್ಬಂಧ ಹೇರಿ, ಯಾರೂ ಮನೆಯ ಹತ್ತಿರ ಬರದಂತೆ ನೋಡಿಕೊಳ್ಳಿ ಎಂದು ಅವರು ಪೊಲೀಸರಿಗೆ ಮನವಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ನಿವಾಸದ ಸುತ್ತ ಭದ್ರತೆ ಒದಗಿಸಿದ್ದಾರೆ. ಇವರ ಮನೆಗೆ ಎಸ್ಐಟಿ ಅಧಿಕಾರಿಗಳು ಬರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮನೆಯ ಮುಂಭಾಗದಲ್ಲಿ 10ಕ್ಕೂ ಹೆಚ್ಚಿನ ಪೊಲೀಸರು ಬ್ಯಾರಿಕೇಡ್ ಹಾಕಲಾಗಿದೆ. ಸ್ಥಳದಲ್ಲಿ ಸಿಎಆರ್ ತುಕಡಿಯನ್ನೂ ನಿಯೋಜಿಸಲಾಗಿದೆ.
The Special Investigation Team (SIT) probing the mysterious disappearance of Ananya Bhat has issued a notice to Sujatha Bhat, who made sensational claims linking the case to the Dharmasthala region.
29-12-25 11:13 pm
Bangalore Correspondent
ಡ್ರಗ್ಸ್ ಫ್ಯಾಕ್ಟರಿ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳಿ...
29-12-25 07:24 pm
ವ್ಯಾಪಕ ಭ್ರಷ್ಟಾಚಾರ ; ಕೋಲಾರದಲ್ಲಿ 25 ಗ್ರಾಪಂ ವಿರು...
28-12-25 09:03 pm
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 11:03 pm
Mangalore Correspondent
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
29-12-25 03:02 pm
Mangalore Correspondent
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm