ಬ್ರೇಕಿಂಗ್ ನ್ಯೂಸ್
25-12-20 03:37 pm Headline Karnataka News Network ಕರ್ನಾಟಕ
ಮೈಸೂರು, ಡಿ.25 : ಕೊರೊನಾ ಕಾರಣಕ್ಕೆ ಕಳೆದ ಹತ್ತು ತಿಂಗಳಿನಿಂದಲೂ ಜನರು ನಿರ್ಬಂಧದ ವ್ಯವಸ್ಥೆಯಲ್ಲೇ ಇದ್ದಾರೆ. ಜನರನ್ನ ಇನ್ನೆಷ್ಟು ದಿನ ಮನೆಯಲ್ಲಿ ಕೂರಿಸ್ತೀರಾ..? ಮಾಸ್ಕ್ ಹೆಸರಿನಲ್ಲಿ ಜನರಿಗೆ ಅನಗತ್ಯ ತೊಂದರೆ ಕೊಡುವುದನ್ನು ತಪ್ಪಿಸಿ ಎಂದು ಸಂಸದ ಪ್ರತಾಪಸಿಂಹ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಹೆಸರಿನಲ್ಲಿ ಜನರು ಮನೆಯಲ್ಲಿ ಬಂಧಿಯಾಗಿದ್ದಾರೆ. ಇನ್ನು ಮುಂದಾದರೂ ಜನರನ್ನು ಓಡಾಡಲು ಬಿಡಿ. ಮಾಸ್ಕ್ ಹೆಸರಿನಲ್ಲಿ ಜನರಿಗೆ ಅನಗತ್ಯ ತೊಂದರೆ ಕೊಡಬೇಡಿ. ನಾನು ದೆಹಲಿ ಸೇರಿದಂತೆ ಹಲವು ಕಡೆಗಳಿಗೆ ಹೋಗಿ ಬಂದಿದ್ದೇನೆ. ಎಲ್ಲಾ ಕಡೆ ಕೊರೋನಾ ರೂಪಾಂತರದ ಬಗ್ಗೆ ಚರ್ಚೆ ಇದೆ. ಆದರೆ ಜನರನ್ನು ಹೆಚ್ಚು ದಿನ ನಿರ್ಬಂಧ ಮಾಡಲು ಸಾಧ್ಯವಿಲ್ಲ. ಸರಿಯೂ ಅಲ್ಲ ಎನ್ನುವ ಮೂಲಕ ರಾಜ್ಯ ಸರಕಾರದ ನೈಟ್ ಕರ್ಫ್ಯೂ ಬಗ್ಗೆ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.
ಕೊರೊನಾದಿಂದಾಗಿ ಹಲವು ಉದ್ಯಮ ಸಂಸ್ಥೆಗಳು ತೀವ್ರ ಪರಿಣಾಮ ಎದುರಿಸಿವೆ. ಏನೇ ನಿರ್ಬಂಧ ಇದ್ದರೂ ಉದ್ಯಮ ಹಾಗೂ ಅವರ ದೈನಂದಿನ ಚಟುವಟಿಕೆಗಳಿಗೆ ಅವಕಾಶ ಕೊಡಬೇಕು. ಮಾಸ್ಕ್ ಕಡ್ಡಾಯ ಮಾಡಿ. ಆದರೇ ಮಾಸ್ಕ್ ಹೆಸರಿನಲ್ಲಿ ಕಾರು, ಬೈಕ್ ನಿಲ್ಲಿಸಿ ಜನರಿಗೆ ತೊಂದರೆ ಕೊಡಬೇಡಿ. ಸದ್ಯದಲ್ಲೇ ಕೊರೊನಾ ಲಸಿಕೆ ಸಹ ಬರುತ್ತಿದೆ ಎಂದು ತಿಳಿಸಿದರು.

ನೀವು ತಿಂತೀರಿ ಅಂತ ಕುರುಬ ಸಮಾಜವೇ ಬೀಫ್ ತಿನ್ನುತ್ತಾರೆಯೇ ?
ಕೊಡಗಿನವರು ಗೋ ಮಾಂಸ ಸೇವಿಸುತ್ತಾರೆಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ನೀವು ಗೋಮಾಂಸ ತಿನ್ನುತ್ತೀರಿ ಎಂದು ಇಡೀ ಕುರುಬ ಸಮಾಜದವರು ಬೀಫ್ ತಿನ್ನುತ್ತಾರೆ ಎನ್ನಲು ಆಗುತ್ತಾ ? ಸಿದ್ದರಾಮಯ್ಯ ಅವರು ವಿವೇಚನೆ ಇಲ್ಲದೆ ಯಾಕೆ ಹೀಗೆ ಮಾತನಾಡುತ್ತಿದ್ದಾರೆ ಎನ್ನುವುದೇ ನನಗೆ ಅರ್ಥವಾಗುತ್ತಿಲ್ಲ. ಆತ್ಮದ್ರೋಹದ ಮಾತುಗಳನ್ನು ಕಾಂಗ್ರೆಸ್ನವರು ಮಾತ್ರ ಆಡೋಕೆ ಸಾಧ್ಯ. ಕೊಡವರ ಬಗ್ಗೆ ಹಗುರವಾಗಿ ಮಾತನಾಡಬೇಡಿ. ಅವರು ಗೋವನ್ನು ಎರಡನೇ ತಾಯಿಯಾಗಿ ನೋಡುತ್ತಾರೆ. ಕೋಟ್ಯಂತರ ಜನರ ಭಾವನೆಗೆ ಧಕ್ಕೆ ತರುವ, ಕೊಡವರಿಗೆ ನೋವಾಗುವಂತಹ ಮಾತುಗಳನ್ನಾಡಬೇಡಿ ಎಂದು ತಿಳಿಸಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm