ಬ್ರೇಕಿಂಗ್ ನ್ಯೂಸ್
27-08-25 11:48 am Bangalore Correspondent ಕರ್ನಾಟಕ
ಬೆಂಗಳೂರು, ಆ.28: ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರ ಹೆಸರು ಭಾರೀ ವಿವಾದಕ್ಕೆ ಕಾರಣವಾಗಿದೆ. ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟಕರಾಗಿ ಆಹ್ವಾನಿಸಿರುವುದು ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆ ಆಕ್ರೋಶಕ್ಕೆ ಕಾರಣವಾಗಿದೆ.
ಹಿಂದೂ ಸಂಪ್ರದಾಯಗಳ ಬಗ್ಗೆ ಬಾನು ಮುಷ್ತಾಕ್ಗೆ ನಂಬಿಕೆ, ಗೌರವ ಇಲ್ಲ. ಹೀಗಾಗಿ ಅವರನ್ನು ಆಹ್ವಾನಿಸಬಾರದು ಅಂತ ವಿರೋಧಿಗಳು ಆಗ್ರಹಿಸಿದ್ದಾರೆ. ಇತ್ತ ಕಾಂಗ್ರೆಸ್ ನಾಯಕರು ಬಾನು ಮುಷ್ತಾಕ್ ಅವರನ್ನು ಸಮರ್ಥಿಸಿಕೊಂಡಿದ್ದಾರೆ. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದು, ಕನ್ನಡದಲ್ಲಿ ಲೇಖನ ಬರೆದಾಗ ಯಾಕೆ ಬಾನು ಮುಷ್ತಾಕ್ರನ್ನ ವಿರೋಧಿಸಲಿಲ್ಲ ಅಂತ ಪ್ರಶ್ನಿಸಿದ್ದಾರೆ. ಅಲ್ಲದೇ ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂದಿದ್ದಾರೆ.
ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ;
ಮೈಸೂರಿನ ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಅಂತ ಡಿಕೆ ಹೇಳಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಬೇಡ ಎಂಬ ಬಿಜೆಪಿ ನಾಯಕರ ವಿರೋಧದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಅಂತ ಕಿಡಿಕಾರಿದ್ದಾರೆ
ಹಿಂದೂಗಳು ಮುಸ್ಲಿಂ ಆಗಿ ಕನ್ವರ್ಟ್ ಆಗಿಲ್ವಾ?
ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಸಮಾಜದವ್ರು ಹೋಗ್ತಾರೆ, ಬರ್ತಾರೆ. ನಾವೂ ಕೂಡ ಎಲ್ಲಾ ಸಮಾಜಗಳ ದೇಗುಲ, ಮಂದಿರಗಳಿಗೆ ಹೋಗ್ತೀವಿ. ನಾವು ಗುರುದ್ವಾರಕ್ಕೆ ಹೋಗೋದನ್ನ ಯಾರಾದ್ರೂ ತಪ್ಪಿಸಿದ್ದಾರಾ? ಅಂತ ಡಿಕೆಶಿ ಪ್ರಶ್ನಿಸಿದ್ದಾರೆ. ಎಷ್ಟೋ ಜನ ಹಿಂದೂಗಳು ಮುಸ್ಲಿಂ ಆಗಿ ಕನ್ವರ್ಟ್ ಆಗಿಲ್ವಾ ಅಂತ ಡಿಕೆಶಿ ಪ್ರಶ್ನಿಸಿದ್ದಾರೆ.
ಬಾನು ಮುಷ್ತಾಕ್ ಯಾಕೆ ಚಾಮುಂಡಿ ಬೆಟ್ಟ ಹತ್ತಬಾರದು?
ಬಾನು ಮುಷ್ತಾಕ್ರನ್ನ ಯಾಕೆ ಚಾಮುಂಡಿ ಬೆಟ್ಟ ಹತ್ತಿಸಬಾರದು? ಎಂದು ಪ್ರಶ್ನಿಸಿರುವ ಡಿಕೆ ಶಿವಕುಮಾರ್, ಅಯೋಧ್ಯೆಗೆ ಹಿಂದೂಗಳು ಮಾತ್ರ ಬರಬೇಕು ಅಂತ ಯಾಕೆ ಬೋರ್ಡ್ ಹಾಕಿಲ್ಲ? ಕೇಂದ್ರ ಸರ್ಕಾರ ಹಜ್ ಕಮಿಟಿ, ಮೈನಾರಿಟಿ ಕಮಿಟಿಗಳನ್ನ ಯಾಕೆ ತೆಗೆದಿಲ್ಲ? ಅಂತ ಬಿಜೆಪಿ ನಾಯಕರಿಗೆ ಪ್ರಶ್ನಿಸಿದ್ದಾರೆ.
The selection of Booker Prize-winning author Banumustak as the inaugurator of this year’s world-renowned Mysuru Dasara festival has sparked major controversy, with the BJP and various Hindu organizations expressing outrage over the decision.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am