ಬ್ರೇಕಿಂಗ್ ನ್ಯೂಸ್
27-08-25 06:21 pm Bangalore Correspondent ಕರ್ನಾಟಕ
ಬೆಂಗಳೂರು, ಆ.27: ಚಾಮುಂಡಿ ಬೆಟ್ಟದ ಕುರಿತು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡ ಡಿಸಿಎಂ ಡಿ.ಕೆ.ಶಿವಕುಮಾರ್, "ಇದು ಸರ್ಕಾರದ ಆಸ್ತಿ. ಎಲ್ಲೂ ಹಿಂದೂ ಧರ್ಮದ್ದು ಅಂತ ಹೇಳಿಲ್ಲ" ಎಂದು ತಿಳಿಸಿದರು.
ಸದಾಶಿವನಗರ ನಿವಾಸದಲ್ಲಿಂದು ಮಾತನಾಡಿದ ಅವರು, "ಚಾಮುಂಡಿಯನ್ನು ನಾಡದೇವತೆ ಅಂತ ಕರೆಯುತ್ತೇವೆ. ರಾಜವಂಶಸ್ಥರು, ಸರ್ಕಾರ ಇಬ್ಬರೂ ಕರೆಯೋದು ಹಾಗೆ. ಇದು ಸರ್ಕಾರದ ಆಸ್ತಿ. ಎಲ್ಲೂ ಹಿಂದೂ ಧರ್ಮದ್ದು ಅಂತ ಹೇಳಿಲ್ಲ. ಹಿಂದೂಗಳು ಮಾತ್ರ ಬರಬೇಕು ಅಂತ ಇಲ್ಲ. ಎಲ್ಲಾ ಧರ್ಮದವರನ್ನೂ ಆಶೀರ್ವದಿಸುವ ದೇವತೆ. ನಾಡಹಬ್ಬಕ್ಕೆ ವಿದೇಶಿಗರೂ ಬರ್ತಾರೆ. ಬೇರೆ ಧರ್ಮದವರೂ ಬರ್ತಾರೆ" ಎಂದರು.
"ಮಹಾರಾಜರು ವಿದೇಶಿಯರನ್ನು ಆಹ್ವಾನಿಸುತ್ತಿದ್ರು. ಅವರೆಲ್ಲ ಯಾವ ಸಮುದಾಯಕ್ಕೆ ಸೇರಿದವರು?. ಬಾನು ಮುಷ್ತಾಕ್ ಬೆಟ್ಟ ಹತ್ತಬಾರದು ಅಂದ್ರೆ ಹೇಗೆ?. ನೀರು, ಸೂರ್ಯ, ದೇವರಿಗೆ ಧರ್ಮವಿಲ್ಲ. ಕ್ರಿಶ್ಚಿಯನ್ನರ ಚರ್ಚ್, ಮುಸ್ಲಿಮರ ಮಸೀದಿಗೆ ನಮ್ಮನ್ನು ಬಿಡಲ್ವೇ?. ಗೊಮ್ಮಟಗಿರಿಗೆ ನಮ್ಮನ್ನು ಬಿಡುವುದಿಲ್ವೇ?. ಅವರು ನಮ್ಮನ್ನು ಬರಬಾರದು ಅಂತ ಹೇಳ್ತಾರಾ" ಎಂದು ಪ್ರಶ್ನಿಸಿದರು.
ಯದುವೀರ್ ಇತಿಹಾಸ ಮರೆತಿದ್ದಾರೆ-ಡಿಕೆಶಿ:
"ಯದುವೀರ್ ಬಿಜೆಪಿ ಸೇರಿದ್ದಾರೆ. ಅವರು ಇತಿಹಾಸವನ್ನು ಮರೆತಿದ್ದಾರೆ. ನಾವು ಗೃಹಲಕ್ಷ್ಮಿ ಹಣ ಚಾಮುಂಡಿ ಮುಂದಿಟ್ಟು ಪೂಜಿಸಿದ್ವಿ. ಎಲ್ಲಾ ಧರ್ಮದವರಿಗೆ ಗ್ಯಾರಂಟಿ ಕೊಡ್ತಿದ್ದೇವೆ. ಹೀಗಾಗಿ ಜಾತಿ ಧರ್ಮದ ಬಣ್ಣ ಕಟ್ಟಬಾರದು" ಎಂದು ತಿಳಿಸಿದರು.
ಬಿಜೆಪಿಗಿಂತ ನಾವು ಹೆಚ್ಚು ಹಿಂದುತ್ವದವರು:
"ಬ್ಯಾರಿಗಳು ನಮಗಿಂತ ಕನ್ನಡ ಚೆನ್ನಾಗಿ ಮಾತಾಡ್ತಾರೆ. ಅವರನ್ನು ತಳ್ಳುವುದಕ್ಕೆ ಆಗುತ್ತಾ?. ನಮ್ಮನ್ನು ನೀವು ಬರಬೇಡಿ ಅಂತಾರಾ?. ಬಿಜೆಪಿಗಿಂತ ನಾವು ಹೆಚ್ಚು ಹಿಂದುತ್ವದವರು. ದೇಶದಲ್ಲಿ ಇರೋರನ್ನು ಓಡಿಸೋಕೆ ಆಗುತ್ತಾ" ಎಂದು ಕೇಳಿದರು.
Karnataka Deputy Chief Minister DK Shivakumar has defended his recent remark on Chamundi Hill, which triggered backlash from opposition leaders. Speaking to the media at his residence in Sadashivanagar, he clarified that Chamundi Hill is government property and not exclusively a Hindu religious site.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
02-11-25 05:13 pm
HK News Desk
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
02-11-25 06:57 pm
Mangalore Correspondent
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm