ಬ್ರೇಕಿಂಗ್ ನ್ಯೂಸ್
29-08-25 05:59 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಆ 29 : ಚಿಂತಾಮಣಿ ಹೆಬ್ಬರಿ ಗ್ರಾಮದಲ್ಲಿರುವ ಫಾರ್ಮ್ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿರುವುದು ದೃಢಪಟ್ಟಿದೆ. ಮುನ್ನೆಚ್ಚರಿಕಾ ಕ್ರಮವಾಗಿ 57 ಹಂದಿಗಳನ್ನು ಸಾಯಿಸಲು ನಿರ್ಧಾರ ಕೈಗೊಳ್ಳಲಾಗಿದೆ.
ಹಂದಿ ಫಾರ್ಮ್ನಲ್ಲಿ ಆಗಸ್ಟ್ 19ರಿಂದ ಇಲ್ಲಿಯವರೆಗೂ 100 ಹಂದಿಗಳು ಸಾವನ್ನಪ್ಪಿವೆ. ಇದರಿಂದ ಎಚ್ಚೆತ್ತ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದರು. ಹಂದಿಗಳ ರಕ್ತದ ಸ್ಯಾಂಪಲ್ ಭೋಪಾಲ್ನ ರಾಷ್ಟ್ರೀಯ ಲ್ಯಾಬ್ಗೆ ಕಳುಹಿಸಲಾಗಿತ್ತು. ಲ್ಯಾಬ್ ವರದಿಯಲ್ಲಿ ಆಫ್ರಿಕನ್ ಹಂದಿ ಜ್ವರ ದೃಢಪಟ್ಟಿದೆ. ಹೀಗಾಗಿ, ಮುನ್ನೆಚ್ಚರಿಕಾ ಕ್ರಮವಾಗಿ ಫಾರಂನಲ್ಲಿರುವ 57 ಹಂದಿಗಳನ್ನು ಸಾಯಿಸಲು ನಿರ್ಧರಿಸಲಾಗಿದೆ.
ಪಶುಪಾಲನಾ, ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರಾದ ಡಾ.ರಂಗಪ್ಪ ಪ್ರತಿಕ್ರಿಯಿಸಿ, "ಕಳೆದೊಂದು ವಾರದಿಂದ ಫಾರ್ಮ್ನಲ್ಲಿ ಹಂದಿಗಳು ಸಾವನ್ನಪ್ಪುತ್ತಿರುವ ಹಿನ್ನೆಲೆಯಲ್ಲಿ ಭೇಟಿ ನೀಡಿ ಪರಿಶೀಲಿಸಲಾಗಿತ್ತು. ಹಂದಿ ಜ್ವರ ದೃಢಪಟ್ಟ ಕಾರಣ ಸದ್ಯ ಫಾರ್ಮ್ನಿಂದ ಹಂದಿಗಳ ಸಾಗಟವನ್ನು ನಿಷೇಧಿಸಲಾಗಿದೆ. ಆಫ್ರಿಕನ್ ಹಂದಿ ಜ್ವರ ಸಾಂಕ್ರಾಮಿಕ ರೋಗ. ದೇಶೀಯ ಮತ್ತು ಕಾಡು ಹಂದಿಗಳಿಗೆ ಈ ರೋಗ ಹರಡುತ್ತದೆ. ರೋಗಕ್ಕೆ ತುತ್ತಾದ ಹಂದಿಗಳು ಸಾವನ್ನಪ್ಪುತ್ತವೆ. ಈ ಜ್ವರಕ್ಕೆ ನಿರ್ದಿಷ್ಟ ಔಷಧಿ ಮತ್ತು ಚಿಕಿತ್ಸೆ ಇಲ್ಲ. ಮುನ್ನೆಚ್ಚರಿಕಾ ಕ್ರಮವಾಗಿ ಜ್ವರ ದೃಢಪಟ್ಟ ಸ್ಥಳದಿಂದ ಒಂದು ಕಿ.ಮೀ ವ್ಯಾಪ್ತಿಯಲ್ಲಿನ ಹಂದಿಗಳನ್ನು ಕೊಲ್ಲಲಾಗುತ್ತದೆ. ಸೋಂಕಿತ ಹಂದಿಗಳಿಂದ ಮನುಷ್ಯನಿಗೆ ರೋಗ ಹರಡುವುದಿಲ್ಲ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ" ಎಂದು ತಿಳಿಸಿದರು.
African Swine Fever (ASF) has been confirmed at a pig farm in Hebbari village, Chintamani taluk, prompting authorities to take strict precautionary measures. The Department of Animal Husbandry and Veterinary Services has decided to cull 57 pigs currently housed at the farm to contain the spread of the disease.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 04:29 pm
HK News Staffer
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm