ಬ್ರೇಕಿಂಗ್ ನ್ಯೂಸ್
01-09-25 05:03 pm HK News Desk ಕರ್ನಾಟಕ
ಮೈಸೂರು, ಸೆ.1 : ಧರ್ಮಸ್ಥಳ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಲಾಭಕ್ಕೆ ಚಲೋ ಮಾಡ್ತಿದ್ದಾರೆ. ಆದ್ರೆ ಅವರಿಗೆ ಇದರಿಂದ ಲಾಭ ಸಿಗಲ್ಲ. ನಮಗೆ ಧರ್ಮಸ್ಥಳದ ಬಗ್ಗೆ ಅಪಾರ ಗೌರವವಿದೆ. ಅದಕ್ಕಾಗಿಯೇ ಎಸ್ಐಟಿ ರಚನೆ ಮಾಡಿದ್ದೆವು. ಹಾಗಾದರೆ ಎಸ್.ಐ.ಟಿ ರಚನೆ ಮಾಡಿದಾಗಲೇ ಬಿಜೆಪಿ ಯಾಕೆ ವಿರೋಧ ಮಾಡಲಿಲ್ಲ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ದೂರುದಾರ ಹೇಳಿದಂತೆ, ಅಲ್ಲಿ ಏನೂ ಸಿಗಲಿಲ್ಲ ಅಂತ ಈಗ ಹೋರಾಟ ಎಂದು ಮಾಡುತ್ತಿದ್ದಾರೆ. ರಾಜಕೀಯ ಲಾಭಕ್ಕಾಗಿ ಮಾಡುತ್ತಿದ್ದಾರೆ. ಹಿಂದೂಗಳು ಒಟ್ಟಾಗುತ್ತಾರೆ ಎಂದು ಏನೇನೋ ಹೇಳುತ್ತಾರೆ. ನಾವೂ ಹಿಂದೂಗಳೇ ಅಲ್ವಾ.. ಎಲ್ಲ ಹಿಂದೂಗಳು ಅವರ ಪರ ಇಲ್ಲ. ರಾಮನ ಹೆಸರಲ್ಲು ರಾಜಕೀಯ ಮಾಡಿದ್ದರು. ಈಗ ನಮ್ಮ ಊರಿನಲ್ಲೂ ರಾಮ ಮಂದಿರ ಮಾಡಿದ್ದೇವೆ.
ಹಿಂದೂಗಳು ಅಂದ್ರೆ ರಾಜಕೀಯ ಮಾಡೋದಲ್ಲ. ಅಪಪ್ರಚಾರ ಮಾಡೋದು ಅಲ್ಲ. ಸುಳ್ಳು ಹೇಳೋದು ಅಲ್ಲ. ಮನುಷ್ಯತ್ವ ಇಲ್ಲದವರನ್ನು ಏನಂತ ಕರೀಬೇಕು? ಎಂದು ಪ್ರಶ್ನೆ ಮಾಡಿದರು.
ದಸರಾ ವಿಚಾರದಲ್ಲೂ ಬಿಜೆಪಿಯವರು ರಾಜಕಾರಣ ಮಾಡಿದ್ರು. ಅವರ ಮನೆಯಲ್ಲು ರಾಜಕಾರಣ ಮಾಡ್ತಾರೆ. ಸುಳ್ಳು ಹೇಳೋದು ಬಿಟ್ಟರೆ ಬಿಜೆಪಿ ಅವರಿಗೆ ಬೇರೇನೂ ಬರಲ್ಲ. ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರು ಅಂತ ಭಾನು ಮುಷ್ತಾಕ್ ಅವರನ್ನು ಗೌರವಿಸಲು ದಸರಾ ಉದ್ಘಾಟನೆಗೆ ಕರೆದಿದ್ದೇವೆ. ಅದರಲ್ಲಿ ಬೇರೇನೂ ವಿಷಯ ಇಲ್ಲ ಎಂದರು.
ಚಾಮುಂಡಿ ಬೆಟ್ಟ ಚಲೋ ಮಾಡ್ತೀವಿ ಎಂಬ ಅಶೋಕ್ ಹೇಳಿಕೆ ವಿಚಾರದ ಪ್ರತಿಕ್ರಿಯಿಸಿದ ಅವರು, ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿನೇ. ಆದ್ರೆ ದಸರಾ ಹಬ್ಬ ಎಲ್ಲರ ಹಬ್ಬ. ನಾವು ಮಾಡೋದು ದಸರಾ ಹಬ್ಬ. ಅದಕ್ಕೆ ಧರ್ಮ ಜಾತಿ ಏನು ಇಲ್ಲ ಎಂದರು. ಡಿಕೆಶಿ ಒಂದು ಕಾಲು ಹೊರಗಿಟ್ಟಿದ್ದಾರೆ 50 ಜನ ಎಂ.ಎಲ್. ಎ ಹೋಗುತ್ತಾರೆ ಎಂಬ ಯತ್ನಾಳ ಹೇಳಿಕೆಗೆ, ಅದೆಲ್ಲ ಏನೂ ಇಲ್ಲ ಎಂದು ಹೇಳುತ್ತ ಸಿಎಂ ಹೊರ ನಡೆದರು.
Chief Minister Siddaramaiah hit out at the BJP on Sunday, accusing the party of using the Dharmasthala issue for political mileage. He questioned why the BJP, which is now opposing the Special Investigation Team (SIT), had not raised objections when the SIT was first constituted.
29-12-25 11:13 pm
Bangalore Correspondent
ಡ್ರಗ್ಸ್ ಫ್ಯಾಕ್ಟರಿ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳಿ...
29-12-25 07:24 pm
ವ್ಯಾಪಕ ಭ್ರಷ್ಟಾಚಾರ ; ಕೋಲಾರದಲ್ಲಿ 25 ಗ್ರಾಪಂ ವಿರು...
28-12-25 09:03 pm
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 11:03 pm
Mangalore Correspondent
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
29-12-25 03:02 pm
Mangalore Correspondent
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm