ಬ್ರೇಕಿಂಗ್ ನ್ಯೂಸ್
01-09-25 05:03 pm HK News Desk ಕರ್ನಾಟಕ
ಮೈಸೂರು, ಸೆ.1 : ಧರ್ಮಸ್ಥಳ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಲಾಭಕ್ಕೆ ಚಲೋ ಮಾಡ್ತಿದ್ದಾರೆ. ಆದ್ರೆ ಅವರಿಗೆ ಇದರಿಂದ ಲಾಭ ಸಿಗಲ್ಲ. ನಮಗೆ ಧರ್ಮಸ್ಥಳದ ಬಗ್ಗೆ ಅಪಾರ ಗೌರವವಿದೆ. ಅದಕ್ಕಾಗಿಯೇ ಎಸ್ಐಟಿ ರಚನೆ ಮಾಡಿದ್ದೆವು. ಹಾಗಾದರೆ ಎಸ್.ಐ.ಟಿ ರಚನೆ ಮಾಡಿದಾಗಲೇ ಬಿಜೆಪಿ ಯಾಕೆ ವಿರೋಧ ಮಾಡಲಿಲ್ಲ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ದೂರುದಾರ ಹೇಳಿದಂತೆ, ಅಲ್ಲಿ ಏನೂ ಸಿಗಲಿಲ್ಲ ಅಂತ ಈಗ ಹೋರಾಟ ಎಂದು ಮಾಡುತ್ತಿದ್ದಾರೆ. ರಾಜಕೀಯ ಲಾಭಕ್ಕಾಗಿ ಮಾಡುತ್ತಿದ್ದಾರೆ. ಹಿಂದೂಗಳು ಒಟ್ಟಾಗುತ್ತಾರೆ ಎಂದು ಏನೇನೋ ಹೇಳುತ್ತಾರೆ. ನಾವೂ ಹಿಂದೂಗಳೇ ಅಲ್ವಾ.. ಎಲ್ಲ ಹಿಂದೂಗಳು ಅವರ ಪರ ಇಲ್ಲ. ರಾಮನ ಹೆಸರಲ್ಲು ರಾಜಕೀಯ ಮಾಡಿದ್ದರು. ಈಗ ನಮ್ಮ ಊರಿನಲ್ಲೂ ರಾಮ ಮಂದಿರ ಮಾಡಿದ್ದೇವೆ.
ಹಿಂದೂಗಳು ಅಂದ್ರೆ ರಾಜಕೀಯ ಮಾಡೋದಲ್ಲ. ಅಪಪ್ರಚಾರ ಮಾಡೋದು ಅಲ್ಲ. ಸುಳ್ಳು ಹೇಳೋದು ಅಲ್ಲ. ಮನುಷ್ಯತ್ವ ಇಲ್ಲದವರನ್ನು ಏನಂತ ಕರೀಬೇಕು? ಎಂದು ಪ್ರಶ್ನೆ ಮಾಡಿದರು.
ದಸರಾ ವಿಚಾರದಲ್ಲೂ ಬಿಜೆಪಿಯವರು ರಾಜಕಾರಣ ಮಾಡಿದ್ರು. ಅವರ ಮನೆಯಲ್ಲು ರಾಜಕಾರಣ ಮಾಡ್ತಾರೆ. ಸುಳ್ಳು ಹೇಳೋದು ಬಿಟ್ಟರೆ ಬಿಜೆಪಿ ಅವರಿಗೆ ಬೇರೇನೂ ಬರಲ್ಲ. ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರು ಅಂತ ಭಾನು ಮುಷ್ತಾಕ್ ಅವರನ್ನು ಗೌರವಿಸಲು ದಸರಾ ಉದ್ಘಾಟನೆಗೆ ಕರೆದಿದ್ದೇವೆ. ಅದರಲ್ಲಿ ಬೇರೇನೂ ವಿಷಯ ಇಲ್ಲ ಎಂದರು.
ಚಾಮುಂಡಿ ಬೆಟ್ಟ ಚಲೋ ಮಾಡ್ತೀವಿ ಎಂಬ ಅಶೋಕ್ ಹೇಳಿಕೆ ವಿಚಾರದ ಪ್ರತಿಕ್ರಿಯಿಸಿದ ಅವರು, ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿನೇ. ಆದ್ರೆ ದಸರಾ ಹಬ್ಬ ಎಲ್ಲರ ಹಬ್ಬ. ನಾವು ಮಾಡೋದು ದಸರಾ ಹಬ್ಬ. ಅದಕ್ಕೆ ಧರ್ಮ ಜಾತಿ ಏನು ಇಲ್ಲ ಎಂದರು. ಡಿಕೆಶಿ ಒಂದು ಕಾಲು ಹೊರಗಿಟ್ಟಿದ್ದಾರೆ 50 ಜನ ಎಂ.ಎಲ್. ಎ ಹೋಗುತ್ತಾರೆ ಎಂಬ ಯತ್ನಾಳ ಹೇಳಿಕೆಗೆ, ಅದೆಲ್ಲ ಏನೂ ಇಲ್ಲ ಎಂದು ಹೇಳುತ್ತ ಸಿಎಂ ಹೊರ ನಡೆದರು.
Chief Minister Siddaramaiah hit out at the BJP on Sunday, accusing the party of using the Dharmasthala issue for political mileage. He questioned why the BJP, which is now opposing the Special Investigation Team (SIT), had not raised objections when the SIT was first constituted.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am