ಬ್ರೇಕಿಂಗ್ ನ್ಯೂಸ್
01-09-25 06:59 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 01 : ಸೋಶಿಯಲ್ ಮೀಡಿಯಾದ ಬಳಕೆಯಲ್ಲಿ ಜನರು ಎಚ್ಚರಿಕೆಯಿಂದಿರಬೇಕೆಂದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಕಟ್ಟುನಿಟ್ಟಿನ ಎಚ್ಚರಿಕೆ ಸಂದೇಶವನ್ನು ನೀಡಿದೆ. ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ, ಶಾಂತಿಭಂಗಕ್ಕೆ ಕಾರಣವಾಗುವ, ಅಥವಾ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಪೋಸ್ಟ್ಗಳನ್ನು ಹಾಕಿದವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ. ಈ ಸಂದೇಶವು ರಾಜ್ಯದಾದ್ಯಂತ ಸಾಮಾಜಿಕ ಜಾಲತಾಣ ಬಳಕೆದಾರರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಹಂಚಿಕೊಳ್ಳಲಾಗಿದೆ.
ಸೋಷಿಯಲ್ ಮೀಡಿಯಾ ಪ್ರಿಯರೇ ಎಚ್ಚರ!
ಸೋಷಿಯಲ್ ಮೀಡಿಯಾದಲ್ಲಿ ಧಾರ್ಮಿಕ, ಜಾತೀಯ, ಅಥವಾ ರಾಜಕೀಯವಾಗಿ ಸೂಕ್ಷ್ಮವಾದ ವಿಷಯಗಳ ಕುರಿತು ಭಾವನಾತ್ಮಕವಾಗಿ ಕೆರಳಿಸುವ ಅಥವಾ ತಪ್ಪು ಮಾಹಿತಿಯನ್ನು ಹರಡುವ ಪೋಸ್ಟ್ಗಳು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿವೆ. ಇಂತಹ ಚಟುವಟಿಕೆಗಳಿಂದಾಗಿ ಸಾಮಾಜಿಕ ಸೌಹಾರ್ದತೆಗೆ ಭಂಗ ಬರುವ ಸಾಧ್ಯತೆಯಿದೆ ಎಂದು ಕರ್ನಾಟಕ ಪೊಲೀಸ್ ಇಲಾಖೆ ಎಚ್ಚರಿಸಿದೆ. ಹೀಗಾಗಿ ಸೋಷಿಯಲ್ ಮೀಡಿಯಾ ಪ್ರಿಯರು ಪೋಸ್ಟ್ ಮಾಡುವ ಮುನ್ನ ಜಾಗರೂಕರಾಗಿರಿ, ಇದು ಮುನ್ನೆಚ್ಚರಿಕೆ ಎಂದು ಸೂಚಿಸಿದ್ದಾರೆ.
ಪೊಲೀಸರ ಎಚ್ಚರಿಕೆ ಸಂದೇಶ !
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ತನ್ನ ಅಧಿಕೃತ ಎಕ್ಸ್ ಖಾತೆಯ ಮೂಲಕ, “ಸೋಷಿಯಲ್ ಮೀಡಿಯಾದಲ್ಲಿ ಯಾವುದೇ ಪೋಸ್ಟ್ ಹಾಕುವ ಮುನ್ನ ಎಚ್ಚರಿಕೆಯಿಂದಿರಿ. ಯಾವುದೇ ಸಂಘಟನೆ, ಸಂಸ್ಥೆ, ಅಥವಾ ವ್ಯಕ್ತಿಯ ವಿರುದ್ಧ ಅವಹೇಳನಕಾರಿ ಅಥವಾ ಶಾಂತಿಭಂಗಕ್ಕೆ ಕಾರಣವಾಗುವ ಪೋಸ್ಟ್ಗಳನ್ನು ಹಾಕಿದರೆ, ಬಿಎನ್ಎಸ್ ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ (ಐಟಿ ಆಕ್ಟ್) ಅಡಿಯಲ್ಲಿ ಕಠಿಣ ಕಾನೂನು ಕ್ರಮಕ್ಕೆ ಒಳಗಾಗುತ್ತೀರಿ,” ಎಂದು ಎಚ್ಚರಿಕೆ ನೀಡಿದೆ
ಈ ಸಂದೇಶವನ್ನು ರಾಜ್ಯದಾದ್ಯಂತ ಪೊಲೀಸ್ ಠಾಣೆಗಳ ಮೂಲಕವೂ ಪ್ರಕಟಿಸಲಾಗಿದೆ. ಪುನರಾವರ್ತಿತ ತಪ್ಪುಗಳು ಕಾನೂನಿನ ಉಲ್ಲಂಘನೆಯ ಗಂಭೀರ ಕ್ರಮಗಳಿಗೆ ದಾರಿ ಮಾಡಿಕೊಡುತ್ತವೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
In a stern message to social media users, the Karnataka State Police has issued a statewide alert urging citizens to exercise caution while posting content online. The department has warned that legal action will be taken against individuals who share defamatory, provocative, or law-and-order-threatening content on social media platforms.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am