ಬ್ರೇಕಿಂಗ್ ನ್ಯೂಸ್
03-09-25 05:40 pm Bangalore Correspondent ಕ್ರೈಂ
ಬೆಂಗಳೂರು, ಸೆ 03 : ಬ್ಯುಸಿನೆಸ್ ವೀಸಾದಲ್ಲಿ ಭಾರತಕ್ಕೆ ಬಂದು ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ನೈಜೀರಿಯಾ ದೇಶದ ಪ್ರಜೆಯನ್ನ ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಚಿಕೋಜಿ ಹೇಡಾಹಾ ಬಂಧಿತ ಆರೋಪಿ.
ಬಂಧಿತನಿಂದ 2 ಕೆ.ಜಿ 36 ಗ್ರಾಂ ಎಂಡಿಎಂಎ, ₹3 ಸಾವಿರ ನಗದು, ತೂಕದ ಯಂತ್ರ, ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಇದರ ಮೌಲ್ಯ ₹2.30 ಕೋಟಿ ಎಂದು ಅಂದಾಜಿಸಲಾಗಿದೆ.
ಬಾಗಲೂರಿನ ಸಂತೆ ವೃತ್ತದ ಬಳಿ ಆರೋಪಿ ಮಾದಕ ಪದಾರ್ಥಗಳ ಮಾರಾಟದಲ್ಲಿ ತೊಡಗಿದ್ದ ಬಗ್ಗೆ ಖಚಿತ ಮಾಹಿತಿ ಬಂದಿತ್ತು. ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.
ಬ್ಯುಸಿನೆಸ್ ವೀಸಾ ಪಡೆದು 2011ರಲ್ಲಿ ಆರೋಪಿ ಭಾರತಕ್ಕೆ ಬಂದಿದ್ದ. ವೀಸಾ ಅವಧಿ ಮುಕ್ತಾಯವಾಗಿದ್ದರೂ ಬೆಂಗಳೂರಿನಲ್ಲೇ ನೆಲಸಿದ್ದ. ಅಪರಿಚಿತ ವ್ಯಕ್ತಿಯಿಂದ ಕಡಿಮೆ ಬೆಲೆಗೆ ಎಂಡಿಎಂಎ ಖರೀದಿಸುತ್ತಿದ್ದ ಆರೋಪಿ, ನಗರದ ಹೊರವಲಯದ ಕಾಲೇಜು ಹಾಗೂ ಪೇಯಿಂಗ್ ಗೆಸ್ಟ್ ಬಳಿ ಮಾರಾಟ ಮಾಡುತ್ತಿದ್ದ. ಈ ಹಿಂದೆಯೂ ಮಾದಕ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದಾಗ ಚಿಕೋಜಿ ಹೇಡಾಹಾನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಆತ ಕಾರಾಗೃಹದಿಂದ ಹೊರಬಂದ ಬಳಿಕ ಅದೇ ಕೃತ್ಯ ಮುಂದುವರಿಸಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Bagalur Police have arrested a Nigerian national who had entered India on a business visa but was allegedly involved in the illegal sale of narcotic substances in the city. The accused, identified as Chigozie Hedaha, was caught with a large quantity of drugs. During the operation, police seized 2.036 kg of MDMA, ₹3,000 in cash, a weighing machine, and a two-wheeler. The total value of the seized drugs is estimated at ₹2.3 crore.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm