ಬ್ರೇಕಿಂಗ್ ನ್ಯೂಸ್
03-09-25 08:35 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.3 : ಧರ್ಮಸ್ಥಳ ಚಲೋ ನಡೆಸಿದ ಬಿಜೆಪಿ ನಾಯಕರಿದ್ದ ವಿಡಿಯೋವನ್ನು ತಿರುಚಿ, ಹೆಣ್ಣಿಗೆ ನ್ಯಾಯ ಕೊಡದೆ ಧರ್ಮದ ವಿಚಾರದಲ್ಲಿ ದೊಂಬರಾಟ ಎಂದು ಬರೆದು ಅಣಕಿಸಿ ಇನ್ಸ್ ಟಾ ಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ಘಟನೆ ಬಗ್ಗೆ ರಾಜ್ಯ ಬಿಜೆಪಿಯಿಂದ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಮಾಜಿ ಡಿಸಿಎಂ ಅಶ್ವತ್ಥ ನಾರಾಯಣ್ ನೇತೃತ್ವದಲ್ಲಿ ಬಿಜೆಪಿ ನಾಯಕರು ದೂರು ನೀಡಿದ್ದು ವಿಡಿಯೋದಲ್ಲಿ ಹಾನಿಕಾರಕ ಕಂಟೆಂಟ್ ಹಾಕಿದ್ದರೂ ಗೃಹ ಇಲಾಖೆ ಇದರ ಬಗ್ಗೆ ಕ್ರಮ ಕೈಗೊಳ್ಳಲು ನಿರ್ಲಕ್ಷ್ಯ ವಹಿಸಿದೆ ಎಂದು ಹೇಳಿದ್ದಾರೆ.
ದೂರು ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸೌಜನ್ಯಾಗೆ ನ್ಯಾಯ ದೊರಕಿಸುವ ವಿಚಾರದಲ್ಲಿ ಯಾವುದೇ ಒಳ ಒಪ್ಪಂದದ ನಡೆ ಇಲ್ಲ. ಸೌಜನ್ಯಾ ತಾಯಿ ಇಟ್ಟಿರುವ ಬೇಡಿಕೆ ಪರವಾಗಿ ಇರುವುದಾಗಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಅವರ ಮನೆಗೂ ಭೇಟಿ ಕೊಟ್ಟು ಹೋರಾಟಕ್ಕೆ ಬೆಂಬಲ ಇದೆಯೆಂದು ತಿಳಿಸಿದ್ದಾರೆ ಎಂದರು.
ಧರ್ಮದ ವಿಚಾರದಲ್ಲಿ ಇಂಥ ಹುಡುಗಾಟ ಮಾಡಿದರೆ, ನಾವು ಸಹಿಸುವುದಿಲ್ಲ. ಸರ್ಕಾರದ ವಿರುದ್ಧ ಬೇರೆ ಯಾವುದೇ ಸಾಮಾಜಿಕ ಜಾಲತಾಣದ ಪೋಸ್ಟ್ ಬಂದಾಗ ತಕ್ಷಣ ಬಂಧಿಸುತ್ತಾರೆ. ಸಂಬಂಧಿತ ವ್ಯಕ್ತಿಯ ಮೇಲೆ ಕೂಡಲೇ ಕೇಸ್ ದಾಖಲಿಸಬೇಕು. ಸೋಷಿಯಲ್ ಮೀಡಿಯಾದಲ್ಲಿ ಹಾಕಿರುವ ವಿಡಿಯೋವನ್ನು ತಕ್ಷಣ ತೆಗೆಯಬೇಕು ಎಂದು ಒತ್ತಾಯಿಸಿದರು.
ಧರ್ಮಸ್ಥಳ ವಿಚಾರದಲ್ಲಿ ಬಿಜೆಪಿ ನ್ಯಾಯಬದ್ಧವಾಗಿ ಹೋರಾಟ ಮಾಡಿದೆ. ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಗೆ ಯಾರೇ ಅಗೌರವ ತರಲು ಪ್ರಯತ್ನ ಪಟ್ಟರೂ ನಾವು ಸಹಿಸುವುದಿಲ್ಲ ಎಂದು ಎಚ್ಚರಿಸಿದರು. ಷಡ್ಯಂತ್ರ ವಿರೋಧಿಸಿ ಮತ್ತು ಸರಕಾರಕ್ಕೆ ಸ್ಪಷ್ಟ ಸಂದೇಶ ರವಾನಿಸಲು ನಾವು ಧರ್ಮಸ್ಥಳ ಚಲೋ ಹಮ್ಮಿಕೊಂಡಿದ್ದೆವು ಎಂದು ವಿವರಿಸಿದರು.
The Karnataka unit of the Bharatiya Janata Party (BJP) has lodged a complaint at the Upparpet Police Station in Bengaluru against a social media post that allegedly mocked the party’s ‘Dharmasthala Chalo’ protest.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am