ಬ್ರೇಕಿಂಗ್ ನ್ಯೂಸ್
06-09-25 08:28 pm HK News Desk ಕರ್ನಾಟಕ
ಕಾರವಾರ, ಸೆ 06: ಅಡಕೆ ತೋಟಕ್ಕೆ ಬಳಸುತ್ತಿದ್ದ ಏರ್ಗನ್ ನಿಂದ ವ್ಯಕ್ತಿ ಗುಂಡು ಹಾರಿಸಿದ್ದರಿಂದ 9 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಉ.ಕನ್ನಡದ ಚಿಪಗಿ ಸಮೀಪದ ಸೋಮನಳ್ಳಿಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆ ಹೊಸಕಿತ್ತೂರಿನ ಕರಿಯಪ್ಪ ಬಸಪ್ಪ ಉಂಡಿ (9) ಮೃತ ಬಾಲಕ. ಕೊಲೆ ಆರೋಪದ ಮೇಲೆ ನಿತೀಶ ಲಕ್ಷ್ಮಣ ಗೌಡ ಹಾಗೂ ರಾಘವ ಹೆಗಡೆ ಎಂಬುವರನ್ನ ಬಂಧಿಸಲಾಗಿದೆ.



ಕೇಶವ ಹೆಗಡೆ ಎಂಬವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಬಸಪ್ಪ ಉಂಡಿಯರ್ ಎಂಬವರ ಇಬ್ಬರು ಮಕ್ಕಳು (ಅಣ್ಣ, ತಮ್ಮ) ಆಟವಾಡುತ್ತಿದ್ದ ಸಂದರ್ಭದಲ್ಲಿ ಏರ್ ಗನ್ ಫೈರ್ ಆಗಿ ದುರ್ಘಟನೆ ನಡೆದಿತ್ತು ಎನ್ನಲಾಗಿತ್ತು. ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ 7 ವರ್ಷದ ತಮ್ಮ ಆಕಸ್ಮಿಕವಾಗಿ ಗುಂಡು ಹಾರಿಸಿದ್ದ. ಇದರಿಂದ ಅಣ್ಣ ಕರಿಯಪ್ಪ ( 9 ) ಮೃತಪಟ್ಟಿರುವುದಾಗಿ ಹೇಳಲಾಗಿತ್ತು. ಆದರೆ ಶಿರಸಿ ಗ್ರಾಮೀಣ ಪೊಲೀಸರು ಸಿಸಿ ಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿ ತನಿಖೆ ನಡೆಸಿದಾಗ ಅಸಲಿ ವಿಷಯ ಹೊರಬಂದಿದೆ
ಮೃತ ಬಾಲಕನ ಸಹೋದರನ ಕೈನಿಂದ ಫೈರ್ ಆಗಿದ್ದಲ್ಲ, ಕೆಲಸಗಾರ ನಿತೀಶ್ ಗೌಡನ ಕೈನಿಂದ ಮಿಸ್ ಫೈರ್ ಆಗಿ ಬಾಲಕ ಸಾವು ಕಂಡಿರುವುದು ಬೆಳಕಿಗೆ ಬಂದಿದೆ. ಇಬ್ಬರು ಮಕ್ಕಳು ಆಟವಾಡುತ್ತಾ ಏರ್ ಗನ್ ಹಿಡಿದಿದ್ದ ನಿತೀಶ್ ಗೌಡ ಬಳಿ ಬಂದಿದ್ದರು. ಅಂಗವಿಕಲನಾಗಿದ್ದ ನಿತೀಶ್ ಗೌಡನಿಗೆ ಎಡಗೈ ಊನವಾಗಿದ್ದು ಮಕ್ಕಳು ಬಂದ ಹಿನ್ನಲೆಯಲ್ಲಿ ಗನ್ ಸರಿಸುವಾಗ ಎಡ ಕೈ ತಾಗಿ ಎದುರಿಗಿದ್ದ ಬಾಲಕ ಕರಿಯಪ್ಪನ ಎದೆಗೆ ಗುಂಡು ತಾಗಿದೆ. ಅತೀ ಸಮೀಪದಲ್ಲೇ ಇದ್ದುದರಿಂದ ಎದೆಗೆ ನೇರವಾಗಿ ಗುಂಡು ಹೊಕ್ಕು ಹೃದಯ ಸೀಳಿ ರಕ್ತಸ್ರಾವವಾಗಿ ಬಾಲಕ ಮೃತಪಟ್ಟಿದ್ದಾನೆ.
ಇನ್ನು ನಿತೀಶ್ ಗೌಡನಿಗೆ ಏರ್ ಗನ್ ಬಳಸಲು ಬರುವುದಿಲ್ಲ, ತರಬೇತಿಯೂ ಇಲ್ಲ. ಹೀಗಾಗಿ ಆತನ ಅಚಾತುರ್ಯದಲ್ಲಿ ಫೈರ್ ಆಗಿದ್ದು ತನಿಖೆಯಿಂದ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ನಿತೀಶ್ ಹಾಗೂ ಮನೆ ಮಾಲೀಕ ರಾಘವೇಂದ್ರ ಹೆಗಡೆ ವಿರುದ್ಧ ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
In a shocking incident near Chipgi in Sirsi, Uttara Kannada district, a 9-year-old boy lost his life after being shot with an airgun reportedly used to scare away monkeys in an areca nut plantation. The deceased has been identified as Kariappa Basappa Undi (9), a resident of Hosakittur in Haveri district. He was living in Somanalli village near Sirsi
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am