ಬ್ರೇಕಿಂಗ್ ನ್ಯೂಸ್
16-09-25 10:54 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.16 : ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರವನ್ನು ಪ್ರತಿನಿಧಿಸುವ ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ಅವರ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ಅನೂರ್ಜಿತಗೊಳಿಸಿದೆ. ಅಲ್ಲದೆ, 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ನಂಜೇಗೌಡ ಮತ್ತು ನಿಕಟ ಪ್ರತಿಸ್ಪರ್ಧಿ ಕೆ.ಎಸ್ ಮಂಜುನಾಥ್ ಪರ ಚಲಾವಣೆಯಾದ ಮತಗಳ ಮರು ಎಣಿಕೆಗೆ ಆದೇಶಿಸಿದೆ.
ನಂಜೇಗೌಡ ವಿರುದ್ಧ ಸೋತಿದ್ದ ಬಿಜೆಪಿಯ ಕೆಎಸ್ ಮಂಜುನಾಥ್ ಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್ ದೇವದಾಸ್ ನೇತೃತ್ವದ ಪೀಠ ಈ ತೀರ್ಪು ನೀಡಿದೆ. ಮತ ಎಣಿಕೆ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು.
ಸುಮಾರು ಎರಡು ವರ್ಷಗಳ ವಿಚಾರಣೆಯ ನಂತರ, ನ್ಯಾಯಾಲಯವು ಮರು ಎಣಿಕೆ ಮಾಡುವಂತೆ ಆದೇಶಿಸಿ, ನಂಜೇಗೌಡ ಅವರ ಆಯ್ಕೆಯನ್ನು ಅಮಾನ್ಯ ಎಂದು ಘೋಷಿಸಿತು.
ಆದಾಗ್ಯೂ, ನಂಜೇಗೌಡ ಪರ ವಕೀಲರ ಮನವಿ ಮೇರೆಗೆ, ಶಾಸಕ ಸ್ಥಾನವನ್ನು ಅಸಿಂಧುಗೊಳಿಸಿದ್ದ ತನ್ನದೇ ಆದೇಶಕ್ಕೆ 30 ದಿನಗಳ ಕಾಲ ಹೈಕೋರ್ಟ್ ತಡೆ ನೀಡಿದೆ. ಈ ಮಧ್ಯಂತರ ಪರಿಹಾರವು ಕಾಂಗ್ರೆಸ್ ಶಾಸಕರಿಗೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡುತ್ತದೆ. ಆ ಅವಧಿಯೊಳಗೆ ಸುಪ್ರೀಂ ಕೋರ್ಟ್ನಿಂದ ಯಾವುದೇ ನಿರ್ದೇಶನ ಬಾರದಿದ್ದರೆ, ಶಾಸಕ ಸ್ಥಾನ ಅನೂರ್ಜಿತಗೊಳ್ಳಲಿದೆ. ಮರು ಮತ ಎಣಿಕೆ ನಡೆಯಲಿದೆ.
The Karnataka High Court on Tuesday set aside the election of Congress MLA K.Y. Nanjegowda, who represents the Malur constituency in Kolar district, and directed a recount of votes polled in the 2023 Assembly elections.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am