Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡ ಶಾಸಕ ಸ್ಥಾನದಿಂದ ಅನರ್ಹ ; ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ, ಚುನಾವಣೆ ತಕರಾರು ಅರ್ಜಿಯಲ್ಲಿ ಕೋರ್ಟ್ ತೀರ್ಪು 

16-09-25 10:54 pm       Bangalore Correspondent   ಕರ್ನಾಟಕ

ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರವನ್ನು ಪ್ರತಿನಿಧಿಸುವ ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ಅವರ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ಅನೂರ್ಜಿತಗೊಳಿಸಿದೆ. ಅಲ್ಲದೆ, 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ನಂಜೇಗೌಡ ಮತ್ತು ನಿಕಟ ಪ್ರತಿಸ್ಪರ್ಧಿ ಕೆ.ಎಸ್ ಮಂಜುನಾಥ್ ಪರ ಚಲಾವಣೆಯಾದ ಮತಗಳ ಮರು ಎಣಿಕೆಗೆ ಆದೇಶಿಸಿದೆ.

ಬೆಂಗಳೂರು, ಸೆ.16 : ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರವನ್ನು ಪ್ರತಿನಿಧಿಸುವ ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ಅವರ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ಅನೂರ್ಜಿತಗೊಳಿಸಿದೆ. ಅಲ್ಲದೆ, 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ನಂಜೇಗೌಡ ಮತ್ತು ನಿಕಟ ಪ್ರತಿಸ್ಪರ್ಧಿ ಕೆ.ಎಸ್ ಮಂಜುನಾಥ್ ಪರ ಚಲಾವಣೆಯಾದ ಮತಗಳ ಮರು ಎಣಿಕೆಗೆ ಆದೇಶಿಸಿದೆ.

ನಂಜೇಗೌಡ ವಿರುದ್ಧ ಸೋತಿದ್ದ ಬಿಜೆಪಿಯ ಕೆಎಸ್ ಮಂಜುನಾಥ್ ಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್ ದೇವದಾಸ್ ನೇತೃತ್ವದ ಪೀಠ ಈ ತೀರ್ಪು ನೀಡಿದೆ. ಮತ ಎಣಿಕೆ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು. 

ಸುಮಾರು ಎರಡು ವರ್ಷಗಳ ವಿಚಾರಣೆಯ ನಂತರ, ನ್ಯಾಯಾಲಯವು ಮರು ಎಣಿಕೆ ಮಾಡುವಂತೆ ಆದೇಶಿಸಿ, ನಂಜೇಗೌಡ ಅವರ ಆಯ್ಕೆಯನ್ನು ಅಮಾನ್ಯ ಎಂದು ಘೋಷಿಸಿತು. 

ಆದಾಗ್ಯೂ, ನಂಜೇಗೌಡ ಪರ ವಕೀಲರ ಮನವಿ ಮೇರೆಗೆ, ಶಾಸಕ ಸ್ಥಾನವನ್ನು ಅಸಿಂಧುಗೊಳಿಸಿದ್ದ ತನ್ನದೇ ಆದೇಶಕ್ಕೆ 30 ದಿನಗಳ ಕಾಲ ಹೈಕೋರ್ಟ್ ತಡೆ ನೀಡಿದೆ. ಈ ಮಧ್ಯಂತರ ಪರಿಹಾರವು ಕಾಂಗ್ರೆಸ್ ಶಾಸಕರಿಗೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡುತ್ತದೆ. ಆ ಅವಧಿಯೊಳಗೆ ಸುಪ್ರೀಂ ಕೋರ್ಟ್‌ನಿಂದ ಯಾವುದೇ ನಿರ್ದೇಶನ ಬಾರದಿದ್ದರೆ, ಶಾಸಕ ಸ್ಥಾನ ಅನೂರ್ಜಿತಗೊಳ್ಳಲಿದೆ. ಮರು ಮತ ಎಣಿಕೆ ನಡೆಯಲಿದೆ.

The Karnataka High Court on Tuesday set aside the election of Congress MLA K.Y. Nanjegowda, who represents the Malur constituency in Kolar district, and directed a recount of votes polled in the 2023 Assembly elections.