ಬ್ರೇಕಿಂಗ್ ನ್ಯೂಸ್
16-09-25 11:00 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.16 : ಸಚಿವ ಜಮೀರ್ ಅಹ್ಮದ್ ಖಾನ್ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಲೋಕಾಯುಕ್ತ ಪೊಲೀಸರು, ಸಚಿವ ಜಮೀರ್ ಜೊತೆಗೆ ಕಳೆದ 3-4 ವರ್ಷಗಳಿಂದ ಆರ್ಥಿಕ ವ್ಯವಹಾರ ಹೊಂದಿರುವ ದಿನೇಶ್ ಗುಂಡೂರಾವ್ಗೆ ನೋಟಿಸ್ ನೀಡಿದ್ದು, ದಾಖಲೆ ಸಮೇತ ವಿಚಾರಣೆಗೆ ಹಾಜರಾಗಲು ತಿಳಿಸಿದ್ದಾರೆ. ನೋಟಿಸ್ ಬೆನ್ನಲ್ಲೇ ದಿನೇಶ್ ಗುಂಡೂರಾವ್ ದಾಖಲೆ ಕ್ರೋಢೀಕರಿಸಲು ಕಾಲಾವಕಾಶ ಕೋರಿದ್ದಾರೆ.
ಇದಕ್ಕೂ ಮುನ್ನ ಸಚಿವ ಜಮೀರ್ ಅಹ್ಮದ್ಗೆ 2.5 ಕೋಟಿ ರೂ. ನೀಡಿದ್ದ ವಿಚಾರವಾಗಿ ರಾಧಿಕಾ ಕುಮಾರಸ್ವಾಮಿ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದರು. ಪ್ರಕರಣದಲ್ಲಿ ಈಗಾಗಲೇ ರಾಧಿಕಾ ಕುಮಾರಸ್ವಾಮಿ ಹಾಗೂ ಗುಜರಿ ಬಾಬು ವಿಚಾರಣೆ ನಡೆಸಲಾಗಿದೆ.
2019ರಲ್ಲಿ ಐ ಮಾನಿಟರಿ ಅಡ್ವೈಸರಿ ಕಂಪನಿಯ ಬಹುಕೋಟಿ ವಂಚನೆ ಹಗರಣ ಬೆಳಕಿಗೆ ಬಂದಿತ್ತು. ಈ ವಂಚಕ ಕಂಪನಿ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಜಮೀರ್ ಅಹ್ಮದ್ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು.
ಇಡಿ ವರದಿ ಅನ್ವಯ ಆಗ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಜಮೀರ್ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಭ್ರಷ್ಟಾಚಾರ ನಿಗ್ರಹ ದಳವು (ಎಸಿಬಿ) ಪ್ರಕರಣ ದಾಖಲಿಸಿತ್ತು. ಎಸಿಬಿ ರದ್ದಾದ ಬಳಿಕ ಈ ಪ್ರಕರಣ ಲೋಕಾಯುಕ್ತ ಪೊಲೀಸರಿಗೆ ವರ್ಗವಾಗಿತ್ತು. ಈಗ ಸಚಿವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದು, ಹಲವರ ವಿಚಾರಣೆ ನಡೆಸುತ್ತಿದ್ದಾರೆ.
ನಾನು ಯಾರ ಬಳಿ ಸಾಲ ಪಡೆದಿದ್ದೇನೆ ಎನ್ನುವುದರ ಬಗ್ಗೆ ಜಮೀರ್ ಲೋಕಾಯುಕ್ತ ಪೊಲೀಸರಿಗೆ ಲಿಖಿತವಾಗಿ ಪಟ್ಟಿ ನೀಡಿದ್ದರು. ಈ ಪಟ್ಟಿಯಲ್ಲಿ ರಾಧಿಕಾ ಕುಮಾರಸ್ವಾಮಿ ಬಳಿಯಿಂದ 2.5 ಕೋಟಿ ರೂ. ಸಾಲ ಪಡೆದಿರುವ ವಿಚಾರವನ್ನು ಹಂಚಿಕೊಂಡಿದ್ದರು. ವಿಚಾರಣೆ ಸಂದರ್ಭದಲ್ಲಿ, ನಾನು 2012ರಲ್ಲಿ ಶಮಿಕಾ ಎಂಟರ್ಪ್ರೈಸಸ್ ಹೆಸರಿನಲ್ಲಿ ಯಶ್ ಹಾಗೂ ರಮ್ಯಾ ಅಭಿನಯದ ಲಕ್ಕಿ ಸಿನಿಮಾ ನಿರ್ಮಾಣ ಮಾಡಿದ್ದೆ. ಮನರಂಜನಾ ಚಾನೆಲ್ಗಳಿಗೆ ಈ ಸಿನಿಮಾದ ಸ್ಯಾಟಲೈಟ್ ಹಕ್ಕು ಹಾಗೂ ಚಲನಚಿತ್ರದ ಯಶಸ್ವಿನಿಂದ ಸಂಪಾದಿಸಿದ ಹಣದಲ್ಲಿ ಆರ್ಥಿಕ ಸಂಕಷ್ಟದಲ್ಲಿದ್ದ ಜಮೀರ್ ಅಹ್ಮದ್ ಅವರಿಗೆ 2.5 ಕೋಟಿ ರೂ.ಗಳನ್ನು ಸಾಲವಾಗಿ ನೀಡಿದ್ದೆ ಎಂದು ರಾಧಿಕಾ ತಿಳಿಸಿದ್ದಾಗಿ ಮೂಲಗಳಿಂದ ತಿಳಿದುಬಂದಿದೆ.
In connection with the ongoing investigation into alleged illegal assets of Minister B.Z. Jamir Ahmed Khan, the Lokayukta police have issued a notice to Health Minister Dinesh Gundu Rao.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am