ಬ್ರೇಕಿಂಗ್ ನ್ಯೂಸ್
26-12-20 04:47 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.26: ಒಂದೆಡೆ ರಾಜ್ಯ ಸರಕಾರ ನೈಟ್ ಕರ್ಫ್ಯೂ ವಿಚಾರದಲ್ಲಿ ಎಡವಟ್ಟು ಮಾಡಿಕೊಂಡಿದ್ದರೆ, ಇತ್ತ ಬ್ರಿಟನ್ ವೈರಸ್ ಈಗ ರಾಜ್ಯ ಸರಕಾರದ ಅಧಿಕಾರಿಗಳ ನಿದ್ದೆಗೆಡಿಸಿದೆ.
ಬ್ರಿಟನ್ ನಿಂದ ಕಳೆದ 15 ದಿನಗಳಲ್ಲಿ 1582 ಮಂದಿ ಬೆಂಗಳೂರಿಗೆ ಬಂದಿದ್ದಾರೆಂಬ ಅಂಕಿ ಅಂಶ ಇದೆ. ಆದರೆ, ಹೀಗೆ ಬಂದಿರುವ ಎಲ್ಲರನ್ನೂ ಪತ್ತೆ ಮಾಡಲು ಇನ್ನೂ ಅಧಿಕಾರಿಗಳಿಗೆ ಸಾಧ್ಯವಾಗಿಲ್ಲ. ಆ ಪೈಕಿ 151 ಮಂದಿ ಪತ್ತೆಯಾಗದೆ ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಕೇಳಿಬರುತ್ತಿದೆ.

ಬೆಂಗಳೂರಿನಲ್ಲಿ ಬ್ರಿಟನ್ ನಿಂದ ಆಗಮಿಸಿದ 11 ಮಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಆದರೆ, ಅವರಲ್ಲಿ ರೂಪಾಂತರಿತ ವೈರಸ್ ಇದೆಯೇ ಎನ್ನೋದು ದೃಢಪಟ್ಟಿಲ್ಲ. ಅದರ ಕುರಿತು ನಿಮ್ಹಾನ್ಸ್ ಸೆಂಟರಿನ ಮೈಕ್ರೋ ಲ್ಯಾಬ್ ನಲ್ಲಿ ಪರೀಕ್ಷೆ ಕೈಗೊಳ್ಳಲಾಗಿದೆ. ಇನ್ನು ಈ 11 ಮಂದಿಯಿಂದ ಇತರೇ 28 ಮಂದಿ ಪ್ರಾಥಮಿಕ ಸಂಪರ್ಕ ಹೊಂದಿದ್ದಾರೆ ಎಂಬ ನೆಲೆಯಲ್ಲಿ ಅವರನ್ನು ಕ್ವಾರಂಟೈನ್ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ನಾಪತ್ತೆಯಾಗಿರುವ 151 ಮಂದಿಯಲ್ಲಿ ಬ್ರಿಟನ್ ವೈರಸ್ ಕಂಡುಬಂದಿದ್ದರೆ, ಅದು ಇಡೀ ರಾಜ್ಯಕ್ಕೆ ಮಾರಕವಾಗುವ ಸಾಧ್ಯತೆಯಿದೆ. ಅವರು ಬೆಂಗಳೂರಿನಲ್ಲೇ ಇದ್ದಾರೆಯೇ ಬೇರೆ ಕಡೆಗೆ ತೆರಳಿದ್ದಾರೆಯೇ ಎನ್ನುವುದು ದೃಢಪಟ್ಟಿಲ್ಲ. ಈ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಕಾಲ್ ಡಿಟೈಲ್ಸ್, ಮೊಬೈಲ್ ನಂಬರ್ ಆಧರಿಸಿ, ತನಿಖೆ ನಡೆಸಲಾಗುವುದು ಎಂದು ಬೆಂಗಳೂರು ಬಿಬಿಎಂಪಿ ಆರೋಗ್ಯಾಧಿಕಾರಿ ವಿಜಯೇಂದ್ರ ತಿಳಿಸಿದ್ದಾರೆ.

ಈ ಪೈಕಿ ಯಾರೇ ಆದ್ರೂ ಉದ್ದೇಶಪೂರ್ವಕ ನಾಪತ್ತೆಯಾಗಿದ್ದರೆ ಅಂಥವರ ಮೇಲೆ ನ್ಯಾಯಾಲಯದಲ್ಲಿ ಮೊಕದ್ದೆ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
151 passengers who arrived from Britan to Bengaluru are said to be untraceable by the health department officials.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm