ಬ್ರೇಕಿಂಗ್ ನ್ಯೂಸ್
26-12-20 04:47 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.26: ಒಂದೆಡೆ ರಾಜ್ಯ ಸರಕಾರ ನೈಟ್ ಕರ್ಫ್ಯೂ ವಿಚಾರದಲ್ಲಿ ಎಡವಟ್ಟು ಮಾಡಿಕೊಂಡಿದ್ದರೆ, ಇತ್ತ ಬ್ರಿಟನ್ ವೈರಸ್ ಈಗ ರಾಜ್ಯ ಸರಕಾರದ ಅಧಿಕಾರಿಗಳ ನಿದ್ದೆಗೆಡಿಸಿದೆ.
ಬ್ರಿಟನ್ ನಿಂದ ಕಳೆದ 15 ದಿನಗಳಲ್ಲಿ 1582 ಮಂದಿ ಬೆಂಗಳೂರಿಗೆ ಬಂದಿದ್ದಾರೆಂಬ ಅಂಕಿ ಅಂಶ ಇದೆ. ಆದರೆ, ಹೀಗೆ ಬಂದಿರುವ ಎಲ್ಲರನ್ನೂ ಪತ್ತೆ ಮಾಡಲು ಇನ್ನೂ ಅಧಿಕಾರಿಗಳಿಗೆ ಸಾಧ್ಯವಾಗಿಲ್ಲ. ಆ ಪೈಕಿ 151 ಮಂದಿ ಪತ್ತೆಯಾಗದೆ ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಕೇಳಿಬರುತ್ತಿದೆ.

ಬೆಂಗಳೂರಿನಲ್ಲಿ ಬ್ರಿಟನ್ ನಿಂದ ಆಗಮಿಸಿದ 11 ಮಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಆದರೆ, ಅವರಲ್ಲಿ ರೂಪಾಂತರಿತ ವೈರಸ್ ಇದೆಯೇ ಎನ್ನೋದು ದೃಢಪಟ್ಟಿಲ್ಲ. ಅದರ ಕುರಿತು ನಿಮ್ಹಾನ್ಸ್ ಸೆಂಟರಿನ ಮೈಕ್ರೋ ಲ್ಯಾಬ್ ನಲ್ಲಿ ಪರೀಕ್ಷೆ ಕೈಗೊಳ್ಳಲಾಗಿದೆ. ಇನ್ನು ಈ 11 ಮಂದಿಯಿಂದ ಇತರೇ 28 ಮಂದಿ ಪ್ರಾಥಮಿಕ ಸಂಪರ್ಕ ಹೊಂದಿದ್ದಾರೆ ಎಂಬ ನೆಲೆಯಲ್ಲಿ ಅವರನ್ನು ಕ್ವಾರಂಟೈನ್ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ನಾಪತ್ತೆಯಾಗಿರುವ 151 ಮಂದಿಯಲ್ಲಿ ಬ್ರಿಟನ್ ವೈರಸ್ ಕಂಡುಬಂದಿದ್ದರೆ, ಅದು ಇಡೀ ರಾಜ್ಯಕ್ಕೆ ಮಾರಕವಾಗುವ ಸಾಧ್ಯತೆಯಿದೆ. ಅವರು ಬೆಂಗಳೂರಿನಲ್ಲೇ ಇದ್ದಾರೆಯೇ ಬೇರೆ ಕಡೆಗೆ ತೆರಳಿದ್ದಾರೆಯೇ ಎನ್ನುವುದು ದೃಢಪಟ್ಟಿಲ್ಲ. ಈ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಕಾಲ್ ಡಿಟೈಲ್ಸ್, ಮೊಬೈಲ್ ನಂಬರ್ ಆಧರಿಸಿ, ತನಿಖೆ ನಡೆಸಲಾಗುವುದು ಎಂದು ಬೆಂಗಳೂರು ಬಿಬಿಎಂಪಿ ಆರೋಗ್ಯಾಧಿಕಾರಿ ವಿಜಯೇಂದ್ರ ತಿಳಿಸಿದ್ದಾರೆ.

ಈ ಪೈಕಿ ಯಾರೇ ಆದ್ರೂ ಉದ್ದೇಶಪೂರ್ವಕ ನಾಪತ್ತೆಯಾಗಿದ್ದರೆ ಅಂಥವರ ಮೇಲೆ ನ್ಯಾಯಾಲಯದಲ್ಲಿ ಮೊಕದ್ದೆ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
151 passengers who arrived from Britan to Bengaluru are said to be untraceable by the health department officials.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm