ಬ್ರೇಕಿಂಗ್ ನ್ಯೂಸ್
17-09-25 06:02 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 17 : ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿbಚಲಿಸುತ್ತಿದ್ದ ರಾಜಹಂಸ ಕೆಎಸ್ಆರ್ಟಿಸಿ ಬಸ್ ಚಾಲಕನಿಗೆ ಹೃದಯಾಘಾತವಾಗಿದ್ದು ಆತನ ಸಮಯ ಪ್ರಜ್ಞೆ ಹಾಗೂ ಮಾನವೀಯ ತೆಯಿಂದ 45ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ರಾಜೀವ್ ಬಿರಾದಾರ್ (50) ಹೃದಯಾಘಾತದಿಂದ ಮೃತಪಟ್ಟ ಚಾಲಕ. ಇವರು ಉತ್ತರ ಕರ್ನಾಟಕ ಮೂಲದವರಾಗಿದ್ದು, ಸುಮಾರು 20ವರ್ಷಗಳಿಂದ ಕೆಎಸ್ಆರ್ಟಿಸಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಮಂಗಳವಾರ ಬೆಂಗಳೂರು ಮೆಜೆಸ್ಟಿಕ್ನಿಂದ ದಾವಣಗೆರೆಯ ಹರಿಹರಕ್ಕೆ ನೆಲಮಂಗಲ ಮಾರ್ಗವಾಗಿ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಹೋಗುವಾಗ ನೆಲಮಂಗಲ ಸಮೀಪದ ಜಾಸ್ ಟೋಲ್ ಬಳಿ ಚಾಲಕ ರಾಜೀವ್ ಬಿರಾದಾರ್ಗೆ ಹೃದಯಾಘಾತವಾಗಿದೆ, ತಕ್ಷಣ ಆತ ಬಸ್ ಅನ್ನು ಹೆದ್ದಾರಿಯಲ್ಲಿನ ಎಡಭಾಗಕ್ಕೆ ತೆಗೆದುಕೊಂಡು ನಿಲ್ಲಿಸಿದ್ದಾನೆ.
ತಕ್ಷಣ ಪ್ರಯಾಣಿಕರು 108ಕ್ಕೆ ಕರೆ ಮಾಡಿ ಆ್ಯಂಬುಲೆನ್ಸ್ನಲ್ಲಿ ಕರೆದುಕೊಂಡು ಹೋಗಿದ್ದು ಆ್ಯಂಬುಲೆನ್ಸ್ನಲ್ಲಿ ಪ್ರಥಮ ಚಿಕಿತ್ಸೆ ಸಿಗದೆ ಮಾರ್ಗ ಮಧ್ಯೆ ರಾಜೀವ್ ಮೃತಪಟ್ಟಿದ್ದಾರೆ. ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದು ಅವರ ಕುಟುಂಬಕ್ಕೆ ಮೃತ ದೇಹವನ್ನು ಹಸ್ತಾಂತರ ಮಾಡಿದ್ದಾರೆ.
ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಚಾಲಕನ ಸಮಯ ಪ್ರಜ್ಞೆ:
ಚಾಲಕ ರಾಜೀವ್ ಹೃದಯಾಘಾತ ವಾದ ತಕ್ಷಣ ಚಲಿಸುತ್ತಿದ್ದ ಬಸ್ ಅನ್ನು ನಿಯಂತ್ರಣಕ್ಕೆ ತೆಗೆದುಕೊಂಡು ರಸ್ತೆಯಲ್ಲಿ ನಿಲ್ಲಿಸಿದ ಪರಿಣಾಮ ಬಸ್ನಲ್ಲಿ ಪ್ರಯಾಣಿಸುತ್ತಿದ್ದ 45ಕ್ಕೂ ಹೆಚ್ಚು ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಆಗದಂತೆ ರಕ್ಷಣೆ ನೀಡುವ ಕೆಲಸವನ್ನು ಸಾಯುವ ಸಮಯದಲ್ಲಿ ತೋರಿದ್ದಾರೆ. ಈ ಕುರಿತು ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಅಲ್ಲದೇ, ಚಾಲಕನ ಸಾವಿಗೆ ಕಂಬನಿ ಮಿಡಿದಿದ್ದಾರೆ.
In a heartbreaking yet heroic incident, a KSRTC (Karnataka State Road Transport Corporation) driver died of a heart attack while driving a Rajahamsa bus, but not before saving the lives of over 45 passengers with his presence of mind and sense of duty.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm