ಬ್ರೇಕಿಂಗ್ ನ್ಯೂಸ್
18-09-25 05:34 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 18 : ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ವಾಹನ ಸವಾರರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ 2,608.91 ಕೋಟಿ ರೂ. ಬಾಕಿ ಬರಬೇಕಿದೆ! ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇತ್ತೀಚೆಗೆ ನಡೆಸಿದ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ 1.22 ಕೋಟಿ ಪ್ರಕರಣ ಇತ್ಯರ್ಥ ಗೊಳಿಸಿದೆ.
ಆದರೂ 2019 ರಿಂದ 2025 ರವರೆಗೆ 4.45 ಕೋಟಿ ಇ-ಚಲನ್ ಪ್ರಕರಣಗಳಿಂದ 2,608.91 ಕೋಟಿ ರೂ. ಬಾಕಿ ಉಳಿದುಕೊಂಡಿದೆ. ಸರ್ಕಾರ 2023ನೇ ಸಾಲಿನಲ್ಲಿ ಶೇ.50 ರಿಯಾಯಿತಿ ಘೋಷಿಸಿ ದಂಡ ಪಾವತಿಗೆ ಆದೇಶ ಮಾಡಿತ್ತು. ಈ ವೇಳೆ 2,64,85,640 ಪ್ರಕರಣಗಳ ಪೈಕಿ 63,15,014 ಕೇಸ್ಗಳನ್ನು ಇತ್ಯರ್ಥಪಡಿಸಿ 182.32 ಕೋಟಿ ರೂ. ದಂಡ ಸಂಗ್ರಹ ಮಾಡಲಾಗಿತ್ತ. 2024ನೇ ಸಾಲಿನಲ್ಲಿ 1,28,35,412 ಪ್ರಕರಣಗಳ ಪೈಕಿ 6.18 ಲಕ್ಷ ಇತ್ಯರ್ಥಪಡಿಸಿ 36.03 ಕೋಟಿ ರೂ. ದಂಡ ಸಂಗ್ರಹ ಮಾಡಲಾಗಿತ್ತು. ಪ್ರಸಕ್ತ ಸಾಲಿನಲ್ಲಿ (2025) ಸರ್ಕಾರ 21 ದಿನಗಳ ಕಾಲ ನೀಡಿದ್ದ ರಿಯಾಯಿತಿ ದಂಡ ಪಾವತಿ ವೇಳೆ 53,11,589 ಪ್ರಕರಣ ಖುಲಾಸೆಗೊಳಿಸಿ 144 ಕೋಟಿ ರೂ. ಸಂಗ್ರಹ ಮಾಡಿದೆ. ಬೆಂಗಳೂರು ನಗರದಲ್ಲಿ ಮಾತ್ರ 106 ಕೋಟಿ ರೂ. ಸಂಗ್ರಹವಾಗಿದೆ. ಇದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಐತಿಹಾಸಿಕ ಸಾಧನೆಯಾಗಿದೆ.
265 ಕೋಟಿ ರೂ. ಪರಿಹಾರ:
ಹಲವು ವರ್ಷಗಳಿಂದ ಬಾಕಿ ಇರುವ ಹಾಗೂ ನ್ಯಾಯಾಲಯದಲ್ಲಿ ನಡೆಯುತ್ತಿರುವ ರಸ್ತೆ ಅಪಘಾತ, ವಾಹನ ಸವಾರರು ಹಾಗೂ ಪಾದಚಾರಿಗಳ ಸಾವು ಸೇರಿ ಇತರ ರಸ್ತೆ ಅವಘಡ ಪ್ರಕರಣಗಳು ಲೋಕ ಅದಾಲತ್ನಲ್ಲಿ ಇತ್ಯರ್ಥಗೊಂಡಿವೆ. ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆ ಹಾಗೂ ಬಾಕಿ ಇದ್ದ 3,708 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಪರಿಹರಿಸಿ 265 ಕೋಟಿ ರೂ. ಪರಿಹಾರವನ್ನು ಸಂತ್ರಸ್ತರಿಗೆ ನೀಡಲಾಗಿದೆ.
ಸಂಚಾರ ನಿಯಮ ಉಲ್ಲಂಘನೆಯಿಂದಾಗಿ ರಾಜ್ಯದಲ್ಲಿ ಬಾಕಿ ಇರುವ 4,45,67,714 ಪ್ರಕರಣಗಳ ಪೈಕಿ 2023 ರಿಂದ 2025ರವರೆಗೆ ರಿಯಾಯಿತಿ ದರದಲ್ಲಿ 1.22 ಕೋಟಿ ಪ್ರಕರಣ ಇತ್ಯರ್ಥಗೊಂಡಿವೆ. ಆದರೂ 3,23,22,160 ಪ್ರಕರಗಳು ಬಾಕಿ ಉಳಿದುಕೊಂಡಿವೆ.
Karnataka has a staggering ₹2,608.91 crore pending in unpaid traffic fines from vehicle users who violated traffic rules across the state. Despite multiple awareness drives and penalty discount schemes, over 3.23 crore cases still remain unresolved.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm