ಬ್ರೇಕಿಂಗ್ ನ್ಯೂಸ್
18-09-25 05:34 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 18 : ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ವಾಹನ ಸವಾರರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ 2,608.91 ಕೋಟಿ ರೂ. ಬಾಕಿ ಬರಬೇಕಿದೆ! ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇತ್ತೀಚೆಗೆ ನಡೆಸಿದ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ 1.22 ಕೋಟಿ ಪ್ರಕರಣ ಇತ್ಯರ್ಥ ಗೊಳಿಸಿದೆ.
ಆದರೂ 2019 ರಿಂದ 2025 ರವರೆಗೆ 4.45 ಕೋಟಿ ಇ-ಚಲನ್ ಪ್ರಕರಣಗಳಿಂದ 2,608.91 ಕೋಟಿ ರೂ. ಬಾಕಿ ಉಳಿದುಕೊಂಡಿದೆ. ಸರ್ಕಾರ 2023ನೇ ಸಾಲಿನಲ್ಲಿ ಶೇ.50 ರಿಯಾಯಿತಿ ಘೋಷಿಸಿ ದಂಡ ಪಾವತಿಗೆ ಆದೇಶ ಮಾಡಿತ್ತು. ಈ ವೇಳೆ 2,64,85,640 ಪ್ರಕರಣಗಳ ಪೈಕಿ 63,15,014 ಕೇಸ್ಗಳನ್ನು ಇತ್ಯರ್ಥಪಡಿಸಿ 182.32 ಕೋಟಿ ರೂ. ದಂಡ ಸಂಗ್ರಹ ಮಾಡಲಾಗಿತ್ತ. 2024ನೇ ಸಾಲಿನಲ್ಲಿ 1,28,35,412 ಪ್ರಕರಣಗಳ ಪೈಕಿ 6.18 ಲಕ್ಷ ಇತ್ಯರ್ಥಪಡಿಸಿ 36.03 ಕೋಟಿ ರೂ. ದಂಡ ಸಂಗ್ರಹ ಮಾಡಲಾಗಿತ್ತು. ಪ್ರಸಕ್ತ ಸಾಲಿನಲ್ಲಿ (2025) ಸರ್ಕಾರ 21 ದಿನಗಳ ಕಾಲ ನೀಡಿದ್ದ ರಿಯಾಯಿತಿ ದಂಡ ಪಾವತಿ ವೇಳೆ 53,11,589 ಪ್ರಕರಣ ಖುಲಾಸೆಗೊಳಿಸಿ 144 ಕೋಟಿ ರೂ. ಸಂಗ್ರಹ ಮಾಡಿದೆ. ಬೆಂಗಳೂರು ನಗರದಲ್ಲಿ ಮಾತ್ರ 106 ಕೋಟಿ ರೂ. ಸಂಗ್ರಹವಾಗಿದೆ. ಇದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಐತಿಹಾಸಿಕ ಸಾಧನೆಯಾಗಿದೆ.
265 ಕೋಟಿ ರೂ. ಪರಿಹಾರ:
ಹಲವು ವರ್ಷಗಳಿಂದ ಬಾಕಿ ಇರುವ ಹಾಗೂ ನ್ಯಾಯಾಲಯದಲ್ಲಿ ನಡೆಯುತ್ತಿರುವ ರಸ್ತೆ ಅಪಘಾತ, ವಾಹನ ಸವಾರರು ಹಾಗೂ ಪಾದಚಾರಿಗಳ ಸಾವು ಸೇರಿ ಇತರ ರಸ್ತೆ ಅವಘಡ ಪ್ರಕರಣಗಳು ಲೋಕ ಅದಾಲತ್ನಲ್ಲಿ ಇತ್ಯರ್ಥಗೊಂಡಿವೆ. ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆ ಹಾಗೂ ಬಾಕಿ ಇದ್ದ 3,708 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಪರಿಹರಿಸಿ 265 ಕೋಟಿ ರೂ. ಪರಿಹಾರವನ್ನು ಸಂತ್ರಸ್ತರಿಗೆ ನೀಡಲಾಗಿದೆ.
ಸಂಚಾರ ನಿಯಮ ಉಲ್ಲಂಘನೆಯಿಂದಾಗಿ ರಾಜ್ಯದಲ್ಲಿ ಬಾಕಿ ಇರುವ 4,45,67,714 ಪ್ರಕರಣಗಳ ಪೈಕಿ 2023 ರಿಂದ 2025ರವರೆಗೆ ರಿಯಾಯಿತಿ ದರದಲ್ಲಿ 1.22 ಕೋಟಿ ಪ್ರಕರಣ ಇತ್ಯರ್ಥಗೊಂಡಿವೆ. ಆದರೂ 3,23,22,160 ಪ್ರಕರಗಳು ಬಾಕಿ ಉಳಿದುಕೊಂಡಿವೆ.
Karnataka has a staggering ₹2,608.91 crore pending in unpaid traffic fines from vehicle users who violated traffic rules across the state. Despite multiple awareness drives and penalty discount schemes, over 3.23 crore cases still remain unresolved.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am