ಬ್ರೇಕಿಂಗ್ ನ್ಯೂಸ್
18-09-25 05:34 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 18 : ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ವಾಹನ ಸವಾರರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ 2,608.91 ಕೋಟಿ ರೂ. ಬಾಕಿ ಬರಬೇಕಿದೆ! ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇತ್ತೀಚೆಗೆ ನಡೆಸಿದ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ 1.22 ಕೋಟಿ ಪ್ರಕರಣ ಇತ್ಯರ್ಥ ಗೊಳಿಸಿದೆ.
ಆದರೂ 2019 ರಿಂದ 2025 ರವರೆಗೆ 4.45 ಕೋಟಿ ಇ-ಚಲನ್ ಪ್ರಕರಣಗಳಿಂದ 2,608.91 ಕೋಟಿ ರೂ. ಬಾಕಿ ಉಳಿದುಕೊಂಡಿದೆ. ಸರ್ಕಾರ 2023ನೇ ಸಾಲಿನಲ್ಲಿ ಶೇ.50 ರಿಯಾಯಿತಿ ಘೋಷಿಸಿ ದಂಡ ಪಾವತಿಗೆ ಆದೇಶ ಮಾಡಿತ್ತು. ಈ ವೇಳೆ 2,64,85,640 ಪ್ರಕರಣಗಳ ಪೈಕಿ 63,15,014 ಕೇಸ್ಗಳನ್ನು ಇತ್ಯರ್ಥಪಡಿಸಿ 182.32 ಕೋಟಿ ರೂ. ದಂಡ ಸಂಗ್ರಹ ಮಾಡಲಾಗಿತ್ತ. 2024ನೇ ಸಾಲಿನಲ್ಲಿ 1,28,35,412 ಪ್ರಕರಣಗಳ ಪೈಕಿ 6.18 ಲಕ್ಷ ಇತ್ಯರ್ಥಪಡಿಸಿ 36.03 ಕೋಟಿ ರೂ. ದಂಡ ಸಂಗ್ರಹ ಮಾಡಲಾಗಿತ್ತು. ಪ್ರಸಕ್ತ ಸಾಲಿನಲ್ಲಿ (2025) ಸರ್ಕಾರ 21 ದಿನಗಳ ಕಾಲ ನೀಡಿದ್ದ ರಿಯಾಯಿತಿ ದಂಡ ಪಾವತಿ ವೇಳೆ 53,11,589 ಪ್ರಕರಣ ಖುಲಾಸೆಗೊಳಿಸಿ 144 ಕೋಟಿ ರೂ. ಸಂಗ್ರಹ ಮಾಡಿದೆ. ಬೆಂಗಳೂರು ನಗರದಲ್ಲಿ ಮಾತ್ರ 106 ಕೋಟಿ ರೂ. ಸಂಗ್ರಹವಾಗಿದೆ. ಇದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಐತಿಹಾಸಿಕ ಸಾಧನೆಯಾಗಿದೆ.
265 ಕೋಟಿ ರೂ. ಪರಿಹಾರ:
ಹಲವು ವರ್ಷಗಳಿಂದ ಬಾಕಿ ಇರುವ ಹಾಗೂ ನ್ಯಾಯಾಲಯದಲ್ಲಿ ನಡೆಯುತ್ತಿರುವ ರಸ್ತೆ ಅಪಘಾತ, ವಾಹನ ಸವಾರರು ಹಾಗೂ ಪಾದಚಾರಿಗಳ ಸಾವು ಸೇರಿ ಇತರ ರಸ್ತೆ ಅವಘಡ ಪ್ರಕರಣಗಳು ಲೋಕ ಅದಾಲತ್ನಲ್ಲಿ ಇತ್ಯರ್ಥಗೊಂಡಿವೆ. ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆ ಹಾಗೂ ಬಾಕಿ ಇದ್ದ 3,708 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಪರಿಹರಿಸಿ 265 ಕೋಟಿ ರೂ. ಪರಿಹಾರವನ್ನು ಸಂತ್ರಸ್ತರಿಗೆ ನೀಡಲಾಗಿದೆ.
ಸಂಚಾರ ನಿಯಮ ಉಲ್ಲಂಘನೆಯಿಂದಾಗಿ ರಾಜ್ಯದಲ್ಲಿ ಬಾಕಿ ಇರುವ 4,45,67,714 ಪ್ರಕರಣಗಳ ಪೈಕಿ 2023 ರಿಂದ 2025ರವರೆಗೆ ರಿಯಾಯಿತಿ ದರದಲ್ಲಿ 1.22 ಕೋಟಿ ಪ್ರಕರಣ ಇತ್ಯರ್ಥಗೊಂಡಿವೆ. ಆದರೂ 3,23,22,160 ಪ್ರಕರಗಳು ಬಾಕಿ ಉಳಿದುಕೊಂಡಿವೆ.
Karnataka has a staggering ₹2,608.91 crore pending in unpaid traffic fines from vehicle users who violated traffic rules across the state. Despite multiple awareness drives and penalty discount schemes, over 3.23 crore cases still remain unresolved.
29-12-25 11:13 pm
Bangalore Correspondent
ಡ್ರಗ್ಸ್ ಫ್ಯಾಕ್ಟರಿ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳಿ...
29-12-25 07:24 pm
ವ್ಯಾಪಕ ಭ್ರಷ್ಟಾಚಾರ ; ಕೋಲಾರದಲ್ಲಿ 25 ಗ್ರಾಪಂ ವಿರು...
28-12-25 09:03 pm
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 11:03 pm
Mangalore Correspondent
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
29-12-25 03:02 pm
Mangalore Correspondent
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm