ಬ್ರೇಕಿಂಗ್ ನ್ಯೂಸ್
19-09-25 09:45 am Bangalore Correspondent ಕರ್ನಾಟಕ
ಬೆಂಗಳೂರು, ಸೆ 19 : ಮೋಸದಿಂದಲೇ ಬಿಜೆಪಿ ಚುನಾವಣೆ ಗೆದ್ದಿದೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಾಡುತ್ತಿರುವ ಆರೋಪಕ್ಕೆ ಸ್ಪಷ್ಟ ಉತ್ತರ ಚುನಾವಣಾ ಆಯೋಗ ನೀಡಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವಾಗ್ದಾಳಿ ನಡೆಸಿದರು.
ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ ಅವರು, ಅಳಂದ ಪ್ರಕರಣ ಆಗಿ ಐದಾರು ವರ್ಷ ಆಯ್ತು. ಈ ವಿಚಾರವಾಗಿ ಎಸ್ ಐ ಟಿ ಯವರು ಚುನಾವಣಾ ಆಯೋಗಕ್ಕೆ ಸಾಕಷ್ಟು ಪತ್ರವನ್ನು ಬರೆದಿದ್ದಾರೆ. ಯಾವ ರೀತಿಯಲ್ಲಿ ಮತಗಳು ಡಿಲೀಟ್ ಆಗಿದೆ ಎಂದು ಪ್ರಶ್ನಿಸಿದ್ದರು. ಆದರೆ ಚುನಾವಣಾ ಆಯೋಗ ಉತ್ತರ ನೀಡಲಿಲ್ಲ ಎಂದು ವಿವರಿಸಿದರು.
ಬಿಹಾರದಲ್ಲಿ ಮೂರು ಲಕ್ಷ ಮನೆಗಳಿಗೆ ಜೀರೋ ನಂಬರ್ ಕೊಡಲಾಗಿದೆ. ಮೋಸದಿಂದಲೇ ನರೇಂದ್ರ ಮೋದಿ ಅವರು ಚುನಾವಣೆಯಲ್ಲಿ ಗೆಲ್ಲುತ್ತಿದ್ದರು. ಮತ ಕಳ್ಳತನದ ಮೂಲಕವೇ ಚುನಾವಣೆ ಗೆಲ್ಲುತ್ತಿದ್ದರು ಎಂದು ನೇರವಾಗಿ ಆರೋಪಿಸಿದರು.
ಚುನಾವಣಾ ಆಯೋಗ ನೇಮಕ ಮಾಡುವ ಪ್ರಕ್ರಿಯೆಯಲ್ಲಿ ಬದಲಾವಣೆ ಮಾಡಿದ್ದರು. ಅದರ ಹಿಂದಿರುವ ಉದ್ದೇಶ ಏನು? ಎಲ್ಲ ಸಂಸ್ಥೆಗಳನ್ನು ಇದೇ ರೀತಿಯಲ್ಲಿ ಬಳಕೆ ಮಾಡಲಾಗಿದೆ. ರಾಹುಲ್ ಗಾಂಧಿ ಆರೋಪಕ್ಕೆ ಸ್ಪಷ್ಟ ಉತ್ತರ ಚುನಾವಣಾ ಆಯೋಗ ನೀಡಿಲ್ಲ ಎಂದು ಕಿಡಿಕಾರಿದರು.
ಈಗ ಹೊಸತಾಗಿ ಪ್ರಧಾನಿ ಮೋದಿ ಅವರ ಕುರಿತಾದ ಸಿನಿಮಾ ನೋಡಬೇಕು. ಸಿನಿಮಾ ಈಗಾಗಲೇ ಹಿಂದಿನ ಪ್ರಧಾನಿಗಳು, ಭಗತ್ ಸಿಂಗ್, ಹೋರಾಟಗಾರು ಬಂದು ಹೋಗಿ ಆಯ್ತು. ಆದರೆ ಇವಾಗ ಕೊನೆಗೆ ಇವರ ಸಿನಿಮಾ ನೋಡಬೇಕಾಗಿದೆ. ಏನು ಸಾಧನೆ ಇದೆ ಗೊತ್ತಿಲ್ಲ. ಗೋಡಾ ಹೇ ಮೈದಾನ್ ಹೇ ಎಂಬಂತಾಗಿದೆ ಎಂದು ಕಿಡಿಕಾರಿದರು.
ದೇಶ ಹಾಳಾಗಿ ಹೋಗಬೇಕು. ಒಬ್ಬ ಮನುಷ್ಯ ಪ್ರಸಿದ್ದಿ ಆಗಬೇಕು. ಕೊಳ್ಳೆ ಹೊಡೆದು ಹೋಗಿ. ಪಿಚ್ಚರ್ ನಿಮ್ಮದೇ ಆಯ್ತು ಓಡಿಸಿ ಎಂದು ವ್ಯಂಗ್ಯವಾಗಿ ತರಾಟೆಗೆ ತೆಗೆದುಕೊಂಡರು.
ಅದಾನಿಗೆ ಒಂದು ರೂಪಾಯಿಗೆ ಒಂದು ಸಾವಿರ ಎಕರೆ ನೀಡಲಾಗಿದೆ. ಹತ್ತು ಲಕ್ಷ ಮ್ಯಾಂಗೋ ಪ್ಲ್ಯಾಂಟೇಷನ್ ಇದ್ದದ್ದನ್ನು ಅದಾನಿಗೆ ಕೊಡಲಾಗಿದೆ. ನಮ್ಮ ಸರ್ಕಾರಿ ಕಲ್ಲಿದ್ದಲು ಕಂಪನಿಗೆ ಏಕೆ ಕೊಡಬಾರದು. ಹೊಡಿರಿ ಪಿಚ್ಚರ್, ಮೋದಿ ಸಾಹೇಬ್ರೇ ಮಜಾ ಮಾಡಿ ಎಂದು ತರಾಟೆಗೆ ತೆಗೆದುಕೊಂಡರು.
Karnataka Labour Minister Santosh Lad has launched a scathing attack on the BJP, alleging that the party won elections through fraudulent means and accusing the Election Commission of maintaining silence over serious allegations made by Congress leader Rahul Gandhi.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm