ಬ್ರೇಕಿಂಗ್ ನ್ಯೂಸ್
20-09-25 02:59 pm HK News Desk ಕರ್ನಾಟಕ
ಹಾಸನ, ಸೆ.20 : ಇತ್ತೀಚೆಗೆ ಸೋಶಿಯಲ್ ಮೀಡಿಯಾಗಳ ಪ್ರಭಾವ ಹೆಚ್ಚುತ್ತಿದ್ದು ವಿಡಿಯೋದಿಂದ ಕೆಲವರಿಗೆ ಲಾಭ ಆಗಿದ್ದರೆ, ಇನ್ನು ಕೆಲವರು ಟ್ರೋಲ್ ಆಗಿ ಬರ್ಬಾದ್ ಆದವರೂ ಇದ್ದಾರೆ. ಹಾಸನದಲ್ಲಿ ಯುವಕನೊಬ್ಬ ಇದೇ ರೀತಿಯ ಟ್ರೋಲ್ ವಿಡಿಯೋಗೆ ಒಳಗಾಗಿ ಸಾವಿಗೀಡಾದ ಘಟನೆ ನಡೆದಿದೆ.
ಅರಕಲಗೂಡು ತಾಲೂಕಿನ ಮೊಸಳೆಹೊಸಳ್ಳಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ ಬಿಎ ವಿದ್ಯಾರ್ಥಿಯಾಗಿದ್ದ ಪವನ್ ಕೆ. (21) ಜೀವ ಕಳಕೊಂಡವ. ಸ್ನೇಹಿತೆಯರೊಂದಿಗೆ ಪಾರ್ಕ್ನಲ್ಲಿ ಕುಳಿತಿದ್ದಾಗ ಯುವತಿಯೊಬ್ಬಳು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಳು. ಇದರಿಂದ ಮನನೊಂದ ಆತ ಮನೆ ಬಳಿಯ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡ ಘಟನೆ ಹಾಸನದ ಕಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಂದೆ ಇಲ್ಲದ ಪವನ್ನನ್ನು ತಾಯಿ ಪುಟ್ಟಲಕ್ಷ್ಮೀ ಗಾರೆ ಕೆಲಸ ಮಾಡಿ ಸಾಕುತ್ತಿದ್ದಳು. ಮಗನನ್ನು ಕಳಕೊಂಡ ತಾಯಿಯ ಆಕ್ರಂದನ ಮುಗಿಲು ಮುಟ್ಟಿತ್ತು.
ಯುವತಿಯ ಕೈ ಹಿಡಿದು ಮಾತನಾಡುತ್ತಿದ್ದ ದೃಶ್ಯವನ್ನು ಅಪರಿಚಿತ ಯುವತಿಯೊಬ್ಬಳು ತನ್ನ ಮೊಬೈಲ್ನಲ್ಲಿ ಸೆರೆಹಿಡಿದಿದ್ದಳು. ನಂತರ ಅದನ್ನು ಇನ್ಸ್ಟಾಗ್ರಾಮ್ನಲ್ಲಿ ಹರಿಬಿಟ್ಟಿದ್ಧು ವಿಡಿಯೋ ವೈರಲ್ ಆಗಿತ್ತು. ವಿಡಿಯೋ ನೋಡಿ ಪವನ್ ಸ್ನೇಹಿತರು ಗೇಲಿ ಮಾಡಿದ್ದರು. ವಿಡಿಯೋಗೆ ಆ ಯುವತಿ ವ್ಯಂಗ್ಯದ ಮಾತುಗಳನ್ನು ಶೀರ್ಷಿಕೆ ಕೊಟ್ಟಿದ್ದಳು. ವಿಡಿಯೋವನ್ನು ಇನ್ಸ್ಟಾಗ್ರಾಮ್ನಿಂದ ತೆಗೆದುಹಾಕಲು ಪ್ರಯತ್ನಿಸಿದ್ದ ಜೀವನ್ ಅದು ಸಾಧ್ಯವಾಗದೆ ನೊಂದುಕೊಂಡಿದ್ದ. ಗುರುವಾರ ಕಾಲೇಜು ಮುಗಿಸಿ ಮನೆಗೆ ಹೋಗಿ ದನದ ಕೊಟ್ಟಿಗೆಯಲ್ಲಿ ನೇಣು ಹಾಕಿಕೊಂಡಿದ್ದಾನೆ. ಪವನ್ ಸಾವಿಗೆ ಕಾರಣಳಾದ ಯುವತಿಯನ್ನು ಬಂಧಿಸುವಂತೆ ಪೋಷಕರು ಆಗ್ರಹಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Hassan A 21-year-old BA final year student from Mosalehosahalli First Grade College in Arakalagudu taluk died by suicide after a video of him sitting with a girl in a park went viral on social media, reportedly leading to trolling and humiliation.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm