ಬ್ರೇಕಿಂಗ್ ನ್ಯೂಸ್
21-09-25 01:28 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.21 : ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ಅಕ್ರಮವಾಗಿ ಕೈಬಿಟ್ಟಿರುವ ಕುರಿತು ಆರೋಪ ಮಾಡಿರುವುದು ಸದ್ದು ಮಾಡಿರುವಾಗಲೇ ಕಲಬುರಗಿ ಜಿಲ್ಲೆ ಅಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತದಾರ ಪಟ್ಟಿಯಿಂದ ಹೆಸರುಗಳನ್ನು ತೆಗೆಯಲು ಮುಂದಾಗಿದ್ದ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿದೆ.
ಎಡಿಜಿಪಿ ಬಿ.ಕೆ.ಸಿಂಗ್ ಅವರನ್ನು ಎಸ್ಐಟಿ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಸಿಐಡಿ ಎಸ್ ಪಿಗಳಾದ ಸೈದುಲು ಅದಾವತ್, ಶುಭಾನ್ವಿತಾ ಅವರು ತಂಡದ ಸದಸ್ಯರಾಗಿದ್ದಾರೆ. ಉಳಿದಂತೆ ತನಿಖಾ ತಂಡಕ್ಕೆ ಅಗತ್ಯವಿರುವ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನೇಮಕ ಮಾಡಬೇಕಿದೆ.
ರಾಹುಲ್ ಗಾಂಧಿ ಅವರು ಇತ್ತೀಚೆಗೆ ಹೊಸದಿಲ್ಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಅಳಂದ ವಿಧಾನಸಭಾ ಕ್ಷೇತ್ರದ ಮತದಾರ ಪಟ್ಟಿಯಲ್ಲಿ ಅಕ್ರಮ ನಡೆದಿರುವ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದರು. ಜತೆಗೆ, ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಮತದಾರ ಪಟ್ಟಿಗೆ ಸಂಬಂಧಿಸಿದಂತೆ ಕೆಲವು ದತ್ತಾಂಶ ಒದಗಿಸುವಂತೆ ಚುನಾವಣಾ ಆಯೋಗಕ್ಕೆ 18 ಬಾರಿ ಪತ್ರ ಬರೆದಿದ್ದರೂ ಉತ್ತರ ಸಿಕ್ಕಿಲ್ಲ ಎಂದು ಆರೋಪಿಸಿದ್ದರು. ಇದರ ನಡುವೆಯೇ ಪ್ರಕರಣದ ತನಿಖೆಗೆ ರಾಜ್ಯ ಸರಕಾರ ಎಸ್ಐಟಿ ರಚಿಸಿದೆ. ಇದುವರೆಗೂ ತನಿಖೆ ನಡೆಸುತ್ತಿದ್ದ ಸಿಐಡಿ ಸೈಬರ್ ಪೊಲೀಸರ ತಂಡದಿಂದ ಎಸ್ಐಟಿಗೆ ಪ್ರಕರಣದ ಕಡತ ವರ್ಗಾವಣೆಯಾಗಲಿದೆ.
ಅಳಂದ ವಿಧಾನಸಭಾ ಕ್ಷೇತ್ರದ ಮತದಾರ ಪಟ್ಟಿಯಿಂದ 6,670 ಮತದಾರರನ್ನು ಅನಧಿಕೃತವಾಗಿ ಕೈ ಬಿಡಲಾಗಿದೆ ಎಂದು ಆರೋಪಿಸಿ ಬಿ.ಆರ್.ಪಾಟೀಲ್ ಅವರು 2023ರ ಚುನಾವಣೆಗೆ ಮುನ್ನ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಈ ದೂರನ್ನು ಗಂಭೀರ ಪರಿಗಣಿಸಿದ್ದ ಮತದಾರರ ನೋಂದಣಾಧಿಕಾರಿಯಾಗಿದ್ದ ಮಮತಾ ಕುಮಾರಿ ಹಾಗೂ ಇತರೆ ಅಧಿಕಾರಿಗಳು, ಆಂತರಿಕ ತನಿಖೆ ನಡೆಸಿದ್ದರು. ಆಗ ಮತದಾರರ ಪಟ್ಟಿಯಿಂದ 5,994 ಮತದಾರರ ಹೆಸರುಗಳನ್ನು ಅಕ್ರಮವಾಗಿ ಕೈಬಿಟ್ಟಿರುವುದು ಗೊತ್ತಾಗಿತ್ತು. ಹೀಗಾಗಿ, ಮಮತಾ ಕುಮಾರಿ ಅವರೇ ಈ ಬಗ್ಗೆ ತನಿಖೆ ನಡೆಸುವಂತೆ ಕೋರಿ ಅಳಂದ ಪೊಲೀಸರಿಗೆ ದೂರು ನೀಡಿದ್ದು, 2023ರ ಫೆಬ್ರವರಿಯಲ್ಲಿ ಎಫ್ಐಆರ್ ದಾಖಲಾಗಿತ್ತು. ಬಳಿಕ ಪ್ರಕರಣದ ತನಿಖೆಯು ಸಿಐಡಿಯ ಸೈಬರ್ ಪೊಲೀಸರಿಗೆ ವರ್ಗವಾಗಿತ್ತು.
The Karnataka government has constituted a Special Investigation Team (SIT) to probe allegations of large-scale voter list manipulation in the Aland Assembly constituency of Kalaburagi district. The move comes in the wake of Congress leader and Leader of Opposition in Lok Sabha, Rahul Gandhi, raising serious concerns about the illegal deletion of voters’ names.
22-09-25 07:07 pm
Bangalore Correspondent
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
22-09-25 06:58 pm
HK News Desk
ದೇಶಾದ್ಯಂತ ಬಿಹಾರ ಮಾದರಿ ಮತದಾರ ಪಟ್ಟಿ ಪರಿಷ್ಕರಣೆ ;...
22-09-25 10:50 am
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
22-09-25 10:08 pm
Mangalore Correspondent
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
ದೋಷಯುಕ್ತ ಇಲೆಕ್ಟ್ರಿಕ್ ವಾಹನ ; ಓಲಾ ಕಂಪನಿ ವಿರುದ್...
22-09-25 01:51 pm
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
22-09-25 08:16 pm
Mangalore Correspondent
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm