ಬ್ರೇಕಿಂಗ್ ನ್ಯೂಸ್
26-09-25 05:06 pm HK News Desk ಕರ್ನಾಟಕ
ಚಿಕ್ಕಮಗಳೂರು, ಸೆ.26 : ಭ್ರಷ್ಟಾಚಾರ, ಅಧಿಕಾರ ದುರ್ಬಳಕೆ, ಆದಾಯ ತೆರಿಗೆಯಲ್ಲಿ ವಂಚನೆ ಆರೋಪದಡಿಯಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ ಅವರ ವಿರುದ್ಧ ಚಿಕ್ಕಮಗಳೂರಿನ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.
ಪ್ರಕರಣದಲ್ಲಿ ಶಾಸಕ ರಾಜೇಗೌಡ ಅವರ ಪತ್ನಿ ಪುಷ್ಪಾ ಮತ್ತು ಮಗ ರಾಜ್ದೇವ್ ಅವರನ್ನೂ ಎಫ್ ಐಆರ್ ನಲ್ಲಿ ಸೇರಿಸಲಾಗಿದೆ. ರಾಜೇಗೌಡ ವಿರುದ್ಧ ಬಿಜೆಪಿ ಮುಖಂಡ ದಿನೇಶ್ ಹೆಚ್.ಕೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಶಾಸಕ ರಾಜೇಗೌಡ ಅವರು ತಮ್ಮ ಆದಾಯಕ್ಕಿಂತಲೂ ಹೆಚ್ಚು ಆಸ್ತಿ ಸಂಪಾದಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಇದೇ ಆರೋಪವನ್ನು ದಿನೇಶ್ ಅವರು ಲೋಕಾಯುಕ್ತ ಕಚೇರಿಗೂ ಸಲ್ಲಿಸಿದ್ದರು. ಲೋಕಾಯುಕ್ತರು ತನಿಖೆ ನಡೆಸಿ ವರದಿ ಸಲ್ಲಿಸಿದ್ದು ತನಿಖೆಯಲ್ಲಿ ಆರೋಪಗಳು ಸತ್ಯವೆಂದು ತಿಳಿದುಬಂದಿದೆ ಎನ್ನಲಾಗಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ದೂರನ್ನು ಗಂಭೀರ ಪರಿಗಣಿಸಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಗೆ (ಎಸ್ಪಿ) ತನಿಖೆಗೆ ಆದೇಶ ನೀಡಿತ್ತು. ನವೆಂಬರ್ 17ರೊಳಗೆ ತನಿಖಾ ವರದಿ ಸಲ್ಲಿಸಲು ನ್ಯಾಯಾಲಯ ತಿಳಿಸಿದೆ. ಈ ಆದೇಶದಂತೆ ಲೋಕಾಯುಕ್ತ ಕಚೇರಿ ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988ರ ಅನ್ವಯ ರಾಜೇಗೌಡ ಮತ್ತು ಅವರ ಕುಟುಂಬದ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಎಫ್ಐಆರ್ನಲ್ಲಿ ಸೆಕ್ಷನ್ 7 (ಎರಡು ವ್ಯಕ್ತಿಗಳ ನಡುವೆ ಲಾಭಕ್ಕಾಗಿ ಪ್ರಕಟಣೆ), 8 ( ಲಾಭಕ್ಕಾಗಿ ಕೃತ್ಯ), 13 (ಅಧಿಕಾರದ ದುರ್ಬಳಕೆಯಿಂದ ಆಸ್ತಿ ಗಳಿಕೆ), 120(B) (ಕುಟ್ರೆ), 420 (ಮೋಸ), 193 (ಸಾಕ್ಷಿ ಮೋಸ) ಮತ್ತು 200 (ತಪ್ಪು ದೂರು) ಅಡಿಯಲ್ಲಿ ಆರೋಪಗಳನ್ನು ಹೊರಿಸಲಾಗಿದೆ.
The Lokayukta Police in Chikkamagaluru have registered an FIR against Sringeri Congress MLA T.D. Rajegowda, his wife Pushpa, and son Rajdev, on charges of corruption, misuse of power, and tax evasion.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am