ಬ್ರೇಕಿಂಗ್ ನ್ಯೂಸ್
26-09-25 07:39 pm HK News Desk ಕರ್ನಾಟಕ
ಮೈಸೂರು, ಸೆ.26 : ಹಿರಿಯ ಸಾಹಿತಿ ಡಾ.ಎಸ್.ಎಲ್. ಭೈರಪ್ಪ ಅವರ ಅಂತ್ಯಸಂಸ್ಕಾರ ಶುಕ್ರವಾರ ಮಧ್ಯಾಹ್ನ 12:30ಕ್ಕೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರ ಭೂಮಿಯಲ್ಲಿ ನಡೆಯಿತು. ಪತ್ನಿ ಸರಸ್ವತಿ, ಕುಟುಂಬಸ್ಥರು, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಹಲವು ಗಣ್ಯರು ಸರಸ್ವತಿ ಪುತ್ರನಿಗೆ ಕಣ್ಣೀರಿನ ವಿದಾಯ ಹೇಳಿದರು.
ಪುತ್ರರಾದ ರವಿಶಂಕರ್, ಉದಯ್ ಶಂಕರ್ ಅಂತಿಮ ವಿಧಿ ವಿಧಾನ ನೆರವೇರಿಸಿದರು, ಭೈರಪ್ಪನವರ ಇಚ್ಛೆಯಂತೆ ಅಂತ್ಯ ಸಂಸ್ಕಾರದಲ್ಲಿ ಉದಯೋನ್ಮುಖ ಲೇಖಕಿ ಸಹನಾ ವಿಜಯ್ ಕುಮಾರ್ ಉಪಸ್ಥಿತರಿದ್ದರು. ಅಂತಿಮ ವಿಧಿ ವಿಧಾನಗಳ ಬಳಿಕ ಪುತ್ರರ ಜೊತೆಗೆ ಸಹನಾ ವಿಜಯ್ಕುಮಾರ್ ಭೈರಪ್ಪ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಅಲ್ಲಿಗೆ ಎಸ್.ಎಲ್ ಭೈರಪ್ಪ ಅವರ ದೇಹವು ಪಂಚಭೂತಗಳಲ್ಲಿ ಲೀನವಾಯಿತು.
![]()



ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಭೈರಪ್ಪ ಅವರ ಅಂತ್ಯ ಸಂಸ್ಕಾರ ನಡೆಯಿತು. ಪೊಲೀಸ್ ಅಧಿಕಾರಿ ಶಿವಾನಂದ ನೇತೃತ್ವದ ಹತ್ತು ಜನರ ತಂಡವು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸಲ್ಲಿಸಿತು. ನಿನ್ನೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅವರ ಪಾರ್ಥಿವ ಶರೀರವನ್ನು ಅಂತಿಮ ನಮನಕ್ಕೆ ಇರಿಸಲಾಗಿತ್ತು. ಅಂತಿಮ ದರ್ಶನ ಪಡೆದಿದ್ದ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಭೈರಪ್ಪನವರ ಪ್ರತಿಮೆ ಸ್ಥಾಪಿಸುವುದಾಗಿ ಹೇಳಿದ್ದರು.
ಇದಕ್ಕು ಮುನ್ನ ತನ್ನ ಅಂತ್ಯ ಸಂಸ್ಕಾರದ ಬಗ್ಗೆ ಭೈರಪ್ಪನವರು ವಿಲ್ ಬರೆದಿದ್ದಾರೆಂದು ಸುದ್ದಿ ಹಬ್ಬಿತ್ತು.ಅದರಲ್ಲಿ ತನ್ನ ಅಂತ್ಯಸಂಸ್ಕಾರವನ್ನು ಮಕ್ಕಳು ಮಾಡುವುದು ಬೇಡ, ಲೇಖಕಿ ಸಹನಾ ವಿಜಯಕುಮಾರ್ ಮಾಡಬೇಕು ಎಂದು ಬರೆದಿಡಲಾಗಿತ್ತು. ಈ ವಿಲ್ ಪ್ರತಿ ಜಾಲತಾಣದಲ್ಲಿ ಪ್ರಚಾರ ಪಡೆದಿತ್ತು. ಅವರ ಕೋರಿಕೆಯಂತೆ ಇಂದು ಇಬ್ಬರು ಪುತ್ರರ ಜೊತೆಗೆ ಸಹನಾ ಅವರೇ ಚಿತೆಗೆ ಅಗ್ನಿಸ್ಪರ್ಶ ಮಾಡಿದ್ದಾರೆ.
Renowned Kannada novelist Dr. S.L. Bhyrappa was cremated with full state honours on Friday afternoon at Rudrabhoomi, Chamundi Hill foothills, Mysuru. The final rites were performed at 12:30 PM in the presence of family members, dignitaries, and a large gathering of admirers.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am