ಬ್ರೇಕಿಂಗ್ ನ್ಯೂಸ್
30-09-25 03:58 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.30 : ರಾಯಚೂರು ಜಿಲ್ಲೆಗೆ ಗಡೀಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅಕ್ಟೋಬರ್ 8 ರ ವರೆಗೆ ಗಡಿಪಾರು ಆದೇಶ ಜಾರಿಗೊಳಿಸದಂತೆ ಕೊಂಚ ರಿಲೀಫ್ ನೀಡಲಾಗಿದೆ. ಅ.8ಕ್ಕೆ ವಿಚಾರಣೆ ಮುಂದೂಡಿದ್ದು ಅಲ್ಲಿಯ ವರೆಗೆ ಮಧ್ಯಂತರ ತಡೆ ನೀಡಿದೆ.
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಗೆ ಗಡಿಪಾರು ಮಾಡಿದ್ದ ಪುತ್ತೂರು ವಿಭಾಗಾಧಿಕಾರಿ, ಬಂಟ್ವಾಳ ಡಿವೈಎಸ್ಪಿ ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಬೆಳ್ತಂಗಡಿ ಠಾಣೆಯಲ್ಲಿ ಕಳೆದೊಂದು ತಿಂಗಳಲ್ಲಿ ದಾಖಲಾದ ನಾಲ್ಕು ಪ್ರಕರಣ ಸೇರಿ ಒಟ್ಟು 32 ಪ್ರಕರಣ ಎದುರಿಸುತ್ತಿದ್ದಾರೆಂದು ಮಹೇಶ್ ಶೆಟ್ಟಿ ಅವರನ್ನು ಗಡೀಪಾರು ಮಾಡಲು ಆದೇಶ ಮಾಡಲಾಗಿತ್ತು.
ತಿಮರೋಡಿ ಪರ ವಕೀಲರು ಗಡಿಪಾರು ಆದೇಶ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದು ಸಿ.ಎಂ.ಪುಣಚ್ಚ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ರಾಜ್ಯ ಸರ್ಕಾರ, ಪುತ್ತೂರು ಎಸಿ, ಡಿವೈಎಸ್ಪಿ ಬಂಟ್ವಾಳ, ಬೆಳ್ತಂಗಡಿ ಇನ್ಸ್ ಪೆಕ್ಟರ್ ಅವರನ್ನು ಪ್ರತಿವಾದಿಯಾಗಿಸಲಾಗಿತ್ತು.
ಸೆ.18ರಂದು ಪುತ್ತೂರು ಎಸಿ ಸ್ಟೆಲ್ಲಾ ವರ್ಗೀಸ್ ಅವರು 18-09-2025 ರಿಂದ 17-09-2026 ರ ವರೆಗೆ ಒಂದು ವರ್ಷ ಅವಧಿಗೆ ಮಹೇಶ್ ಶೆಟ್ಟಿ ಅವರನ್ನು ಗಡೀಪಾರು ಮಾಡಿ ಆದೇಶ ಹೊರಡಿಸಿದ್ದರು. ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ಸರಹದ್ದಿಗೆ ಗಡಿಪಾರು ಮಾಡಲು ಆದೇಶ ಮಾಡಲಾಗಿತ್ತು.
The Karnataka High Court has granted interim relief to Mahesh Shetty Timarodi, staying the externment order issued against him to Raichur district until October 8. Notices have been served to Puttur Assistant Commissioner, Bantwal DySP, and others who passed the order citing multiple criminal cases, including four recent ones in Belthangady. The matter will be heard again on October 8.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am