ಬ್ರೇಕಿಂಗ್ ನ್ಯೂಸ್
04-10-25 09:18 pm HK News Desk ಕರ್ನಾಟಕ
ಬೆಳಗಾವಿ/ಸಿಂಧುದುರ್ಗ, ಅ 04 : ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ವೆಂಗುರ್ಲಾ ತಾಲೂಕಿನ ಶಿರೋಡಾದ ವೇಳಾಗರ ಬೀಚಿನಲ್ಲಿ ಸಮುದ್ರದ ತೆರೆಗಳ ಅಬ್ಬರಕ್ಕೆ ಸಿಲುಕಿ ಬೆಳಗಾವಿ ಜಿಲ್ಲೆಯ ನಾಲ್ವರು ಸೇರಿ ಏಳು ಮಂದಿ ಜಲಸಮಾಧಿಯಾಗಿದ್ದಾರೆ.
ಮೃತಪಟ್ಟವರಲ್ಲಿ ನಾಲ್ವರು ಖಾನಾಪುರ ತಾಲೂಕಿನ ಲೋಂಡಾ ಗ್ರಾಮದವರು, ಒಬ್ಬರು ಧಾರವಾಡ ಜಿಲ್ಲೆಯ ಅಳ್ನಾವರ ಪಟ್ಟಣದವರು. ಮತ್ತಿಬ್ಬರು ಮಹಾರಾಷ್ಟ್ರದವರು ಎಂದು ತಿಳಿದು ಬಂದಿದೆ. ಇವರ ಜೊತೆಗೆ ನಾಪತ್ತೆಯಾಗಿದ್ದ ನಾಲ್ವರು ಸುರಕ್ಷಿತವಾಗಿ ಮರಳಿರುವ ಮಾಹಿತಿ ಲಭ್ಯವಾಗಿದೆ.
ಮೃತಪಟ್ಟವರ ವಿವರ ಹೀಗಿದೆ :
ಲೋಂಡಾದ ಇರ್ಫಾನ್ ಇಸಾಕ್ ಕಿತ್ತೂರ (35), ಇರ್ಫಾನ್ ಪತ್ನಿ ಫರಿನಾ ಕಿತ್ತೂರ (31), ಇವರ ಪುತ್ರ ಇಬಾದ್ ಇರ್ಫಾನ್ ಕಿತ್ತೂರ (12) ಹಾಗೂ ಇರ್ಫಾನ್ ಅವರ ತಮ್ಮನ ಮಗ ಇಕ್ವಾನ್ ಇಮ್ರಾನ್ ಕಿತ್ತೂರ್ (15), ಅಳ್ನಾವರ ಮೂಲದ ನಮೀರಾ ಅಕ್ತರ್ (16), ಮಹಾರಾಷ್ಟ್ರದ ಪರಯಾನ್ ಮನಿಯರ್ (20) ಹಾಗೂ ಜಾಕೀರ್ ಮನಿಯರ್ (13) ಮೃತಪಟ್ಟವರು ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
ದಡದ ಬಳಿ ನಾಲ್ವರು ಪತ್ತೆ :
ಸಮುದ್ರದಲ್ಲಿ ಕಾಣೆಯಾಗಿದ್ದ ಇಮ್ರಾನ್ ಇಸಾಕ್ ಕಿತ್ತೂರ (37), ಜಬಿನ್ ಇಮ್ರಾನ್ ಕಿತ್ತೂರ (32), ಇಜಾನ್ ಇಮ್ರಾನ್ ಕಿತ್ತೂರ (10) ಹಾಗೂ ಇಸ್ರಾ ಇಮ್ರಾನ್ ಕಿತ್ತೂರ (17) ಅವರು ಶನಿವಾರ ನಸುಕಿನ ಜಾವ ಸಮುದ್ರ ದಂಡೆಯ ಮೇಲೆ ನಿತ್ರಾಣ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೂಡಲೇ ಅವರಿಗೆ ಸಿಂಧದುರ್ಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಲೋಂಡಾ ಗ್ರಾಮದ ಒಂದೇ ಕುಟುಂಬದ 8 ಜನ ಸಂಬಂಧಿಗಳು ಶುಕ್ರವಾರ ದಸರಾ ರಜೆ ಹಿನ್ನೆಲೆಯಲ್ಲಿ ಶಿರೋಡಾದ ವೇಳಾಗರ ಬೀಚಿಗೆ ತೆರಳಿದ್ದರು. ಸಂಜೆ 4ರ ಸುಮಾರಿಗೆ ಎಲ್ಲರೂ ಸಮುದ್ರದ ನೀರಿನೊಳಗೆ ಆಟವಾಡುತ್ತ ಹೋದರು. ಇದ್ದಕ್ಕಿದ್ದಂತೆ ದೊಡ್ಡ ತೆರೆಗಳು ಅಪ್ಪಳಿಸಿ ಇವರನ್ನು ಒಳಕ್ಕೆ ಎಳೆದುಕೊಂಡು ಹೋಗಿದ್ದರಿಂದ ದುರಂತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.
ಮಹಾರಾಷ್ಟ್ರದ ಸಾವಂತವಾಡಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹಗಳನ್ನು ಲೋಂಡಾಗೆ ಸಾಗಿಸಲಾಗುತ್ತದೆ ಎಂದು ಖಾನಾಪುರ ಪೊಲೀಸರು ತಿಳಿಸಿದ್ದಾರೆ.
A holiday turned into a nightmare when massive waves at Velagar beach in Sindhudurg district, Maharashtra, claimed the lives of seven people, including five from Karnataka. Among the deceased were four members of a family from Londa village, Belagavi, and one from Alnavar, along with two from Maharashtra.
29-12-25 11:13 pm
Bangalore Correspondent
ಡ್ರಗ್ಸ್ ಫ್ಯಾಕ್ಟರಿ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳಿ...
29-12-25 07:24 pm
ವ್ಯಾಪಕ ಭ್ರಷ್ಟಾಚಾರ ; ಕೋಲಾರದಲ್ಲಿ 25 ಗ್ರಾಪಂ ವಿರು...
28-12-25 09:03 pm
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 11:03 pm
Mangalore Correspondent
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
29-12-25 03:02 pm
Mangalore Correspondent
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm