ಬ್ರೇಕಿಂಗ್ ನ್ಯೂಸ್
04-10-25 09:18 pm HK News Desk ಕರ್ನಾಟಕ
ಬೆಳಗಾವಿ/ಸಿಂಧುದುರ್ಗ, ಅ 04 : ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ವೆಂಗುರ್ಲಾ ತಾಲೂಕಿನ ಶಿರೋಡಾದ ವೇಳಾಗರ ಬೀಚಿನಲ್ಲಿ ಸಮುದ್ರದ ತೆರೆಗಳ ಅಬ್ಬರಕ್ಕೆ ಸಿಲುಕಿ ಬೆಳಗಾವಿ ಜಿಲ್ಲೆಯ ನಾಲ್ವರು ಸೇರಿ ಏಳು ಮಂದಿ ಜಲಸಮಾಧಿಯಾಗಿದ್ದಾರೆ.
ಮೃತಪಟ್ಟವರಲ್ಲಿ ನಾಲ್ವರು ಖಾನಾಪುರ ತಾಲೂಕಿನ ಲೋಂಡಾ ಗ್ರಾಮದವರು, ಒಬ್ಬರು ಧಾರವಾಡ ಜಿಲ್ಲೆಯ ಅಳ್ನಾವರ ಪಟ್ಟಣದವರು. ಮತ್ತಿಬ್ಬರು ಮಹಾರಾಷ್ಟ್ರದವರು ಎಂದು ತಿಳಿದು ಬಂದಿದೆ. ಇವರ ಜೊತೆಗೆ ನಾಪತ್ತೆಯಾಗಿದ್ದ ನಾಲ್ವರು ಸುರಕ್ಷಿತವಾಗಿ ಮರಳಿರುವ ಮಾಹಿತಿ ಲಭ್ಯವಾಗಿದೆ.
ಮೃತಪಟ್ಟವರ ವಿವರ ಹೀಗಿದೆ :
ಲೋಂಡಾದ ಇರ್ಫಾನ್ ಇಸಾಕ್ ಕಿತ್ತೂರ (35), ಇರ್ಫಾನ್ ಪತ್ನಿ ಫರಿನಾ ಕಿತ್ತೂರ (31), ಇವರ ಪುತ್ರ ಇಬಾದ್ ಇರ್ಫಾನ್ ಕಿತ್ತೂರ (12) ಹಾಗೂ ಇರ್ಫಾನ್ ಅವರ ತಮ್ಮನ ಮಗ ಇಕ್ವಾನ್ ಇಮ್ರಾನ್ ಕಿತ್ತೂರ್ (15), ಅಳ್ನಾವರ ಮೂಲದ ನಮೀರಾ ಅಕ್ತರ್ (16), ಮಹಾರಾಷ್ಟ್ರದ ಪರಯಾನ್ ಮನಿಯರ್ (20) ಹಾಗೂ ಜಾಕೀರ್ ಮನಿಯರ್ (13) ಮೃತಪಟ್ಟವರು ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
ದಡದ ಬಳಿ ನಾಲ್ವರು ಪತ್ತೆ :
ಸಮುದ್ರದಲ್ಲಿ ಕಾಣೆಯಾಗಿದ್ದ ಇಮ್ರಾನ್ ಇಸಾಕ್ ಕಿತ್ತೂರ (37), ಜಬಿನ್ ಇಮ್ರಾನ್ ಕಿತ್ತೂರ (32), ಇಜಾನ್ ಇಮ್ರಾನ್ ಕಿತ್ತೂರ (10) ಹಾಗೂ ಇಸ್ರಾ ಇಮ್ರಾನ್ ಕಿತ್ತೂರ (17) ಅವರು ಶನಿವಾರ ನಸುಕಿನ ಜಾವ ಸಮುದ್ರ ದಂಡೆಯ ಮೇಲೆ ನಿತ್ರಾಣ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೂಡಲೇ ಅವರಿಗೆ ಸಿಂಧದುರ್ಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಲೋಂಡಾ ಗ್ರಾಮದ ಒಂದೇ ಕುಟುಂಬದ 8 ಜನ ಸಂಬಂಧಿಗಳು ಶುಕ್ರವಾರ ದಸರಾ ರಜೆ ಹಿನ್ನೆಲೆಯಲ್ಲಿ ಶಿರೋಡಾದ ವೇಳಾಗರ ಬೀಚಿಗೆ ತೆರಳಿದ್ದರು. ಸಂಜೆ 4ರ ಸುಮಾರಿಗೆ ಎಲ್ಲರೂ ಸಮುದ್ರದ ನೀರಿನೊಳಗೆ ಆಟವಾಡುತ್ತ ಹೋದರು. ಇದ್ದಕ್ಕಿದ್ದಂತೆ ದೊಡ್ಡ ತೆರೆಗಳು ಅಪ್ಪಳಿಸಿ ಇವರನ್ನು ಒಳಕ್ಕೆ ಎಳೆದುಕೊಂಡು ಹೋಗಿದ್ದರಿಂದ ದುರಂತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.
ಮಹಾರಾಷ್ಟ್ರದ ಸಾವಂತವಾಡಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹಗಳನ್ನು ಲೋಂಡಾಗೆ ಸಾಗಿಸಲಾಗುತ್ತದೆ ಎಂದು ಖಾನಾಪುರ ಪೊಲೀಸರು ತಿಳಿಸಿದ್ದಾರೆ.
A holiday turned into a nightmare when massive waves at Velagar beach in Sindhudurg district, Maharashtra, claimed the lives of seven people, including five from Karnataka. Among the deceased were four members of a family from Londa village, Belagavi, and one from Alnavar, along with two from Maharashtra.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am