ಮಕ್ಕಳ ಸಿರಪ್ ; ರಾಜ್ಯದಲ್ಲಿ ಪೂರೈಕೆ ಇಲ್ಲ, ಆತಂಕ ಪಡುವ ಅಗತ್ಯವಿಲ್ಲ ; ದಿನೇಶ್ ಗುಂಡೂರಾವ್ 

04-10-25 10:54 pm       Bangalore Correspondent   ಕರ್ನಾಟಕ

ಬೇರೆ ರಾಜ್ಯಗಳಲ್ಲಿ ಮಕ್ಕಳ ಸಾವಿಗೆ ಕಾರಣವಾಗಿರುವ ಸಿರಪ್‌ನ ಬಗ್ಗೆ ನಿಗಾ ವಹಿಸುವಂತೆ ನಮ್ಮ ರಾಜ್ಯದ ಔಷಧ ನಿಯಂತ್ರಣ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ನಮ್ಮ ರಾಜ್ಯಕ್ಕೆ ಆ ಸಿರಪ್‌ನ ಪೂರೈಕೆ ಇಲ್ಲ. ಹೀಗಾಗಿ ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. 

ಬೆಂಗಳೂರು, ಅ.4 : ಬೇರೆ ರಾಜ್ಯಗಳಲ್ಲಿ ಮಕ್ಕಳ ಸಾವಿಗೆ ಕಾರಣವಾಗಿರುವ ಸಿರಪ್‌ನ ಬಗ್ಗೆ ನಿಗಾ ವಹಿಸುವಂತೆ ನಮ್ಮ ರಾಜ್ಯದ ಔಷಧ ನಿಯಂತ್ರಣ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ನಮ್ಮ ರಾಜ್ಯಕ್ಕೆ ಆ ಸಿರಪ್‌ನ ಪೂರೈಕೆ ಇಲ್ಲ. ಹೀಗಾಗಿ ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. 

ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, 'ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಈ ಸಿರಪ್‌ನ ಪೂರೈಕೆ ಇಲ್ಲ. ಆದರೆ ಖಾಸಗಿಯವರು ತರಿಸಿಕೊಳ್ಳುತ್ತಿದ್ದಾರೆಯೇ ಎಂಬುದರ ಬಗ್ಗೆ ಪರಿಶೀಲನೆ ನಡೆಸಿ ಎಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ' ಎಂದರು.

ಬೇರೆಲ್ಲಾ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಔಷಧಗಳ ಪರೀಕ್ಷೆ ಹೆಚ್ಚಾಗಿ ನಡೆಯುತ್ತದೆ. ಈ ವಿಚಾರದಲ್ಲಿ ಕರ್ನಾಟಕದ ಮಾದರಿಯನ್ನು ಅನುಸರಿಸಿ ಎಂದು ಕೇಂದ್ರವು ಇತರ ರಾಜ್ಯಗಳಿಗೆ ಸಲಹೆ ನೀಡಿದೆ ಎಂದರು. ಎಲ್ಲ ರಾಜ್ಯಗಳಲ್ಲಿ ನಡೆಯುವ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗುವ ಔಷಧಗಳನ್ನು ಕೇಂದ್ರದ ಜಾಲತಾಣದಲ್ಲಿ ಪ್ರಕಟಿಸಲಾಗುತ್ತಿದೆ. ಆದರೆ, ಅಂತಹ ಪ್ರಕಟಣೆಗಳನ್ನು ತಕ್ಷಣವೇ ಎಲ್ಲ ರಾಜ್ಯಗಳ ಗಮನಕ್ಕೆ ತರುವ ವ್ಯವಸ್ಥೆಯಾಗಬೇಕು‌ ಎಂದು ಒತ್ತಾಯಿಸಿದರು.

Amid reports from other states linking a children’s syrup to fatalities, Karnataka Health Minister Dinesh Gundu Rao assured parents that there is no supply of the syrup in the state. Speaking to reporters in Bengaluru, he said government hospitals in Karnataka do not stock the syrup and drug control officials have been instructed to check if it has been brought in by private suppliers.